Homeಫ್ಯಾಕ್ಟ್‌ಚೆಕ್ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಗಾಂಧಿ ಕುಟುಂಬ ಸಿಂಗ್‌ ಅವರಿಗೆ ಅಗೌರವ ತೋರಿಸಿತ್ತೆ? ಹಳೆಯ ಪೋಟೋಗಳ ಅಸಲಿ ಕಥೆಯೇನು?

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು (ಸೆ.26) ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗಿದೆ.

- Advertisement -
- Advertisement -

ಸೆಪ್ಟೆಂಬರ್‌ 26ರಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಜನ್ಮದಿನದಂದು ಹಳೆಯ ಪೋಟೋಗಳಿಗೆ ಅಪಾರ್ಥ ಕಲ್ಪಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಅನೇಕರು, “ಗಾಂಧಿ ಕುಟುಂಬ ಮನಮೋಹನ ಸಿಂಗ್‌ ಅವರಿಗೆ ಅಗೌರವ ತೋರಿಸಿದೆ” ಎಂದು ಬಿಂಬಿಸಲು ಯತ್ನಿಸಿದ್ದಾರೆ. ಬಿಜೆಪಿ ಬೆಂಬಲಿಗರು ಈ ಪೋಟೋಗಳನ್ನು ಹಂಚಿಕೊಂಡಿದ್ದಾರೆ. ರಿಶಿ ಭಾಗ್ರೀ ಎನ್ನುವ ಬಿಜೆಪಿ ಬೆಂಬಲಿಗರು ಹಂಚಿಕೊಂಡಿರುವ ಪೋಟೋಗಳನ್ನು ನೋಡಿರಿ.

ಈ ರೀತಿಯ ಪೋಟೋಗಳನ್ನು ಭಾಗ್ರಿಯವರು 2018 ಮತ್ತು 2020ರಲ್ಲೂ ಹಂಚಿಕೊಂಡಿದ್ದಾರೆ. ಈ ಪೋಟೋಗಳನ್ನು ಹೊರತುಪಡಿಸಿ, ಸೋನಿಯಾ ಗಾಂಧಿಯವರು ಮನಮೋಹನ್‌ ಸಿಂಗ್‌ ಅವರಿಗೆ ನಮಸ್ಕರಿಸದೆ ನಡೆದ ಹದಿನೈದು ಸೆಕೆಂಡ್‌ಗಳ ವಿಡಿಯೋವನ್ನು ಅನೇಕರು ಹಂಚಿಕೊಂಡಿದ್ದಾರೆ.

ಈ ವಿಡಿಯೋ ಹಲವು ವರ್ಷಗಳಿಂದ ಹರಿದಾಡುತ್ತಿದೆ. ಇದನ್ನು ಕರ್ನಾಟಕದ ಬಿಜೆಪಿಯ ಅಧಿಕೃತ ಟ್ವಿಟ್ಟರ್‌ ಖಾತೆಯಲ್ಲೂ ಹಂಚಿಕೊಳ್ಳಲಾಗಿದೆ. ಬಿಜೆಪಿ ಬೆಂಬಲಿಗರಾದ ರಿತು ಹಾಗೂ ಮಹೇಶ್‌ ವಿಕ್ರಂ ಹೆಗ್ಡೆ ಕೂಡ ಹಂಚಿಕೊಂಡಿದ್ದಾರೆ. ಇವುಗಳ ಸತ್ಯಾಸತ್ಯತೆಯನ್ನು ‘ಆಲ್ಟ್‌ ನ್ಯೂಸ್’ ಬಯಲು ಮಾಡಿದೆ.

ಸತ್ಯಾಂಶವೇನು?

ಚಿತ್ರ 1

ನವೆಂಬರ್‌ 23, 2017ರಂದು ಶ್ರೀಲಂಕದ ಪ್ರಧಾನಿ ರಾನಿಲ್‌ ವಿಕ್ರಮ್‌ಸಿಂಘೇ ಅವರನ್ನು ಭೇಟಿಯಾದಾಗ ಪೋಟೋಗ್ರಾಪರ್ ಕ್ಲಿಕ್ಕಿಸಿರುವ ಚಿತ್ರಗಳಿವು.

ಈ ಕಾರ್ಯಕ್ರಮ ನಡೆದಾಗ ಮನಮೋಹನ್‌ ಸಿಂಗ್‌ ಪ್ರಧಾನಿಯಾಗಿರಲಿಲ್ಲ. ಸೋನಿಯಾಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ವಿರೋಧ ಪಕ್ಷದ ನಾಯಕರನ್ನು ಶ್ರೀಲಂಕಾ ಪ್ರಧಾನಿ ಭೇಟಿಯಾಗಿದ್ದರು.

ಚಿತ್ರ 2

ಅಕ್ಟೋಬರ್‌ 6, 2019ರಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನಸಿಂಗ್‌ ಅವರನ್ನು ಭೇಟಿಯಾದಾಗ ತೆಗೆದ ಪೋಟೋವಿದು. ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಸೋನಿಯಾ ಗಾಂಧಿಯವರು ಸಿಂಗ್‌ ಅವರನ್ನು ಮೂಲೆಗೆ ತಳ್ಳಿದ್ದು ಹೀಗೆ ಎಂದು ಈ ಹಿಂದೆಯೂ ಈ ಫೋಟೋ ಹರಿದಾಡಿದಾಗ  ಆಲ್ಟ್‌ ನ್ಯೂಸ್ ಈ ಫೋಟೋದ ಹಿಂದಿನ ಕಾರಣವನ್ನು ತಿಳಿಸಿತ್ತು.

ಚಿತ್ರ 3

ರಾಷ್ಟ್ರಪತಿ ಚುನಾವಣೆ ಸಂದರ್ಭದಲ್ಲಿ 2012ರ ಜುಲೈ 19ರಂದು ಈ ಪೋಟೋವನ್ನು ತೆಗೆಯಲಾಗಿದೆ. ಮನಮೋಹನ್ ಸಿಂಗ್‌ ಅವರು ಮತದಾನ ಮಾಡುತ್ತಿರುವುದನ್ನು ಎಪಿ ಹಾಗೂ ಗೆಟ್ಟಿ ಪೋಟೋಗ್ರಫಿಯಲ್ಲೂ ಕಾಣಬಹುದು.

 

ಈ ಕುರಿತ ವಿಡಿಯೋವನ್ನೂ ಆಲ್ಟ್‌ನ್ಯೂಸ್ ಪತ್ತೆ ಹಚ್ಚಿದೆ.

ಚಿತ್ರ 4

2014, ಜನವರಿ 17ರಂದು ಎಐಸಿಸಿ ಅಧಿವೇಶನದಲ್ಲಿ ತಾಳ್‌ಕೋಟ್ರಾ ಸ್ಟೇಡಿಯಂನಲ್ಲಿ ಧ್ವಜಾರೋಹಣ ಮಾಡಿದ ವೇಳೆ ಮೇಲೆ ತೆಗೆದ ಫೋಟೋವಿದು. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ವಿಡಿಯೊವನ್ನು ಜೀ ನ್ಯೂಸ್‌ ತನ್ನ ಯೂಟ್ಯೂಬ್‌ ಚಾನೆಲ್‌ನಲ್ಲೂ ಪ್ರಸಾರ ಮಾಡಿದೆ. ರಾಹುಲ್‌ ಗಾಂಧಿಯವರ ಪಕ್ಕದಲ್ಲಿ ನಿಂತಿದ್ದ ಸುಶೀಲ್‌ ಕುಮಾರ್‌ ಸಿಂಧೆಯವರಿಗೆ ಮನಮೋಹನ ಸಿಂಗ್‌ ಅವರು ನಮಸ್ಕರಿಸುವುದನ್ನು ಕಾಣಬಹುದು. ಸಿಂಗ್‌ ಅವರು ನಮಸ್ಕರಿಸುವುದನ್ನು ರಾಹುಲ್‌ ಗಾಂಧಿಯವರು ಗಮನಿಸಿಯೇ ಇಲ್ಲ. ಅದೇ ಸಂದರ್ಭದಲ್ಲಿ ಅವರು ಹಾರವನ್ನು ತೆಗೆಯುತ್ತಿರುವುದನ್ನು  ಫೋಟೋಗ್ರಾಫರ್‌ ಕ್ಲಿಕ್ಕಿಸಿದ್ದಾನೆ. ಆದರೆ ಇದನ್ನೇ ರಾಹುಲ್‌ ಗಾಂಧಿಯವರು ಮನಮೋಹನ ಸಿಂಗ್ ಅವರಿಗೆ ಅಗೌರವ ತೋರಿಸಿದರು ಎಂಬಂತೆ ಬಿಂಬಿಸಲಾಗಿದೆ. ಸಿಂಗ್‌ ಅವರು ನಮಸ್ಕರಿಸಿರುವುದು ಶಿಂಧೆಯವರಿಗೆ ಎಂಬುದು ಇಲ್ಲಿನ ವಿಡಿಯೋದಲ್ಲಿ ಸ್ಪಷ್ಟವಾಗುತ್ತದೆ.

ಸೋನಿಯಾ ಗಾಂಧಿಯವರು ಮನಮೋಹನ ಸಿಂಗ್ ಅವರನ್ನು ಗೌರವಿಸುತ್ತಿಲ್ಲ ಎಂದು ಹರಿದಾಡುತ್ತಿರುವ ವಿಡಿಯೋದ ಸತ್ಯಾಸತ್ಯತೆಯೂ ಇದೇ ಕಾರ್ಯಕ್ರಮಕ್ಕೆ ಸಂಬಂಧಿಸಿದ್ದಾಗಿದೆ.

ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಸೋನಿಯಾ ಗಾಂಧಿಯವರ ಈ ವಿಡಿಯೋ ನೋಡಿದರೆ ಅವರು ಮನಮೋಹನಸಿಂಗ್ ಅವರನ್ನು ನಿರ್ಲಕ್ಷಿಸಿದ್ದಾರೆ ಎನಿಸುವುದಿಲ್ಲ. ಸನ್ನಿವೇಶ ಹಾಗೂ ಉದ್ದೇಶವನ್ನು ಅರ್ಥ ಮಾಡಿಕೊಳ್ಳಬೇಕಿದೆ. ವಿಡಿಯೋವನ್ನು ಪೂರ್ಣ ವೀಕ್ಷಿಸಿದರೆ ಸೋನಿಯಾ ಗಾಂಧಿಯವರು ಇದೇ ಕಾರ್ಯಕ್ರಮದಲ್ಲಿ ಮನಮೋಹನ ಸಿಂಗ್ ಅವರಿಗೆ ನಮಸ್ಕರಿಸುತ್ತಿರುವುದನ್ನೂ ಕಾಣಬಹುದು.

ಕೃಪೆ: ಆಲ್ಟ್‌ ನ್ಯೂಸ್‌


ಇದನ್ನೂ ಓದಿರಿ: ಫ್ಯಾಕ್ಟ್ ಚೆಕ್: ಮೋದಿ ಕೊನೆಯ ಭರವಸೆಯೆಂದು ನ್ಯೂಯಾರ್ಕ್ ಟೈಮ್ಸ್ ಪ್ರಕಟಿಸಿಲ್ಲ, ಇದು ಎಡಿಟ್ ಫೋಟೊ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...