Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...