Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...

ಇಂಡಿಗೋ ಏರ್ ಲೈನ್ಸ್, ಮುಗಿಯದ ಸಂಕಷ್ಟ: ಬೆಂಗಳೂರಿನಲ್ಲಿ 73 ವಿಮಾನ, ಸೇರಿ ಹಲವು ವಿಮಾನ ನಿಲ್ದಾಣಗಳಲ್ಲಿ 100ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದು

ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋ ಸಿಬ್ಬಂದಿ ಕೊರತೆ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ ಕಾರ್ಯಾಚರಣೆಯಲ್ಲಿ ಬಹುದೊಡ್ಡ ಅಡಚಣೆಗಳನ್ನು ಎದುರಿಸಿದ್ದರಿಂದ ಡಿಸೆಂಬರ್ 3ರಿಂದ, ವಿವಿಧ ವಿಮಾನ ನಿಲ್ದಾಣಗಳಲ್ಲಿ 200ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಲಾಗಿದೆ...

ಪುನರ್ವಸತಿ ಕೇಂದ್ರದಲ್ಲಿ ದಲಿತ ಯುವಕ ಸಾವು ಪ್ರಕರಣ; ನಾಲ್ವರು ಪೊಲೀಸರು ಅಮಾನತು

ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿ 22 ವರ್ಷದ ದಲಿತ ಯುವಕನಿಗೆ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಹಿರಿಯ ಅಧಿಕಾರಿಗಳು ಮಂಗಳವಾರ ಇನ್ಸ್‌ಪೆಕ್ಟರ್ ಮತ್ತು ಇತರ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ. ನಂತರ, ಪುನರ್ವಸತಿ ಕೇಂದ್ರದಲ್ಲಿ ಅವರ...

ಉತ್ತರ ಪ್ರದೇಶ| ಮುಜಫರ್‌ನಗರದ ಮಸೀದಿ-ದೇವಸ್ಥಾನಗಳ 55 ಕ್ಕೂ ಹೆಚ್ಚು ಧ್ವನಿವರ್ಧಕ ತೆರವು

ಉತ್ತರ ಪ್ರದೇಶದ ಮುಜಫರ್‌ನಗರದ ಪೊಲೀಸರು, ನಗರದಲ್ಲಿ ಹೆಚ್ಚಿನ ಶಬ್ದ ಮಾಡುತ್ತಿದ್ದ ಧ್ವನಿವರ್ಧಕಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ, ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳ ಧ್ವನಿ ಮಿತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ವಿವಿಧ ಮಸೀದಿಗಳಿಂದ 55 ಕ್ಕೂ...

ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಡಿ.6ರಂದು ಮೈಸೂರಿನಲ್ಲಿ ಕಾಲ್ನಡಿಗೆ ಜಾಥಾ: ಬಸವರಾಜ ಕೌತಾಳ್

ಇದೇ ಡಿಸೆಂಬರ್ 6ರಂದು ಸಿಎಂ ಸಿದ್ದರಾಮಯ್ಯನವರ ಸ್ವಗ್ರಾಮ ಸಿದ್ದರಾಮನಹುಂಡಿಯಿಂದ ಮೈಸೂರಿನವರೆಗೆ ಕಾಲ್ನಡಿಗೆ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರಿನ ಪತ್ರಕರ್ತರ ಭವನದಲ್ಲಿಂದು ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ ಮುಖಂಡರಾದ ಬಸವರಾಜ ಕೌತಾಳ್ ಮಾಹಿತಿ...

ಮೊಬೈಲ್‌ಗಳಲ್ಲಿ ‘ಸಂಚಾರ್ ಸಾಥಿ’ ಆ್ಯಪ್‌ ಕಡ್ಡಾಯ ಆದೇಶ ಹಿಂಪಡೆದ ಕೇಂದ್ರ ಸರ್ಕಾರ

ಸ್ಮಾರ್ಟ್‌ ಫೋನ್ ತಯಾರಕರು ಹೊಸ ಮೊಬೈಲ್‌ ಫೋನ್‌ಗಳಲ್ಲಿ 'ಸಂಚಾರ್ ಸಾಥಿ' ಅಪ್ಲಿಕೇಶನ್ ಪ್ರಿ-ಇನ್‌ಸ್ಟಾಲ್ ಮಾಡುವುದನ್ನು ಕಡ್ಡಾಯಗೊಳಿಸಿದ್ದ ಆದೇಶವನ್ನು ಕೇಂದ್ರ ಸರ್ಕಾರ ಬುಧವಾರ (ಡಿ.3) ಹಿಂಪಡೆದಿದೆ. ಕಾಂಗ್ರೆಸ್ ಸೇರಿದಂತೆ ವಿರೋಧಪಕ್ಷಗಳು ಹಾಗೂ ಸಾರ್ವಜನಿಕರಿಂದ ತೀವ್ರ ವಿರೋಧ...