Homeಫ್ಯಾಕ್ಟ್‌ಚೆಕ್ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

- Advertisement -
- Advertisement -

ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಸಲ್ಲಿಸಿದ ಮಾನಹಾನಿ ಮೊಕದ್ದಮೆಯನ್ನು ಸೋತ ನಂತರ ದಿ ವೈರ್ ನ್ಯೂಸ್ ಪೋರ್ಟಲ್ ಸುಪ್ರೀಂ ಕೋರ್ಟಿನಲ್ಲಿ ಕ್ಷಮೆಯಾಚಿಸಿದೆ ಎಂದು ಒಂದು ಸಂದೇಶ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಟ್ವಿಟರ್‌ನಲ್ಲಿ ಹಲವಾರು ಪ್ರಮುಖ ಹ್ಯಾಂಡಲ್‌ಗಳು ಈ ಸಂದೇಶ ಹಂಚಿಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿಯವರ ಚುನಾವಣೆಯ ನಂತರದ ವರ್ಷದಲಿ ಜಯ್ ಷಾ ಒಡೆತನದ ಕಂಪನಿಯ ವಹಿವಾಟು 16,000 ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಿ ದಿ ವೈರ್ ಅಕ್ಟೋಬರ್ 8, 2017 ರಂದು ಲೇಖನವೊಂದನ್ನು ಪ್ರಕಟಿಸಿತ್ತು.

ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಹರಿಓಂ ಪಾಂಡೆ ಮಾರ್ಚ್ 19 ರಂದು ಮೇಲಿನ ಕ್ಷಮಯಾಚನೆಯ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಪುಷ್ಪೇಂದ್ರ ಕುಲಶ್ರೇಷ್ಠರ ಹೆಸರಿನಲ್ಲಿರುವ ಒಂದು ನಕಲಿ ಖಾತೆಯು ಈ ಸಂದೇಶ ಹರಡಿ 15,000 ಲೈಕ್‌ಗಳನ್ನು ಗಳಿಸಿತು. @pushpendraamu ತಮ್ಮ ಬಯೋದಲ್ಲಿ ಬಿಜೆಪಿ ದೆಹಲಿ ಸೋಷಿಯಲ್ ಮೀಡಿಯಾ ಮತ್ತು ಐಟಿ ಬೌದ್ಧಿಕ ಸೆಲ್ ಹೆಡ್ ಎಂದು ಗುರುತಿಸಿಕೊಂಡಿರುವ ಸಂದೀಪ್ ಠಾಕೂರ್ ಕೂಡ ಇದೇ ರೀತಿ ಟ್ವೀಟ್ ಮಾಡಿದ್ದಾರೆ.

@ TheShivani5, @ SaritaKaushik05 @idineshdesai ಈ ಹ್ಯಾಂಡಲ್‌ಗಳು ಕೂಡ ಇದೇ ಸಂದೇಶ ಹಂಚಿಕೊಂಡಿವೆ. ಬಲಪಂಥೀಯ ಪ್ರಚಾರ ವೆಬ್‌ಸೈಟ್‌ನಲ್ಲಿ ಲೇಖಕರೆಂದು ಹೇಳಿಕೊಳ್ಳುವ @TheAshwinRaj ಎಂಬ ಬಳಕೆದಾರರು ಮತ್ತು ಬಿಜೆಪಿ ಸದಸ್ಯ ತರುಣ್ ರತಿ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ಸತ್ಯ: ವಿಚಾರಣೆಯೇ ಆರಂಭವಾಗಿಲ್ಲ!

“ಜಯ್ ಶಾ ಅವರು ದಿ ವೈರ್ ವಿರುದ್ಧ ಕ್ರಿಮಿನಲ್ ಮಾನಹಾನಿ ಮತ್ತು ಸಿವಿಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದರು, ಇದರಲ್ಲಿ ಅವರು 100 ಕೋಟಿ ರೂ. ಪರಿಹಾರ ಕೇಳಿದ್ದರು. ಆದರೆ ಆ ಪ್ರಕರಣದ ವಿಚಾರಣೆ ಕೂಡ ಪ್ರಾರಂಭವಾಗಿಲ್ಲ, ಮತ್ತು ಜನರು ಈ ವಿಲಕ್ಷಣ ಸುಳ್ಳುಗಳನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆಂದು ನನಗೆ ತಿಳಿದಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಬೇಕೆಂಬ ಮನವಿಯನ್ನು ಸ್ವೀಕರಿಸಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ, 2018 ರ ಜನವರಿಯಲ್ಲಿ ವೈರ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ.

“2018 ರಲ್ಲಿ ಎರಡನೇ ಅರ್ಜಿಯನ್ನು ಸಹ ಸಲ್ಲಿಸಲಾಯಿತು, ಜಯ್ ಅಮಿತ್ ಷಾ ಅವರ ವ್ಯವಹಾರಗಳ ಕುರಿತು ಹೆಚ್ಚಿನ ಪ್ರಕಟಣೆಯ ವಿರುದ್ಧ ತಡೆಯಾಜ್ಞೆ ನೀಡಿದಾಗ, ವಿಚಾರಣಾ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಗುಜರಾತ್ ಹೈಕೋರ್ಟ್ ಮಾನನಷ್ಟ ಅರ್ಜಿಯನ್ನು ಮತ್ತೆ ಎತ್ತಿ ಹಿಡಿಯಿತು ಎಂದು ದಿ ವೈರ್ ಹೇಳಿದೆ.

ನಂತರ ಪ್ರಕರಣ ವಜಾ ಮಾಡಬೇಕು ಎಂಬ ಎರಡೂ ಅರ್ಜಿಗಳನ್ನು ಹಿಂಪಡೆಯಲಾಯಿತು ಮತ್ತು ಪ್ರಕರಣವು ನೇರವಾಗಿ ವಿಚಾರಣೆಗೆ ಹೋಗಿದೆ.

ಜಯ್ ಷಾ ಕುರಿತು ಈ ವರದಿ ಮಾಡಿದ ಪತ್ರಕರ್ತೆ ರೋಹಿಣಿ ಸಿಂಗ್ ಕೂಡ, ಟ್ವಿಟರ್‌ನಲ್ಲಿ “ತಪ್ಪು ಮಾಹಿತಿ ಓಡಾಡುತ್ತಿದೆ. ವಿಚಾರಣಾ ನ್ಯಾಯಾಲಯದಲ್ಲಿ ಮೊದಲೇ ನೀವು ತೀರ್ಪನ್ನು ಉಚ್ಚರಿಸಿದ್ದೀರಿ” ಎಂದು ಬರೆದಿದ್ದಾರೆ.

ಜಯ್ ಶಾ ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಸೋತಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದೆ ಎಂದು ಸುಳ್ಳು ಸಂದೇಶವನ್ನು ಬಿಜೆಪಿಯ ಸದಸ್ಯರು ಮತ್ತು ಬೆಂಬಲಿಗರು ಹಂಚಿಕೊಂಡಿದ್ದಾರೆ, ಅಷ್ಟೇ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...