Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಫ್ಯಾಕ್ಟ್‌ ಚೆಕ್‌: ಮೋದಿ ಸರ್ಕಾರ 100 ಕೋಟಿ ಲಸಿಕೆ ಉಚಿತವಾಗಿ ನೀಡಿದೆಯೇ?

ಸರ್ಕಾರವು ತನ್ನ ನೀತಿಯನ್ನು ಬದಲಿಸಿದ್ದು ಮತ್ತು ಲಸಿಕೆಯನ್ನು ಮುಕ್ತಗೊಳಿಸಿದ್ದು ನಿಜ, ಆದರೆ ಖಾಸಗಿ ವಲಯವು ಅದಕ್ಕಾಗಿ ಶುಲ್ಕ ವಿಧಿಸುತ್ತಿತ್ತು.

- Advertisement -
- Advertisement -

ಅಕ್ಟೋಬರ್ 22ರಂದು (ಶುಕ್ರವಾರ) ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿಯವರು, “ದೇಶದ ನಾಗರಿಕರಿಗೆ 100 ಕೋಟಿ ಕೋವಿಡ್ -19 ಲಸಿಕೆ ನೀಡುವ ಮೂಲಕ ಭಾರತದ ದೊಡ್ಡ ಸಾಧನೆ ಮಾಡಿದೆ ಹಾಗೂ ಉಚಿತವಾಗಿ ಲಸಿಕೆ ನೀಡಲಾಗಿದೆ” ಎಂದು ಹೇಳಿದ್ದಾರೆ.

“ಒಂದು ರೂಪಾಯಿ ಪಡೆಯದೆ ದೇಶದ ನಾಗರಿಕರಿಗೆ ನೂರು ಕೋಟಿ ಡೋಸ್‌ಗಳನ್ನು ನೀಡಲಾಗಿದೆ” ಎಂದು ಮೋದಿ ತಿಳಿಸಿದ್ದಾರೆ. ಆದರೆ ಇದು ನಿಜವಲ್ಲ ಎಂದು ಕ್ವಿಂಟ್‌ ಜಾಲತಾಣ ವರದಿ ಮಾಡಿದೆ.

ಮಾರ್ಚ್‌ನಲ್ಲಿ ಭಾರತ ಸರ್ಕಾರ ಎಲ್ಲ ಹಿರಿಯ ನಾಗರಿಕರಿಗೆ ಎರಡನೇ ಹಂತದ ವ್ಯಾಕ್ಸಿನೇಷನ್‌ ಆರಂಭಿಸಿತು. ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಪಡೆಯುವವರು ಸೇವಾ ಶುಲ್ಕ ಪಾವತಿಸಬೇಕಾಗುತ್ತದೆ ಎಂದು ಸರ್ಕಾರ ಹೇಳಿತ್ತು ಎಂಬುದನ್ನು ಕ್ವಿಂಟ್ ಉಲ್ಲೇಖಿಸಿದೆ.

ಇದನ್ನೂ ಓದಿರಿ: ಫ್ಯಾಕ್ಟ್‌ಚೆಕ್: ಪಂಜಾಬ್‌ ಮುಖ್ಯಮಂತ್ರಿ ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ?

ಮೇ ತಿಂಗಳಲ್ಲಿ ಹೊಸ ಲಸಿಕೆ ನೀತಿಯನ್ನು ಘೋಷಿಸಿದಾಗ ಸೇವಾ ಶುಲ್ಕವು ತೀವ್ರವಾಗಿ ಏರಿಕೆ ಕಂಡಿತು. ರಾಜ್ಯಗಳು ಮತ್ತು ಖಾಸಗಿ ಆಸ್ಪತ್ರೆಗಳು ತಯಾರಕರಿಂದ ನೇರವಾಗಿ ಲಸಿಕೆಗಳನ್ನು ಖರೀದಿಸಲು ಅವಕಾಶ ಮಾಡಿಕೊಡಲಾಯಿತು. ಈ ಆಸ್ಪತ್ರೆಗಳಲ್ಲಿನ ಡೋಸ್‌‌ಗಳ ಶುಲ್ಕವು ಮತ್ತಷ್ಟು ಏರಿಕೆಯಾಯಿತು.

ಸರ್ಕಾರವು ತನ್ನ ಲಸಿಕೆ ನೀತಿಗೆ ಮತ್ತೊಂದು ಬದಲಾವಣೆಯನ್ನು ಜೂನ್ 2021ರಲ್ಲಿ ತಂದಿತು (ಎರಡನೇ ಅಲೆ ಆರಂಭವಾದ ಸ್ವಲ್ಪ ಸಮಯದ ನಂತರ). “75 ಪ್ರತಿಶತ ಲಸಿಕೆ ಉಚಿತವಾಗಿ ಕೇಂದ್ರ ಸರ್ಕಾರ ನೀಡಲಿದೆ. 25 ಪ್ರತಿಶತ ಡೋಸ್‌ಗಳನ್ನು ಖಾಸಗಿಯಲ್ಲಿ ಖರೀದಿಸಿ, ಪಡೆದುಕೊಳ್ಳಬೇಕಾಗುತ್ತದೆ” ಎಂದು ಮೋದಿ ಹೇಳಿದ್ದರು.

ಅಂದರೆ ಇದರ ಅರ್ಥ ಕೆಲವು ಲಸಿಕಾ ಡೋಸ್‌ಗಳು ಉಚಿತವಾಗಿದ್ದವು, ಕೆಲವು ಖರೀದಿಸಬೇಕಾಗಿತ್ತು ಎಂಬುದಲ್ಲವೇ?

“ಕೋವಿಡ್ -19 ಲಸಿಕಾ ಕಾರ್ಯಕ್ರಮಕ್ಕಾಗಿ 75 ಪ್ರತಿಶತ ಲಸಿಕೆಗಳನ್ನು ಕೇಂದ್ರದಿಂದ ಸಂಗ್ರಹಿಸಲಾಗುವುದು. ಖಾಸಗಿ ವಲಯವು 25 ಪ್ರತಿಶತ ಲಸಿಕೆಗಳನ್ನು ಖರೀದಿಸುವುದನ್ನು ಮುಂದುವರಿಸಬಹುದು” ಎಂದು ಪ್ರಧಾನಿ ಮೋದಿಯವರು ಜೂನ್ 7ರಂದು ಘೋಷಿಸಿದ್ದರು

ಖಾಸಗಿ ವಲಯದಿಂದ ಖರೀದಿಸಿದ ಲಸಿಕೆಗಳಿಗೆ, ಪ್ರತಿ ಡೋಸ್‌ ಸೇವಾ ಶುಲ್ಕವಾಗಿ 150 ರೂ. ನಿಗದಿಪಡಿಸಲಾಯಿತು.  ಹಾಗಾಗಿ, ಭಾರತದಲ್ಲಿ ಕೋವಿಶೀಲ್ಡ್ ಬೆಲೆ ರೂ. 780, ಕೋವಾಕ್ಸಿನ್ ರೂ. 1,410, ಸ್ಪುಟ್ನಿಕ್ ವಿ ಲಸಿಕೆಗೆ ರೂ.1,145 ನಿಗದಿಪಡಿಸಲಾಯಿತು.

ಜೂನ್ 21 ರಿಂದ ಕೇಂದ್ರವು ಎಲ್ಲರಿಗೂ ಉಚಿತ ಲಸಿಕೆಯನ್ನು ನೀಡುವುದಾಗಿ ಘೋಷಿಸಿತು. ಇದಕ್ಕೂ ಮೊದಲು, 18-45 ವರ್ಷ ವಯಸ್ಸಿನವರು ಲಸಿಕೆಯನ್ನು ಪಡೆಯಲು ಹಣ ಪಾವತಿಸಬೇಕಾಗಿತ್ತು. ಆದರೆ 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಇದು ಉಚಿತವಾಗಿತ್ತು.

ಇದರ ಅರ್ಥವೇನೆಂದರೆ, ಸರ್ಕಾರವು ತನ್ನ ಲಸಿಕೆ ನೀತಿಯಲ್ಲಿ ಬದಲಾವಣೆಗಳನ್ನು ಮಾಡಿದೆ ಮತ್ತು ಉಚಿತ ಲಸಿಕೆಯನ್ನು ನೀಡುವುದಾಗಿಯೂ ಘೋಷಿಸಿದೆ.  ಆದರೆ ಎಲ್ಲಾ 100 ಕೋಟಿ ಡೋಸ್‌ಗಳನ್ನು ಉಚಿತವಾಗಿ ನೀಡಲಾಗಿದೆಯೆಂದು ಹೇಳುವುದು ಸುಳ್ಳಾಗಿದೆ.

ದತ್ತಾಂಶ ಕುರಿತ ಆನ್‌ಲೈನ್‌ ಪ್ರಕಟಣೆಯಾದ ‘ಅವರ್‌‌ ವರ್ಡ್ ಇನ್‌ ಡೇಟಾ’ದಲ್ಲಿ ಲಭ್ಯವಿರುವ ಮಾಹಿತಿ ಪ್ರಕಾರ, ಜೂನ್‌ ವರೆಗೆ ನೀಡಲಾದ ಒಟ್ಟು ಲಸಿಕೆಯ ಪ್ರಮಾಣ 27.4 ಕೋಟಿಯಾಗಿದೆ. ಇದು ಖಾಸಗಿ ಹಾಗೂ ಸರ್ಕಾರಿ ಎರಡೂ ಕ್ಷೇತ್ರಗಳಿಂದಲೂ ನೀಡಲಾದ ಲಸಿಕೆಯ ಒಟ್ಟು ಅಂಕಿ-ಅಂಶವಾಗಿದೆ.  ಮೇ 1ರಂದು ಎಲ್ಲರಿಗೂ ಲಸಿಕೆ ಕಾರ್ಯಕ್ರಮವನ್ನು ಆರಂಭಿಸಿದ್ದನ್ನು ಗಮನಿಸಬೇಕಾಗುತ್ತದೆ.

ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, 50 ವರ್ಷಕ್ಕಿಂತ ಮೇಲ್ಪಟ್ಟವರು ಹಾಗೂ ಮಧುಮೇಹ, ರಕ್ತದೊತ್ತಡ, ಹೃದಯಸಂಬಂಧಿ ಕಾಯಿಲೆಗಳು ಇರುವವರಿಗೆ ಲಸಿಕೆಗಳನ್ನು ಹಾಕಲಾಗಿತ್ತು. ಎರಡನೇ ಹಂತದಲ್ಲಿ, 60 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು 45 ವರ್ಷಕ್ಕಿಂತ ಮೇಲ್ಪಟ್ಟ ರೋಗಿಗಳೆಲ್ಲರಿಗೂ ಲಸಿಕೆ ಹಾಕಲಾಯಿತು.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರ ಪ್ರಕಾರ, ಖಾಸಗಿ ಆಸ್ಪತ್ರೆಗಳು ಮೇ 1ರಿಂದ ದೇಶದಲ್ಲಿ ಶೇ.6ರಷ್ಟು ಕೋವಿಡ್‌ ಲಸಿಕೆಗಳನ್ನು ನೀಡಿವೆ. ಕೇಂದ್ರದ ಸಾಪ್ತಾಹಿಕದಲ್ಲಿ ಕೋವಿಡ್ ಮಾಹಿತಿ ನೀಡುವಾಗ ಭೂಷಣ್ ಅವರು, “ಮೇ 1ರಿಂದ ಸೆಪ್ಟೆಂಬರ್ 22ರವರೆಗೆ ಸುಮಾರು 6 ಪ್ರತಿಶತ ಡೋಸ್‌ಗಳನ್ನು ಖಾಸಗಿ ಆಸ್ಪತ್ರೆಗಳಲ್ಲಿ, ಉಳಿದವುಗಳನ್ನು ಸಾರ್ವಜನಿಕ ಆರೋಗ್ಯ ಸೇವೆಗಳಲ್ಲಿ ನೀಡಲಾಗಿದೆ” ಎಂದಿದ್ದಾರೆ.

ಜುಲೈ 20 ರಂದು ರಾಜ್ಯಸಭೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡಿದ ಪ್ರತಿಕ್ರಿಯೆಯ ಪ್ರಕಾರ, “ಖಾಸಗಿ ವಲಯದಲ್ಲಿ ಮೇ 1ರಿಂದ ಜುಲೈ 15ರ ನಡುವೆ ಸುಮಾರು 7 ಪ್ರತಿಶತ ಲಸಿಕೆಗಳನ್ನು ನೀಡಲಾಗಿದೆ.” ಹೀಗಾಗಿ ಮೋದಿಯವರು ನೀಡಿದ ಮಾಹಿತಿ ಅರ್ಧಸತ್ಯದಿಂದ ಕೂಡಿದೆ.

(ಮಾಹಿತಿ ಕೃಪೆ: ದಿ ಕ್ವಿಂಟ್‌)


ಇದನ್ನೂ ಓದಿರಿ: 68 ಕೋಟಿ ಜನರಿಗೆ ಒಂದು ಡೋಸ್ ಲಸಿಕೆ ಕೂಡಾ ನೀಡಿಲ್ಲ, ಯಾವ ಸಾಧನೆಗೆ ಸಂಭ್ರಮಾಚರಣೆ?- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಸರ್ಜಿಕಲ್ ಸ್ಟ್ರೈಕ್ ಬಗ್ಗೆ ನೇ ಅನುಮಾನ ಪಟ್ಟು ದೇಶದ ಸೈನಿಕರ ಬಗ್ಗೆ ನೇ ಅನುಮಾನ ದಿಂದ ನೋಡಿ ದವರು ನೀವು ಇನ್ನು ಇದನ್ನೂ ಸಹ ಈ ರೀತಿ ನೋಡೋದ್ರಲ್ಲಿ ಅನುಮಾನ ಇಲ್ಲಾ ಬಿಡಿ

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...