Homeಮುಖಪುಟಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ

- Advertisement -
- Advertisement -

ಸುಮಾರು ಎರಡು ದಶಕಗಳ ಹಿಂದೆ ಗುಜರಾತ್‌ನಲ್ಲಿ ನಡೆದ ಗಲಭೆಗಳ ಕುರಿತು ಬಿಬಿಸಿಯ ಎರಡು ಭಾಗಗಳ ಸಾಕ್ಷ್ಯಚಿತ್ರ ಸಿದ್ದಗೊಳಿಸಿದೆ. ಇದು ಅಂದಿನ ನರೇಂದ್ರ ಮೋದಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕ್ರಮವನ್ನು ಟೀಕಿಸಿದೆ. ಹಾಗಾಗಿ ಇದೀಗ ಕೇಂದ್ರ ಸರ್ಕಾರ ಈ ಸಾಕ್ಷ್ಯ ಚಿತ್ರವನ್ನು ನಿರ್ಭಂಧಿಸಿದೆ. ಸರ್ಕಾರದ ಈ ಕ್ರಮವನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕರೊಂದಿಗೆ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಸೇರಿಕೊಂಡಿದ್ದಾರೆ.

ಭಾನುವಾರ ನಡೆದ  ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅವರು, ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿರುವ “ಗಾಂಧಿ ಗೋಡ್ಸೆ: ಏಕ್ ಯುದ್ಧ್” ಚಲನಚಿತ್ರವನ್ನು ನಿಷೇಧಿಸುವಂತೆ ಕೋರಿದರು. ಇದೇ ವೇಳೆ, “ಕಳೆದ ವಾರ ಯೂಟ್ಯೂಬ್ ಮತ್ತು ಟ್ವಿಟ್ಟರ್ ಸೇರಿದಂತೆ ಸಾಮಾಜಿಕ ಮಾಧ್ಯಮಗಳಲ್ಲಿ “ಇಂಡಿಯಾ: ದಿ ಮೋದಿ ಕ್ವೆಶ್ಶನ್”  ಎನ್ನುವ ಬಿಬಿಸಿಯವರು ತಯಾರಿಸಿದ ಸಾಕ್ಷ್ಯಚಿತ್ರ ಬಗ್ಗೆ ಚರ್ಚೆಯಾಗತ್ತಿದೆ. ಸಾಕ್ಷ್ಯಚಿತ್ರದ ಮೊದಲ ಭಾಗವು ಇತ್ತೀಚೆಗೆ ಬಿಡುಗಡೆಯಾಗಿದೆ. ಈ ಬೆನ್ನಲ್ಲೇ ಈ ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರ ನಿರ್ಬಂಧಿಸುವ ಕ್ರಮಕ್ಕೆ ಪ್ರಯತ್ನಿಸಿದರು” ಎಂದರು.

ಇದನ್ನೂ ಓದಿ: ಆಳವಾದ ಸಂಶೋಧನೆ ನಡೆಸಿದ್ದೇವೆ: ಮೋದಿ ಕುರಿತು ಸಾಕ್ಷ್ಯಚಿತ್ರ ಸಮರ್ಥಿಸಿಕೊಂಡ ಬಿಬಿಸಿ

“ಗುಜರಾತ್ ಗಲಭೆ ನಡೆದಾಗ ಮುಖ್ಯಮಂತ್ರಿಯಾಗಿದ್ದ ಪ್ರಧಾನಿ ಮೋದಿಯವರ ಕುರಿತು ಬಿಬಿಸಿ ಸಾಕ್ಷ್ಯಚಿತ್ರದಲ್ಲಿ ಏನೇನು ಚರ್ಚೆಗಳು ನಡೆದಿವೆ ಎನ್ನುವ ಬಗ್ಗೆ ನೀವು ನೋಡುತ್ತಿದ್ದೀರಿ. ಮೋದಿ ಸರ್ಕಾರವು ವಸಾಹತುಶಾಹಿ ಕಾಲಕ್ಕೆ ಸಂಬಂಧಿಸಿದ ಕಾನೂನಿನ ಆಧಾರದ ಮೇಲೆ ಸಾಕ್ಷ್ಯಚಿತ್ರವನ್ನು ನಿರ್ಬಂಧಿಸಿದೆ” ಎಂದು ಲೋಕಸಭಾ ಸಂಸದರು ಕಾರ್ಯಕ್ರಮವೊಂದರಲ್ಲಿ ಹೇಳುತ್ತಿರುವುದು ಕೇಳಿಬರುತ್ತಿದೆ. ”ಗಲಭೆ ನಡೆದಾಗ ನೀವು ಮುಖ್ಯಮಂತ್ರಿಯಾಗಿರಲಿಲ್ಲವೇ..? ಬಿಲ್ಕಿಸ್ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ… ಕಾಂಗ್ರೆಸ್ ಸಂಸದರ ಹತ್ಯೆ” ಎಂದು ಎಹ್ಸಾನ್ ಜಾಫ್ರಿಯನ್ನು ಉಲ್ಲೇಖಿಸಿ ಓವೈಸಿ ಹೇಳಿದ್ದಾರೆ.

“ಇದೀಗ ಮಹಾತ್ಮ ಗಾಂಧಿಯನ್ನು ಕೊಂದ ಗೋಡ್ಸೆಯ ಮೇಲೆ ಚಲನಚಿತ್ರವನ್ನು ನಿರ್ಮಿಸಲಾಗುತ್ತಿದೆ. ಭಾರತದ ಪ್ರಧಾನಿ ಆ ಚಲನಚಿತ್ರವನ್ನು ನಿಷೇಧಿಸುತ್ತಾರೆಯೇ? ಚಿತ್ರದಲ್ಲಿ ಗಾಂಧಿಯನ್ನು ಏಕೆ ಕೊಲ್ಲಲಾಯಿತು  ಎಂಬುದರ ಕುರಿತು ಮಾತನಾಡುತ್ತದೆ. ಮತ್ತೊಂದೆಡೆ ಬಿಬಿಸಿ ಪಿಎಂ ಮೋದಿ ಬಗ್ಗೆ ತೋರಿಸಿದಾಗ ಅದು ಸಮಸ್ಯೆಯಾಗಿ ಕಾಣುತ್ತದೆ. ಮೋದಿ ಸಾಕ್ಷ್ಯಚಿತ್ರ ನಿಷೇಧಿಸುವವರಿಗೆ ಗಾಂಧಿ ಗೋಡ್ಸೆ ಚಿತ್ರ ಕಾಣಿಸಲಿಲ್ಲವೇ?: ಅಸಾದುದ್ದೀನ್ ಓವೈಸಿ ಗಾಂಧಿಗಿಂತ ನರೇಂದ್ರ ಮೋದಿ ದೊಡ್ಡವನಲ್ಲ” ಎಂದು ಓವೈಸಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಹೇಳಿದರು.

“ಏಕೆ ಈ ಪಕ್ಷಪಾತ? ಬಿಜೆಪಿ ಸಂಸದರು ಗಾಂಧಿಯನ್ನು ಕೊಂದ ಗೋಡ್ಸೆಯನ್ನು ಹೊಗಳಲಿಲ್ಲವೇ? ಯಾವ ರೀತಿಯ ಭಾರತವನ್ನು ರಚಿಸಲಾಗುತ್ತಿದೆ. ಜಿ-20 ಪೋಸ್ಟರ್‌ಗಳಲ್ಲಿ  ಭಾರತವನ್ನು ಪ್ರಜಾಪ್ರಭುತ್ವ ಎಂದು ಅನುಮೋದಿಸಲಾಗುತ್ತಿದೆ ಆದರೆ ಯೂಟ್ಯೂಬ್‌ನಲ್ಲಿ ಚಿತ್ರಗಳನ್ನು ನಿಷೇಧಿಸುವ ಕ್ರಮ ಅನುಸರಿಸುತ್ತಿದೆ. ಇದೆಂತಹ ಪ್ರಜಾಪ್ರಭುತ್ವ” ಎಂದು ಅವರು ಮತ್ತಷ್ಟು ಒತ್ತಿ ಹೇಳಿದರು.

ಸಾಕ್ಷ್ಯಚಿತ್ರವನ್ನು ಕೇಂದ್ರ ಸರ್ಕಾರವು “ಪ್ರಚಾರದ ತುಣುಕು” ಎಂದು ತಳ್ಳಿಹಾಕಿದ್ದರೂ ಸಹ, ಈ ಹಿಂದೆ ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ನಾಯಕರು ಸಾಕ್ಷ್ಯಚಿತ್ರದ ನಡೆಯನ್ನು ಪ್ರಶ್ನಿಸಿದ್ದರು. ಕಾನೂನು ಸಚಿವ ಕಿರಣ್ ರಿಜಿಜು ಭಾನುವಾರ ಇದನ್ನು “ದುರುದ್ದೇಶಪೂರಿತ” ಎಂದು ಟ್ಯಾಗ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...