Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...

ಬೆಂಗಳೂರಿನಲ್ಲಿ ಮುಂದುವರೆದ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ: ಯುಬಿ ಸಿಟಿಯ ಹೋಟೆಲ್‌ಗಳಲ್ಲಿ ಕೊಳೆತ ಮಾಂಸ ಪತ್ತೆ!

'ಆಹಾರ ಸುರಕ್ಷತೆ ಇಲಾಖೆ ಮತ್ತು ಔಷಧಿ ಆಡಳಿತ ಇಲಾಖೆ'ಯ ಆಹಾರ ಸುರಕ್ಷತೆಗೆ ವಿಶೇಷ ಕಾರ್ಯಾಚರಣೆ ಮುಂದುವರೆದಿದ್ದು, ಬೆಂಗಳೂರಿನ ಯುಬಿ ಸಿಟಿಯ ಐದು ಪ್ರಮುಖ ಹೋಟೆಲ್‌ಗಳ ಅಡುಗೆ ಮನೆಗಳ ಮೇಲೆ ಅಧಿಕಾರಿಗಳು ಇಂದು (ಆ.10)...

ಮತಗಳ್ಳತನದ ವಿರುದ್ಧ ‘ಕ್ವಿಟ್ ವೋಟ್ ಚೋರಿ’ ಆಂದೋಲನಕ್ಕೆ ಕರೆ ನೀಡಿದ ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ದೇಶದಲ್ಲಿ ನಡೆಯುತ್ತಿರುವ 'ಮತ ಕಳ್ಳತನ'ವನ್ನು ತಡೆಗಟ್ಟಲು ಕ್ವಿಟ್ ಇಂಡಿಯಾ ಚಳವಳಿಯ ಮಾದರಿಯಲ್ಲೇ ದೇಶಾದ್ಯಂತ 'ಕ್ವಿಟ್ ವೋಟ್ ಚೋರಿ' (ಮತ ಬಿಟ್ಟು ತೊಲಗಿ) ಆಂದೋಲನವನ್ನು ಪ್ರಾರಂಭಿಸುವ ಅಗತ್ಯವಿದೆ ಎಂದು ಕರ್ನಾಟಕದ ಮುಖ್ಯಮಂತ್ರಿ ಡಿ.ಕೆ....

SIR ಅವಾಂತರ : ಎನ್ಯುಮರೇಷನ್ ಫಾರಂ ಸರಿಯಾಗಿ ತುಂಬಿಕೊಟ್ಟರೂ ಕರಡು ಪಟ್ಟಿಯಲ್ಲಿ ಹೆಸರಿಲ್ಲ; ಆತಂಕಗೊಂಡು ಮತಗಟ್ಟೆಗಳತ್ತ ಧಾವಿಸಿದ ಜನರು-ವರದಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಭಾಗವಾಗಿ ಪ್ರಕಟಗೊಂಡ ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದ ಕಾರಣ ಆತಂಕಗೊಂಡ ಜಾರ್ಖಂಡ್‌ನ ರಾಂಚಿ ನಗರದ ಜನರು ಭಾನುವಾರ (ಆ.9) ಮತಗಟ್ಟೆಗಳಿಗೆ...

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...