Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ಪಟ್ಟಿಯಿಂದ ಹೊರಗುಳಿದಿರುವ 47.7 ಲಕ್ಷ ಮತದಾರರ ಹೆಸರುಗಳನ್ನು ಪ್ರಕಟಿಸಿ, ಕರಡು ಪಟ್ಟಿಗೆ ಮುನ್ನ ತಿದ್ದುಪಡಿಗೆ ಅವಕಾಶ ನೀಡಿ: ಮತದಾರರ ಅಧಿಕಾರ ಮಂಚ್ ಸೂಚನೆ

ದೆಹಲಿ: ದೆಹಲಿಯಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ವೇಳೆ "ಸಂಗ್ರಹಿಸಲು ಸಾಧ್ಯವಾಗದವರು" ಎಂದು ಗುರುತಿಸಿ ಹೊರಗಿಡಲಾಗಿರುವ ಬರೋಬ್ಬರಿ 47.7 ಲಕ್ಷ ಮತದಾರರ ಮತಗಟ್ಟೆವಾರಿನ ಪಟ್ಟಿಯನ್ನು ತಕ್ಷಣವೇ...

ದ್ವೇಷ ಭಾಷಣ: TMC ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಜಾಮೀನು ರಹಿತ ವಾರಂಟ್

ದ್ವೇಷ ಭಾಷಣಕ್ಕೆ (Hate Speech) ಸಂಬಂಧಿಸಿದ ಪ್ರಕರಣದಲ್ಲಿ ಪದೇ ಪದೆ ಸಮನ್ಸ್ ನೀಡಿದ್ದರೂ ನ್ಯಾಯಾಲಯಕ್ಕೆ ಗೈರುಹಾಜರಾದ ಹಿನ್ನೆಲೆಯಲ್ಲಿ ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಪಶ್ಚಿಮ ಬಂಗಾಳದ ಕೃಷ್ಣನಗರ ನ್ಯಾಯಾಲಯವು...

ಬಿಹಾರ| ಉಪ್ಪಿನ ಬದಲು ಡಿಟರ್ಜೆಂಟ್ ಬಳಸಿ ಅಡುಗೆ; ಊಟ ಸೇವಿಸಿದ 34 ಶಾಲಾ ಮಕ್ಕಳು ಅಸ್ವಸ್ಥ

ಬಿಹಾರದ ನಳಂದ ಜಿಲ್ಲೆಯಲ್ಲಿ ಮಧ್ಯಾಹ್ನದ ಊಟ ಸೇವಿಸಿದ ನಂತರ 34 ಮಕ್ಕಳು ಅಸ್ವಸ್ಥರಾಗಿದ್ದಾರೆ. ಅಡುಗೆಯವರು ಉಪ್ಪಿನ ಬದಲಿಗೆ ಕಣ್ತಪ್ಪಿನಿಂದ ಡಿಟರ್ಜೆಂಟ್ ಪುಡಿಯನ್ನು ಬೆರೆಸಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 18 ರ ಮಂಗಳವಾರ ಪಾರ್ಸಾ ಪ್ರಾಥಮಿಕ...

ಬೆಳಗಾವಿಯಲ್ಲಿ ನೇಕಾರ ಕಾರ್ಮಿಕ ಆತ್ಮಹತ್ಯೆ: ಅನಾಥವಾಯಿತು ಕುಟುಂಬ, ನೆರವಿಗೆ ಹೆಣ್ಣುಮಕ್ಕಳ ಅಳಲು

ಸಾಲದ ಸುಳಿಗೆ ಸಿಲುಕಿ ಜೀವನ ನಡೆಸಲಾಗದೆ ನೇಕಾರ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಕರುಣಾಜನಕ ಘಟನೆ ಬೆಳಗಾವಿ ನಗರದ ಮಂಗಾಯಿ ನಗರದ 4ನೇ ಕ್ರಾಸ್‌ನಲ್ಲಿ ಸಂಭವಿಸಿದೆ. ಮೃತರನ್ನು ವಿಠ್ಠಲ ಲಿಂಗಪ್ಪ ಲೋಕರಿ ಎಂದು...

ಶಿವಮೊಗ್ಗ| ಅಂಗನವಾಡಿ ಸಹಾಯಕಿಯಾಗಿ ದಲಿತ ಮಹಿಳೆಯ ನೇಮಕ; ಗ್ರಾಮಸ್ಥರ ವಿರೋಧ

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಗುಡ್ತಿ ಗ್ರಾಮದಲ್ಲಿ ದಲಿತ ಮಹಿಳೆಯೊಬ್ಬರನ್ನು ಅಂಗನವಾಡಿ ಸಹಾಯಕಿಯಾಗಿ ನೇಮಕ ಮಾಡಿರುವುದಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿರುವ ಸುದ್ದಿ ಬೆಳಕಿಗೆ ಬಂದಿದ್ದು,...

ಉಮರ್ ಖಾಲಿದ್- ಶಾರ್ಜೀಲ್ ದೀರ್ಘಕಾಲದ ಬಂಧನದ ಬಗ್ಗೆ ಕಳವಳ; 100 ಕ್ಕೂ ಹೆಚ್ಚು ಪ್ರಮುಖರಿಂದ ಸಿಜೆಐಗೆ ಬಹಿರಂಗ ಪತ್ರ

2020 ರ ದೆಹಲಿ ಗಲಭೆ ಪಿತೂರಿ ಪ್ರಕರಣದಲ್ಲಿ ವಿದ್ಯಾರ್ಥಿ ಕಾರ್ಯಕರ್ತರಾದ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ದೀರ್ಘಕಾಲದ ಬಂಧನದ ಬಗ್ಗೆ ಕಳವಳ ವ್ಯಕ್ತಪಡಿಸಿ 100 ಕ್ಕೂ ಹೆಚ್ಚು ಬರಹಗಾರರು, ನಟರು,...

ಗೋಡ್ಸೆ ಆರ್‌ಎಸ್‌ಎಸ್‌ ಕಾರ್ಯಕರ್ತನಾಗಿದ್ದ ಎಂದು ಸಾವರ್ಕರ್ ಅವರ ಸೋದರಳಿಯ ಕೋರ್ಟ್‌ನಲ್ಲಿ ಹೇಳಿಕೆ: ಸಂಘದಿಂದ ಸ್ಪಷ್ಟನೆ ಕೇಳಿದ ಕಾಂಗ್ರೆಸ್

ಮುಂಬೈ: ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಆರ್‌ಎಸ್‌ಎಸ್‌ನ ಸಕ್ರಿಯ ಸದಸ್ಯರಾಗಿದ್ದರು ಎಂದು ವಿನಾಯಕ್ ದಾಮೋದರ್ ಸಾವರ್ಕರ್ ಅವರ ಸೋದರಳಿಯ ಸತ್ಯಕಿ ಸಾವರ್ಕರ್ ನ್ಯಾಯಾಲಯದ ವಿಚಾರಣೆ ವೇಳೆ ನೀಡಿರುವ ಹೇಳಿಕೆ ಈಗ ದೇಶಾದ್ಯಂತ...

SIR ಅವಾಂತರ : ಆ.20ರಂದು ಮತ ಕಾವಲು ಸಮಿತಿಯಿಂದ ‘ಸಾಂಸ್ಕೃತಿಕ ಪ್ರತಿರೋಧ’

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ರಾಜ್ಯದಲ್ಲಿ ಸೃಷ್ಟಿಸಿರುವ ಅವಾಂತರಗಳ ವಿರುದ್ಧ ಗುರುವಾರ (ಆ.20) ಬೆಂಗಳೂರಿನ ಗಾಂಧಿ ಭವನದಲ್ಲಿ 'ಸಾಂಸ್ಕೃತಿಕ ಪ್ರತಿರೋಧ' ಹಮ್ಮಿಕೊಳ್ಳಲಾಗಿದೆ. ನಾಗರಿಕ ಮತ ಕಾವಲು ಸಮಿತಿ ಆಯೋಜಿಸಿರುವ ಕಾರ್ಯಕ್ರಮವನ್ನು ನಟ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಮತದಾರರಲ್ಲಿ ಬಹಿಷ್ಕಾರ ಬೆದರಿಕೆ ಎದುರಿಸುತ್ತಿರುವವರಲ್ಲಿ ಶೇ. 59 ರಷ್ಟು ಜನ ಬಿಜೆಪಿ ಹಿಡಿತದಲ್ಲಿರುವ ಕ್ಷೇತ್ರಗಳವರು: ವರದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ಶುದ್ಧೀಕರಣದ ಹೆಸರಿನಲ್ಲಿ ನಡೆಯುತ್ತಿರುವ 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯು ಭಾರೀ ಚರ್ಚೆಗೆ ಕಾರಣವಾಗಿದೆ. ಚುನಾವಣಾ ಆಯೋಗವು ಪ್ರಕಟಿಸಿರುವ ಅಧಿಕೃತ ದತ್ತಾಂಶಗಳನ್ನು ಆಧರಿಸಿ...

ವಿದ್ಯಾರ್ಥಿ ಪ್ರತಿಭಟನೆ ತಡೆಯುವ ಆದೇಶ ವಾಪಸ್: ತೀವ್ರ ವಿರೋಧದ ಹಿನ್ನೆಲೆ ಹಿಂದೆ ಸರಿದ ತಮಿಳುನಾಡು ಸರ್ಕಾರ

ಎಡಪಕ್ಷಗಳು ಹಾಗೂ ತಮಿಳುನಾಡು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಘಟಿಸಿದ ಪ್ರತಿಭಟನೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸುವುದನ್ನು ತಡೆಯುವ ವಿವಾದಾತ್ಮಕ ಆದೇಶವನ್ನು ತೀವ್ರ ವಿರೋಧದ ಬೆನ್ನಲ್ಲೇ ವಿಜಯ್ ನೇತೃತ್ವದ ತಮಿಳುನಾಡು ಸರ್ಕಾರ ಹಿಂಪಡೆದಿದೆ. ಶಾಲಾ ಶಿಕ್ಷಣ...