Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...