Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...