Homeಫ್ಯಾಕ್ಟ್‌ಚೆಕ್ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

- Advertisement -
- Advertisement -

ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಸಲ್ಲಿಸಿದ ಮಾನಹಾನಿ ಮೊಕದ್ದಮೆಯನ್ನು ಸೋತ ನಂತರ ದಿ ವೈರ್ ನ್ಯೂಸ್ ಪೋರ್ಟಲ್ ಸುಪ್ರೀಂ ಕೋರ್ಟಿನಲ್ಲಿ ಕ್ಷಮೆಯಾಚಿಸಿದೆ ಎಂದು ಒಂದು ಸಂದೇಶ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಟ್ವಿಟರ್‌ನಲ್ಲಿ ಹಲವಾರು ಪ್ರಮುಖ ಹ್ಯಾಂಡಲ್‌ಗಳು ಈ ಸಂದೇಶ ಹಂಚಿಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿಯವರ ಚುನಾವಣೆಯ ನಂತರದ ವರ್ಷದಲಿ ಜಯ್ ಷಾ ಒಡೆತನದ ಕಂಪನಿಯ ವಹಿವಾಟು 16,000 ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಿ ದಿ ವೈರ್ ಅಕ್ಟೋಬರ್ 8, 2017 ರಂದು ಲೇಖನವೊಂದನ್ನು ಪ್ರಕಟಿಸಿತ್ತು.

ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಹರಿಓಂ ಪಾಂಡೆ ಮಾರ್ಚ್ 19 ರಂದು ಮೇಲಿನ ಕ್ಷಮಯಾಚನೆಯ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಪುಷ್ಪೇಂದ್ರ ಕುಲಶ್ರೇಷ್ಠರ ಹೆಸರಿನಲ್ಲಿರುವ ಒಂದು ನಕಲಿ ಖಾತೆಯು ಈ ಸಂದೇಶ ಹರಡಿ 15,000 ಲೈಕ್‌ಗಳನ್ನು ಗಳಿಸಿತು. @pushpendraamu ತಮ್ಮ ಬಯೋದಲ್ಲಿ ಬಿಜೆಪಿ ದೆಹಲಿ ಸೋಷಿಯಲ್ ಮೀಡಿಯಾ ಮತ್ತು ಐಟಿ ಬೌದ್ಧಿಕ ಸೆಲ್ ಹೆಡ್ ಎಂದು ಗುರುತಿಸಿಕೊಂಡಿರುವ ಸಂದೀಪ್ ಠಾಕೂರ್ ಕೂಡ ಇದೇ ರೀತಿ ಟ್ವೀಟ್ ಮಾಡಿದ್ದಾರೆ.

@ TheShivani5, @ SaritaKaushik05 @idineshdesai ಈ ಹ್ಯಾಂಡಲ್‌ಗಳು ಕೂಡ ಇದೇ ಸಂದೇಶ ಹಂಚಿಕೊಂಡಿವೆ. ಬಲಪಂಥೀಯ ಪ್ರಚಾರ ವೆಬ್‌ಸೈಟ್‌ನಲ್ಲಿ ಲೇಖಕರೆಂದು ಹೇಳಿಕೊಳ್ಳುವ @TheAshwinRaj ಎಂಬ ಬಳಕೆದಾರರು ಮತ್ತು ಬಿಜೆಪಿ ಸದಸ್ಯ ತರುಣ್ ರತಿ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ಸತ್ಯ: ವಿಚಾರಣೆಯೇ ಆರಂಭವಾಗಿಲ್ಲ!

“ಜಯ್ ಶಾ ಅವರು ದಿ ವೈರ್ ವಿರುದ್ಧ ಕ್ರಿಮಿನಲ್ ಮಾನಹಾನಿ ಮತ್ತು ಸಿವಿಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದರು, ಇದರಲ್ಲಿ ಅವರು 100 ಕೋಟಿ ರೂ. ಪರಿಹಾರ ಕೇಳಿದ್ದರು. ಆದರೆ ಆ ಪ್ರಕರಣದ ವಿಚಾರಣೆ ಕೂಡ ಪ್ರಾರಂಭವಾಗಿಲ್ಲ, ಮತ್ತು ಜನರು ಈ ವಿಲಕ್ಷಣ ಸುಳ್ಳುಗಳನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆಂದು ನನಗೆ ತಿಳಿದಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಬೇಕೆಂಬ ಮನವಿಯನ್ನು ಸ್ವೀಕರಿಸಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ, 2018 ರ ಜನವರಿಯಲ್ಲಿ ವೈರ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ.

“2018 ರಲ್ಲಿ ಎರಡನೇ ಅರ್ಜಿಯನ್ನು ಸಹ ಸಲ್ಲಿಸಲಾಯಿತು, ಜಯ್ ಅಮಿತ್ ಷಾ ಅವರ ವ್ಯವಹಾರಗಳ ಕುರಿತು ಹೆಚ್ಚಿನ ಪ್ರಕಟಣೆಯ ವಿರುದ್ಧ ತಡೆಯಾಜ್ಞೆ ನೀಡಿದಾಗ, ವಿಚಾರಣಾ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಗುಜರಾತ್ ಹೈಕೋರ್ಟ್ ಮಾನನಷ್ಟ ಅರ್ಜಿಯನ್ನು ಮತ್ತೆ ಎತ್ತಿ ಹಿಡಿಯಿತು ಎಂದು ದಿ ವೈರ್ ಹೇಳಿದೆ.

ನಂತರ ಪ್ರಕರಣ ವಜಾ ಮಾಡಬೇಕು ಎಂಬ ಎರಡೂ ಅರ್ಜಿಗಳನ್ನು ಹಿಂಪಡೆಯಲಾಯಿತು ಮತ್ತು ಪ್ರಕರಣವು ನೇರವಾಗಿ ವಿಚಾರಣೆಗೆ ಹೋಗಿದೆ.

ಜಯ್ ಷಾ ಕುರಿತು ಈ ವರದಿ ಮಾಡಿದ ಪತ್ರಕರ್ತೆ ರೋಹಿಣಿ ಸಿಂಗ್ ಕೂಡ, ಟ್ವಿಟರ್‌ನಲ್ಲಿ “ತಪ್ಪು ಮಾಹಿತಿ ಓಡಾಡುತ್ತಿದೆ. ವಿಚಾರಣಾ ನ್ಯಾಯಾಲಯದಲ್ಲಿ ಮೊದಲೇ ನೀವು ತೀರ್ಪನ್ನು ಉಚ್ಚರಿಸಿದ್ದೀರಿ” ಎಂದು ಬರೆದಿದ್ದಾರೆ.

ಜಯ್ ಶಾ ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಸೋತಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದೆ ಎಂದು ಸುಳ್ಳು ಸಂದೇಶವನ್ನು ಬಿಜೆಪಿಯ ಸದಸ್ಯರು ಮತ್ತು ಬೆಂಬಲಿಗರು ಹಂಚಿಕೊಂಡಿದ್ದಾರೆ, ಅಷ್ಟೇ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...