Homeಫ್ಯಾಕ್ಟ್‌ಚೆಕ್ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

- Advertisement -
- Advertisement -

ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಸಲ್ಲಿಸಿದ ಮಾನಹಾನಿ ಮೊಕದ್ದಮೆಯನ್ನು ಸೋತ ನಂತರ ದಿ ವೈರ್ ನ್ಯೂಸ್ ಪೋರ್ಟಲ್ ಸುಪ್ರೀಂ ಕೋರ್ಟಿನಲ್ಲಿ ಕ್ಷಮೆಯಾಚಿಸಿದೆ ಎಂದು ಒಂದು ಸಂದೇಶ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಟ್ವಿಟರ್‌ನಲ್ಲಿ ಹಲವಾರು ಪ್ರಮುಖ ಹ್ಯಾಂಡಲ್‌ಗಳು ಈ ಸಂದೇಶ ಹಂಚಿಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿಯವರ ಚುನಾವಣೆಯ ನಂತರದ ವರ್ಷದಲಿ ಜಯ್ ಷಾ ಒಡೆತನದ ಕಂಪನಿಯ ವಹಿವಾಟು 16,000 ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಿ ದಿ ವೈರ್ ಅಕ್ಟೋಬರ್ 8, 2017 ರಂದು ಲೇಖನವೊಂದನ್ನು ಪ್ರಕಟಿಸಿತ್ತು.

ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಹರಿಓಂ ಪಾಂಡೆ ಮಾರ್ಚ್ 19 ರಂದು ಮೇಲಿನ ಕ್ಷಮಯಾಚನೆಯ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಪುಷ್ಪೇಂದ್ರ ಕುಲಶ್ರೇಷ್ಠರ ಹೆಸರಿನಲ್ಲಿರುವ ಒಂದು ನಕಲಿ ಖಾತೆಯು ಈ ಸಂದೇಶ ಹರಡಿ 15,000 ಲೈಕ್‌ಗಳನ್ನು ಗಳಿಸಿತು. @pushpendraamu ತಮ್ಮ ಬಯೋದಲ್ಲಿ ಬಿಜೆಪಿ ದೆಹಲಿ ಸೋಷಿಯಲ್ ಮೀಡಿಯಾ ಮತ್ತು ಐಟಿ ಬೌದ್ಧಿಕ ಸೆಲ್ ಹೆಡ್ ಎಂದು ಗುರುತಿಸಿಕೊಂಡಿರುವ ಸಂದೀಪ್ ಠಾಕೂರ್ ಕೂಡ ಇದೇ ರೀತಿ ಟ್ವೀಟ್ ಮಾಡಿದ್ದಾರೆ.

@ TheShivani5, @ SaritaKaushik05 @idineshdesai ಈ ಹ್ಯಾಂಡಲ್‌ಗಳು ಕೂಡ ಇದೇ ಸಂದೇಶ ಹಂಚಿಕೊಂಡಿವೆ. ಬಲಪಂಥೀಯ ಪ್ರಚಾರ ವೆಬ್‌ಸೈಟ್‌ನಲ್ಲಿ ಲೇಖಕರೆಂದು ಹೇಳಿಕೊಳ್ಳುವ @TheAshwinRaj ಎಂಬ ಬಳಕೆದಾರರು ಮತ್ತು ಬಿಜೆಪಿ ಸದಸ್ಯ ತರುಣ್ ರತಿ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ಸತ್ಯ: ವಿಚಾರಣೆಯೇ ಆರಂಭವಾಗಿಲ್ಲ!

“ಜಯ್ ಶಾ ಅವರು ದಿ ವೈರ್ ವಿರುದ್ಧ ಕ್ರಿಮಿನಲ್ ಮಾನಹಾನಿ ಮತ್ತು ಸಿವಿಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದರು, ಇದರಲ್ಲಿ ಅವರು 100 ಕೋಟಿ ರೂ. ಪರಿಹಾರ ಕೇಳಿದ್ದರು. ಆದರೆ ಆ ಪ್ರಕರಣದ ವಿಚಾರಣೆ ಕೂಡ ಪ್ರಾರಂಭವಾಗಿಲ್ಲ, ಮತ್ತು ಜನರು ಈ ವಿಲಕ್ಷಣ ಸುಳ್ಳುಗಳನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆಂದು ನನಗೆ ತಿಳಿದಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಬೇಕೆಂಬ ಮನವಿಯನ್ನು ಸ್ವೀಕರಿಸಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ, 2018 ರ ಜನವರಿಯಲ್ಲಿ ವೈರ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ.

“2018 ರಲ್ಲಿ ಎರಡನೇ ಅರ್ಜಿಯನ್ನು ಸಹ ಸಲ್ಲಿಸಲಾಯಿತು, ಜಯ್ ಅಮಿತ್ ಷಾ ಅವರ ವ್ಯವಹಾರಗಳ ಕುರಿತು ಹೆಚ್ಚಿನ ಪ್ರಕಟಣೆಯ ವಿರುದ್ಧ ತಡೆಯಾಜ್ಞೆ ನೀಡಿದಾಗ, ವಿಚಾರಣಾ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಗುಜರಾತ್ ಹೈಕೋರ್ಟ್ ಮಾನನಷ್ಟ ಅರ್ಜಿಯನ್ನು ಮತ್ತೆ ಎತ್ತಿ ಹಿಡಿಯಿತು ಎಂದು ದಿ ವೈರ್ ಹೇಳಿದೆ.

ನಂತರ ಪ್ರಕರಣ ವಜಾ ಮಾಡಬೇಕು ಎಂಬ ಎರಡೂ ಅರ್ಜಿಗಳನ್ನು ಹಿಂಪಡೆಯಲಾಯಿತು ಮತ್ತು ಪ್ರಕರಣವು ನೇರವಾಗಿ ವಿಚಾರಣೆಗೆ ಹೋಗಿದೆ.

ಜಯ್ ಷಾ ಕುರಿತು ಈ ವರದಿ ಮಾಡಿದ ಪತ್ರಕರ್ತೆ ರೋಹಿಣಿ ಸಿಂಗ್ ಕೂಡ, ಟ್ವಿಟರ್‌ನಲ್ಲಿ “ತಪ್ಪು ಮಾಹಿತಿ ಓಡಾಡುತ್ತಿದೆ. ವಿಚಾರಣಾ ನ್ಯಾಯಾಲಯದಲ್ಲಿ ಮೊದಲೇ ನೀವು ತೀರ್ಪನ್ನು ಉಚ್ಚರಿಸಿದ್ದೀರಿ” ಎಂದು ಬರೆದಿದ್ದಾರೆ.

ಜಯ್ ಶಾ ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಸೋತಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದೆ ಎಂದು ಸುಳ್ಳು ಸಂದೇಶವನ್ನು ಬಿಜೆಪಿಯ ಸದಸ್ಯರು ಮತ್ತು ಬೆಂಬಲಿಗರು ಹಂಚಿಕೊಂಡಿದ್ದಾರೆ, ಅಷ್ಟೇ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...