Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...