Homeಕರ್ನಾಟಕ‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?': ಇದ್ರೀಶ್ ಹತ್ಯೆಗೆ ಎಚ್‌ಡಿಕೆ...

‘ರಾತ್ರಿ ಹೊತ್ತು ರಸ್ತೆಯಲ್ಲಿ ಬ್ಯಾಟ್‌ ಹಿಡಿದು ತಿರುಗುವವರಿಗೆ ಪೊಲೀಸರ ಅನುಮತಿ ಇತ್ತೇ?’: ಇದ್ರೀಶ್ ಹತ್ಯೆಗೆ ಎಚ್‌ಡಿಕೆ ಖಂಡನೆ

- Advertisement -
- Advertisement -

ಕನಕಪುರ ತಾಲೂಕಿನ ಸಾತನೂರು ಬಳಿ ಜಾನುವಾರು ಸಾಗಣೆ ಮಾಡುತ್ತಿದ್ದ ಕಾರಣಕ್ಕೆ ಯುವಕನೊಬ್ಬ ಹತ್ಯೆಗೀಡಾಗಿರುವುದು ಸರ್ವಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಕಳೆದ ಮೂರೂವರೆ ವರ್ಷದಲ್ಲಿ ಬಿಜೆಪಿ ಸರಕಾರ ವ್ಯವಸ್ಥಿತವಾಗಿ ಬೆಳೆಸಿ ಪೋಷಿಸಿರುವ ಅಸಹನೆ, ಅಸಹಿಷ್ಣುತೆಯೇ ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪುನೀತ್‌ ಕೆರೆಹಳ್ಳಿ ಮತ್ತು ಆತನ ಸಹಚರರು ನಡೆಸಿದ್ದಾರೆ ಎನ್ನಲಾದ ಇದ್ರೀಶ್‌ ಪಾಷ ಅವರ ಹತ್ಯೆಯನ್ನು ಖಂಡಿಸಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿಯವರು, “ಜಾನುವಾರು ಸಾಗಿಸುತ್ತಿದ್ದಾನೆ ಎಂದರೆ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಬಹುದಿತ್ತು ಅಥವಾ ಮಾಹಿತಿ ನೀಡಬಹುದಿತ್ತು. ಅದರ ಹೊರತಾಗಿ ಹತ್ಯೆ ಮಾಡುವುದು ಎಂದರೆ ಅರ್ಥವೇನು? ಚುನಾವಣೆ ಹೊತ್ತಿನಲ್ಲಿ ಇದರ ಹಿಂದಿರುವ ಷಡ್ಯಂತ್ರ ಎಂಥದ್ದು ಎಂದು ಯಾರಿಗಾದರೂ ಅರ್ಥ ಆಗುವಂತದ್ದೇ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ?” ಎಂದು ಪ್ರಶ್ನಿಸಿದ್ದಾರೆ.

“ಯುವಕನ ಕೊಲೆಯಾದ ರಾತ್ರಿ ಆರೋಪಿ ಮತ್ತವನ ಸಹಚರರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನು ಹಿಡಿದು ಗೋ ರಕ್ಷಕನ ಸೋಗು ಹಾಕಿಕೊಂಡು ಪಹರೆ ಕಾಯುವ ನಾಟಕದ ವಿಡಿಯೋ ಮಾಡಿ ತನ್ನ ಜಾಲತಾಣದಲ್ಲಿಯೇ ಹಾಕಿಕೊಂಡಿದ್ದಾನೆ. ಅವರ ಉದ್ದೇಶವೇ ಬೇರೆ ಇತ್ತು ಎನ್ನುವುದು ಸ್ಪಷ್ಟ. ಇದಕ್ಕಿಂತ ಸಾಕ್ಷಿ ಬೇಕೆ? ಕೂಡಲೇ ಪೊಲೀಸರು ಆರೋಪಿಗಳನ್ನು ಬಂಧಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿರಿ: ಪುನೀತ್ ಕೆರೆಹಳ್ಳಿ ಮಾಡಿದ ಅವಾಂತರಗಳಿವು; ಕಡಿವಾಣ ಹಾಕದೆ ಸುಮ್ಮನೆ ಬಿಟ್ಟಿದ್ದೇಕೆ?

“ರಾತ್ರಿ ಹೊತ್ತು ಇವರು ರಸ್ತೆಯಲ್ಲಿ ಕ್ರಿಕೆಟ್ ಬ್ಯಾಟುಗಳನ್ನಿಡಿದುಕೊಂಡು ಗಸ್ತು ತಿರುಗುತ್ತಿದ್ದರು ಎಂದರೆ, ಇವರಿಗೆ ಪೊಲೀಸರ ಮೌನ ಅನುಮತಿ ಇತ್ತಾ? ಇಲ್ಲವೇ, ಇವರೇನು ಮಫ್ತಿ ಪೊಲೀಸರಾ? ಅಥವಾ ಗೋ ರಕ್ಷಣೆ ನೆಪದಲ್ಲಿ ದರೋಡೆಗೆ ಹೊಂಚು ಹಾಕಿ ಕೂತಿದ್ದರಾ? ಈ ಪ್ರಶ್ನೆಗಳಿಗೆ ಉತ್ತರ ಸಿಗಬೇಕಿದೆ” ಎಂದು ಒತ್ತಾಯಿಸಿದ್ದಾರೆ.

“ನಿಜಕ್ಕಾದರೆ, ಗೋ ಸಂಕ್ಷಣೆಯ ಸೋಗಿನ ಈ ಸೋಗಲಾಡಿಗಳಿಗೆ ಆಶ್ರಯ, ಮೇವು ಇಲ್ಲದೆ ಬೀದಿಪಾಲಾಗಿರುವ ಅನಾಥ ಗೋವುಗಳ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಆದರೆ, ಜಾತಿ ಧರ್ಮಗಳ ನಡುವೆ ಬೆಂಕಿ ಇಟ್ಟು ಚಳಿ ಕಾಯಿಸಿಕೊಳ್ಳುವುದೇ ಇವರ ಜಾಯಮಾನ. ಪೊಲೀಸ್ ವ್ಯವಸ್ಥೆ ಗಾಢ ನಿದ್ದೆಯಲ್ಲಿದೆಯಾ?” ಎಂದು ಕೇಳಿದ್ದಾರೆ.

“ವಿಧಾನಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ರಾಜ್ಯದಲ್ಲಿ ಕೋಮು ಸೌಹಾರ್ದ ಕದಡಿ ಹಿಂಸಾಚಾರ ಸೃಷ್ಟಿಸುವುದು ಮತ್ತು ಚುನಾವಣೆ ಹೊತ್ತಿನಲ್ಲಿ ಕರ್ನಾಟಕವನ್ನು ಕದಡುವುದೇ ಇವರ ದುರುದ್ದೇಶ ಆಗಿರುವಂತಿದೆ. ನನಗೆ ಈ ಹತ್ಯೆ ಆಘಾತ ಉಂಟು ಮಾಡಿದೆ” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...