Homeಫ್ಯಾಕ್ಟ್‌ಚೆಕ್ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

- Advertisement -
- Advertisement -

ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಸಲ್ಲಿಸಿದ ಮಾನಹಾನಿ ಮೊಕದ್ದಮೆಯನ್ನು ಸೋತ ನಂತರ ದಿ ವೈರ್ ನ್ಯೂಸ್ ಪೋರ್ಟಲ್ ಸುಪ್ರೀಂ ಕೋರ್ಟಿನಲ್ಲಿ ಕ್ಷಮೆಯಾಚಿಸಿದೆ ಎಂದು ಒಂದು ಸಂದೇಶ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಟ್ವಿಟರ್‌ನಲ್ಲಿ ಹಲವಾರು ಪ್ರಮುಖ ಹ್ಯಾಂಡಲ್‌ಗಳು ಈ ಸಂದೇಶ ಹಂಚಿಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿಯವರ ಚುನಾವಣೆಯ ನಂತರದ ವರ್ಷದಲಿ ಜಯ್ ಷಾ ಒಡೆತನದ ಕಂಪನಿಯ ವಹಿವಾಟು 16,000 ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಿ ದಿ ವೈರ್ ಅಕ್ಟೋಬರ್ 8, 2017 ರಂದು ಲೇಖನವೊಂದನ್ನು ಪ್ರಕಟಿಸಿತ್ತು.

ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಹರಿಓಂ ಪಾಂಡೆ ಮಾರ್ಚ್ 19 ರಂದು ಮೇಲಿನ ಕ್ಷಮಯಾಚನೆಯ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಪುಷ್ಪೇಂದ್ರ ಕುಲಶ್ರೇಷ್ಠರ ಹೆಸರಿನಲ್ಲಿರುವ ಒಂದು ನಕಲಿ ಖಾತೆಯು ಈ ಸಂದೇಶ ಹರಡಿ 15,000 ಲೈಕ್‌ಗಳನ್ನು ಗಳಿಸಿತು. @pushpendraamu ತಮ್ಮ ಬಯೋದಲ್ಲಿ ಬಿಜೆಪಿ ದೆಹಲಿ ಸೋಷಿಯಲ್ ಮೀಡಿಯಾ ಮತ್ತು ಐಟಿ ಬೌದ್ಧಿಕ ಸೆಲ್ ಹೆಡ್ ಎಂದು ಗುರುತಿಸಿಕೊಂಡಿರುವ ಸಂದೀಪ್ ಠಾಕೂರ್ ಕೂಡ ಇದೇ ರೀತಿ ಟ್ವೀಟ್ ಮಾಡಿದ್ದಾರೆ.

@ TheShivani5, @ SaritaKaushik05 @idineshdesai ಈ ಹ್ಯಾಂಡಲ್‌ಗಳು ಕೂಡ ಇದೇ ಸಂದೇಶ ಹಂಚಿಕೊಂಡಿವೆ. ಬಲಪಂಥೀಯ ಪ್ರಚಾರ ವೆಬ್‌ಸೈಟ್‌ನಲ್ಲಿ ಲೇಖಕರೆಂದು ಹೇಳಿಕೊಳ್ಳುವ @TheAshwinRaj ಎಂಬ ಬಳಕೆದಾರರು ಮತ್ತು ಬಿಜೆಪಿ ಸದಸ್ಯ ತರುಣ್ ರತಿ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ಸತ್ಯ: ವಿಚಾರಣೆಯೇ ಆರಂಭವಾಗಿಲ್ಲ!

“ಜಯ್ ಶಾ ಅವರು ದಿ ವೈರ್ ವಿರುದ್ಧ ಕ್ರಿಮಿನಲ್ ಮಾನಹಾನಿ ಮತ್ತು ಸಿವಿಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದರು, ಇದರಲ್ಲಿ ಅವರು 100 ಕೋಟಿ ರೂ. ಪರಿಹಾರ ಕೇಳಿದ್ದರು. ಆದರೆ ಆ ಪ್ರಕರಣದ ವಿಚಾರಣೆ ಕೂಡ ಪ್ರಾರಂಭವಾಗಿಲ್ಲ, ಮತ್ತು ಜನರು ಈ ವಿಲಕ್ಷಣ ಸುಳ್ಳುಗಳನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆಂದು ನನಗೆ ತಿಳಿದಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಬೇಕೆಂಬ ಮನವಿಯನ್ನು ಸ್ವೀಕರಿಸಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ, 2018 ರ ಜನವರಿಯಲ್ಲಿ ವೈರ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ.

“2018 ರಲ್ಲಿ ಎರಡನೇ ಅರ್ಜಿಯನ್ನು ಸಹ ಸಲ್ಲಿಸಲಾಯಿತು, ಜಯ್ ಅಮಿತ್ ಷಾ ಅವರ ವ್ಯವಹಾರಗಳ ಕುರಿತು ಹೆಚ್ಚಿನ ಪ್ರಕಟಣೆಯ ವಿರುದ್ಧ ತಡೆಯಾಜ್ಞೆ ನೀಡಿದಾಗ, ವಿಚಾರಣಾ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಗುಜರಾತ್ ಹೈಕೋರ್ಟ್ ಮಾನನಷ್ಟ ಅರ್ಜಿಯನ್ನು ಮತ್ತೆ ಎತ್ತಿ ಹಿಡಿಯಿತು ಎಂದು ದಿ ವೈರ್ ಹೇಳಿದೆ.

ನಂತರ ಪ್ರಕರಣ ವಜಾ ಮಾಡಬೇಕು ಎಂಬ ಎರಡೂ ಅರ್ಜಿಗಳನ್ನು ಹಿಂಪಡೆಯಲಾಯಿತು ಮತ್ತು ಪ್ರಕರಣವು ನೇರವಾಗಿ ವಿಚಾರಣೆಗೆ ಹೋಗಿದೆ.

ಜಯ್ ಷಾ ಕುರಿತು ಈ ವರದಿ ಮಾಡಿದ ಪತ್ರಕರ್ತೆ ರೋಹಿಣಿ ಸಿಂಗ್ ಕೂಡ, ಟ್ವಿಟರ್‌ನಲ್ಲಿ “ತಪ್ಪು ಮಾಹಿತಿ ಓಡಾಡುತ್ತಿದೆ. ವಿಚಾರಣಾ ನ್ಯಾಯಾಲಯದಲ್ಲಿ ಮೊದಲೇ ನೀವು ತೀರ್ಪನ್ನು ಉಚ್ಚರಿಸಿದ್ದೀರಿ” ಎಂದು ಬರೆದಿದ್ದಾರೆ.

ಜಯ್ ಶಾ ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಸೋತಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದೆ ಎಂದು ಸುಳ್ಳು ಸಂದೇಶವನ್ನು ಬಿಜೆಪಿಯ ಸದಸ್ಯರು ಮತ್ತು ಬೆಂಬಲಿಗರು ಹಂಚಿಕೊಂಡಿದ್ದಾರೆ, ಅಷ್ಟೇ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...