Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...