Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...