Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...