Homeಫ್ಯಾಕ್ಟ್‌ಚೆಕ್ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

ಜಯ್ ಶಾ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಕ್ಷಮೆ ಕೇಳಿತೆ? ಅಸಲಿ ಸಮಾಚಾರ ಇಲ್ಲಿದೆ!

- Advertisement -
- Advertisement -

ಸುಳ್ಳು ಆರೋಪ ಹೊರಿಸಿದ್ದಕ್ಕಾಗಿ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಷಾ ಅವರು ಸಲ್ಲಿಸಿದ ಮಾನಹಾನಿ ಮೊಕದ್ದಮೆಯನ್ನು ಸೋತ ನಂತರ ದಿ ವೈರ್ ನ್ಯೂಸ್ ಪೋರ್ಟಲ್ ಸುಪ್ರೀಂ ಕೋರ್ಟಿನಲ್ಲಿ ಕ್ಷಮೆಯಾಚಿಸಿದೆ ಎಂದು ಒಂದು ಸಂದೇಶ ಟ್ವಿಟರ್‌ನಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಟ್ವಿಟರ್‌ನಲ್ಲಿ ಹಲವಾರು ಪ್ರಮುಖ ಹ್ಯಾಂಡಲ್‌ಗಳು ಈ ಸಂದೇಶ ಹಂಚಿಕೊಂಡಿವೆ.

ಪ್ರಧಾನಿ ನರೇಂದ್ರ ಮೋದಿಯವರ ಚುನಾವಣೆಯ ನಂತರದ ವರ್ಷದಲಿ ಜಯ್ ಷಾ ಒಡೆತನದ ಕಂಪನಿಯ ವಹಿವಾಟು 16,000 ಪಟ್ಟು ಹೆಚ್ಚಾಗಿದೆ ಎಂದು ಆರೋಪಿಸಿ ದಿ ವೈರ್ ಅಕ್ಟೋಬರ್ 8, 2017 ರಂದು ಲೇಖನವೊಂದನ್ನು ಪ್ರಕಟಿಸಿತ್ತು.

ಬಿಜೆಪಿ ಮುಖಂಡ ಮತ್ತು ಮಾಜಿ ಸಂಸದ ಹರಿಓಂ ಪಾಂಡೆ ಮಾರ್ಚ್ 19 ರಂದು ಮೇಲಿನ ಕ್ಷಮಯಾಚನೆಯ ಸಂದೇಶವನ್ನು ಟ್ವೀಟ್ ಮಾಡಿದ್ದಾರೆ.

ಪತ್ರಕರ್ತ ಪುಷ್ಪೇಂದ್ರ ಕುಲಶ್ರೇಷ್ಠರ ಹೆಸರಿನಲ್ಲಿರುವ ಒಂದು ನಕಲಿ ಖಾತೆಯು ಈ ಸಂದೇಶ ಹರಡಿ 15,000 ಲೈಕ್‌ಗಳನ್ನು ಗಳಿಸಿತು. @pushpendraamu ತಮ್ಮ ಬಯೋದಲ್ಲಿ ಬಿಜೆಪಿ ದೆಹಲಿ ಸೋಷಿಯಲ್ ಮೀಡಿಯಾ ಮತ್ತು ಐಟಿ ಬೌದ್ಧಿಕ ಸೆಲ್ ಹೆಡ್ ಎಂದು ಗುರುತಿಸಿಕೊಂಡಿರುವ ಸಂದೀಪ್ ಠಾಕೂರ್ ಕೂಡ ಇದೇ ರೀತಿ ಟ್ವೀಟ್ ಮಾಡಿದ್ದಾರೆ.

@ TheShivani5, @ SaritaKaushik05 @idineshdesai ಈ ಹ್ಯಾಂಡಲ್‌ಗಳು ಕೂಡ ಇದೇ ಸಂದೇಶ ಹಂಚಿಕೊಂಡಿವೆ. ಬಲಪಂಥೀಯ ಪ್ರಚಾರ ವೆಬ್‌ಸೈಟ್‌ನಲ್ಲಿ ಲೇಖಕರೆಂದು ಹೇಳಿಕೊಳ್ಳುವ @TheAshwinRaj ಎಂಬ ಬಳಕೆದಾರರು ಮತ್ತು ಬಿಜೆಪಿ ಸದಸ್ಯ ತರುಣ್ ರತಿ ಕೂಡ ಇದನ್ನು ಹಂಚಿಕೊಂಡಿದ್ದಾರೆ.

ಸತ್ಯ: ವಿಚಾರಣೆಯೇ ಆರಂಭವಾಗಿಲ್ಲ!

“ಜಯ್ ಶಾ ಅವರು ದಿ ವೈರ್ ವಿರುದ್ಧ ಕ್ರಿಮಿನಲ್ ಮಾನಹಾನಿ ಮತ್ತು ಸಿವಿಲ್ ಮಾನಹಾನಿ ಪ್ರಕರಣವನ್ನು ದಾಖಲಿಸಿದ್ದರು, ಇದರಲ್ಲಿ ಅವರು 100 ಕೋಟಿ ರೂ. ಪರಿಹಾರ ಕೇಳಿದ್ದರು. ಆದರೆ ಆ ಪ್ರಕರಣದ ವಿಚಾರಣೆ ಕೂಡ ಪ್ರಾರಂಭವಾಗಿಲ್ಲ, ಮತ್ತು ಜನರು ಈ ವಿಲಕ್ಷಣ ಸುಳ್ಳುಗಳನ್ನು ಯಾವ ಆಧಾರದ ಮೇಲೆ ಮಾಡುತ್ತಿದ್ದಾರೆಂದು ನನಗೆ ತಿಳಿದಿಲ್ಲ” ಎಂದು ಆಲ್ಟ್ ನ್ಯೂಸ್‌ಗೆ ದಿ ವೈರ್‌ನ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಹೇಳಿದ್ದಾರೆ.

ಕ್ರಿಮಿನಲ್ ಮಾನಹಾನಿ ಪ್ರಕರಣವನ್ನು ರದ್ದುಗೊಳಿಸಬೇಕೆಂಬ ಮನವಿಯನ್ನು ಸ್ವೀಕರಿಸಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ನಂತರ, 2018 ರ ಜನವರಿಯಲ್ಲಿ ವೈರ್ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಹಾಕಿದೆ.

“2018 ರಲ್ಲಿ ಎರಡನೇ ಅರ್ಜಿಯನ್ನು ಸಹ ಸಲ್ಲಿಸಲಾಯಿತು, ಜಯ್ ಅಮಿತ್ ಷಾ ಅವರ ವ್ಯವಹಾರಗಳ ಕುರಿತು ಹೆಚ್ಚಿನ ಪ್ರಕಟಣೆಯ ವಿರುದ್ಧ ತಡೆಯಾಜ್ಞೆ ನೀಡಿದಾಗ, ವಿಚಾರಣಾ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿತ್ತು. ನಂತರ ಗುಜರಾತ್ ಹೈಕೋರ್ಟ್ ಮಾನನಷ್ಟ ಅರ್ಜಿಯನ್ನು ಮತ್ತೆ ಎತ್ತಿ ಹಿಡಿಯಿತು ಎಂದು ದಿ ವೈರ್ ಹೇಳಿದೆ.

ನಂತರ ಪ್ರಕರಣ ವಜಾ ಮಾಡಬೇಕು ಎಂಬ ಎರಡೂ ಅರ್ಜಿಗಳನ್ನು ಹಿಂಪಡೆಯಲಾಯಿತು ಮತ್ತು ಪ್ರಕರಣವು ನೇರವಾಗಿ ವಿಚಾರಣೆಗೆ ಹೋಗಿದೆ.

ಜಯ್ ಷಾ ಕುರಿತು ಈ ವರದಿ ಮಾಡಿದ ಪತ್ರಕರ್ತೆ ರೋಹಿಣಿ ಸಿಂಗ್ ಕೂಡ, ಟ್ವಿಟರ್‌ನಲ್ಲಿ “ತಪ್ಪು ಮಾಹಿತಿ ಓಡಾಡುತ್ತಿದೆ. ವಿಚಾರಣಾ ನ್ಯಾಯಾಲಯದಲ್ಲಿ ಮೊದಲೇ ನೀವು ತೀರ್ಪನ್ನು ಉಚ್ಚರಿಸಿದ್ದೀರಿ” ಎಂದು ಬರೆದಿದ್ದಾರೆ.

ಜಯ್ ಶಾ ಸಲ್ಲಿಸಿದ ಮಾನಹಾನಿ ಪ್ರಕರಣದಲ್ಲಿ ದಿ ವೈರ್ ಸೋತಿತು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಕ್ಷಮೆಯಾಚಿಸಿದೆ ಎಂದು ಸುಳ್ಳು ಸಂದೇಶವನ್ನು ಬಿಜೆಪಿಯ ಸದಸ್ಯರು ಮತ್ತು ಬೆಂಬಲಿಗರು ಹಂಚಿಕೊಂಡಿದ್ದಾರೆ, ಅಷ್ಟೇ.

(ಕೃಪೆ: ಅಲ್ಟ್ ನ್ಯೂಸ್)


ಇದನ್ನೂ ಓದಿ: ಎಡಪಕ್ಷಗಳ ಬೃಹತ್ ರ‍್ಯಾಲಿಯ ಫೋಟೊಗಳನ್ನು ಮೋದಿ ರ‍್ಯಾಲಿಯೆಂದು ತಪ್ಪಾಗಿ ಹಂಚಿದ ಬಿಜೆಪಿಗರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...