Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಬಿಜೆಪಿ ಶಾಸಕ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...