Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...