Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ದಲಿತರು, ಅಲ್ಪಸಂಖ್ಯಾತರ ಮೇಲಿನ ಹಿಂಸಾಚಾರದ ಕುರಿತು ವಿಶ್ವಸಂಸ್ಥೆಯ ಕಠಿಣ ಪ್ರಶ್ನೆ: ಸಂಶೋಧನಾತ್ಮಕ ವರದಿಗಳನ್ನು ಆಧರಿಸಿ ಭಾರತಕ್ಕೆ CERD ಚಾಟಿ

ನವದೆಹಲಿ: ಭಾರತದಲ್ಲಿ ದಲಿತರು, ಆದಿವಾಸಿಗಳು, ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳು ಎದುರಿಸುತ್ತಿರುವ ತಾರತಮ್ಯ, ಹಿಂಸೆ ಮತ್ತು ಹಕ್ಕುಗಳ ಉಲ್ಲಂಘನೆ ಕುರಿತು ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನೆ ಕುರಿತ ಸಮಿತಿ (CERD) ತೀವ್ರ...

ಪಶ್ಚಿಮ ಬಂಗಾಳ| ಕಳೆದ ಒಂದು ತಿಂಗಳಲ್ಲಿ ಕ್ರಿಶ್ಚಿಯನ್ನರ ಮೇಲೆ ಸತತ ದಾಳಿ

ಪಶ್ಚಿಮ ಬಂಗಾಳದ ಚರ್ಚ್ ಒಂದರ ಆವರಣದಲ್ಲಿರುವ ಸ್ಮಶಾನದಲ್ಲಿ ಮೃತರೊಬ್ಬರಿಗೆ ಕೊನೆಯ ವಿದಾಯ ಕೋರುತ್ತಿದ್ದ ಕ್ರಿಶ್ಚಿಯನ್ ಕುಟುಂಬದ ಮೇಲೆ ಹಿಂದುತ್ವ ಗುಂಪೊಂದು ದಾಳಿ ನಡೆಸಿದೆ ಎಂದು ಆರೋಪಿಸಲಾಗಿದೆ. ಈ ಘಟನೆಯು ಆಗಸ್ಟ್ 14 ರಂದು ಪೂರ್ಬ...

‘ನಮ್ಮ ರಕ್ತದಿಂದ ಅವರು ಬಾಯಾರಿಕೆಯನ್ನು ತಣಿಸಿಕೊಳ್ಳುತ್ತಾರೆಯೇ?’: ಕೇರಳ ವಿವಿಯಲ್ಲಿ ಜಾತಿ ತಾರತಮ್ಯದ ವಿರುದ್ಧ ದಲಿತ ಸಂಶೋಧನಾ ವಿದ್ಯಾರ್ಥಿನಿ ಅನಿರ್ದಿಷ್ಟಾವಧಿ ಉಪವಾಸ

ತಿರುವನಂತಪುರಂ: ಜಾತಿ ಮತ್ತು ಲಿಂಗ ಆಧಾರಿತ ತಾರತಮ್ಯ, ಕಿರುಕುಳ ಹಾಗೂ ಶೈಕ್ಷಣಿಕ ಅವಕಾಶಗಳ ನಿರಾಕರಣೆಯ ಆರೋಪಗಳನ್ನು ಮುಂದಿಟ್ಟುಕೊಂಡು ಕೇರಳದ ತುಂಚತ್ ಎಳುಥಾಚನ್ ಮಲಯಾಳಂ ವಿಶ್ವವಿದ್ಯಾಲಯದ ದಲಿತ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿನಿ ಅನಘಾ ಶಾಸಿ...

ಸ್ವತಂತ್ರ ಭಾರದ್ವಾಜ್ ಬಂಧನದ ಬೆನ್ನಲ್ಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿನಿ ಮನೆ ಮೇಲೆ ಕಲ್ಲು ತೂರಾಟ, ಪೊಲೀಸರ ರಕ್ಷಣೆಗೆ ಮನವಿ

ನವದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ಸಿಜೆಪಿ ಪ್ರತಿಭಟನೆಯ ವೇಳೆ ಸಂಜಯ್ ಆಝಾದ್ ಎಂಬುವವರ ಮೇಲೆ ಸ್ವಯಂಘೋಷಿತ ಗೋರಕ್ಷಕ ಸ್ವತಂತ್ರ ಭಾರದ್ವಾಜ್ ಭೀಕರವಾಗಿ ಹಲ್ಲೆ ನಡೆಸಿದ್ದನು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆತನನ್ನು ಬಂಧಿಸಿದ...

ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಬ್ಯಾಂಕ್‌ ಖಾತೆ ನಿಷ್ಕ್ರಿಯ: ಆರ್‌ಟಿಐ ಮಾಹಿತಿ

ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಡಿ ಲಭ್ಯವಾಗಿರುವ ಉತ್ತರದ ಪ್ರಕಾರ, ಪ್ರಧಾನಮಂತ್ರಿ ಜನ್ ಧನ್ ಯೋಜನೆಯಡಿ ತೆರೆಯಲಾದ ಪ್ರತಿ ನಾಲ್ಕನೇ ಖಾತೆಯು ನಿಷ್ಕ್ರಿಯಗೊಂಡಿದೆ. ಸುಮಾರು 5.72 ಕೋಟಿ ಖಾತೆಗಳಲ್ಲಿ ಶೂನ್ಯ ಬ್ಯಾಲೆನ್ಸ್ ಇದೆ. ಆಗಸ್ಟ್ 12,...

ಬಡ ಪೌರ ಕಾರ್ಮಿಕರ ಮೇಲೆ ದರ್ಪ ಮೆರೆದ ಸಚಿವ ಕೃಷ್ಣ ಬೈರೇಗೌಡ : ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ

ಸೇವೆಯನ್ನು ಖಾಯಂಗೊಳಿಸುವಂತೆ ಮನವಿ ಮಾಡಿದ ಬಡ ಪೌರ ಕಾರ್ಮಿಕರೊಂದಿಗೆ ಗ್ರೇಟರ್ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ದರ್ಪ ಮೆರೆದಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಶನಿವಾರ (ಸೆ.6) ಬೆಂಗಳೂರಿನ...

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...