Homeಕರೋನಾ ತಲ್ಲಣಮಾಸ್ಕ್ ಇಲ್ಲದ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ಏಕಿಲ್ಲ? ಹೈಕೋರ್ಟ್ ಪ್ರಶ್ನೆ

ಮಾಸ್ಕ್ ಇಲ್ಲದ ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ಏಕಿಲ್ಲ? ಹೈಕೋರ್ಟ್ ಪ್ರಶ್ನೆ

ರಾಜಕೀಯ ನಾಯಕರು, ಗಣ್ಯರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿರುವುದು ಫೋಟೋಗಳಲ್ಲೇ ಸ್ಪಷ್ಟವಾಗಿ ಕಾಣುತ್ತಿದೆ. ಆದರೆ, ಅವರ ವಿರುದ್ಧ ಸರ್ಕಾರ ಕ್ರಮ ಜರುಗಿಸಿಲ್ಲ.

- Advertisement -
- Advertisement -

ಮಾಸ್ಕ್ ಧರಿಸದ, ದೈಹಿಕ ಅಂತರ ಪಾಲಿಸದೆ ಕೊರೊನಾ ನಿಯಮಗಳನ್ನು ಉಲ್ಲಂಘಿಸುವ ಸಾಮಾನ್ಯ ಜನರಿಗೆ ಮಾತ್ರ ದಂಡ ವಿಧಿಸುತ್ತೀರಿ. ಅದೇ ನಿಯಮಗಳು ರಾಜಕೀಯ ರ್‍ಯಾಲಿಗಳಲ್ಲಿ ಭಾಗವಹಿಸಿದ್ದಾಗ ಮಾಸ್ಕ್ ಧರಿಸದೆ, ದೈಹಿಕ ಅಂತರ ಪಾಲಿಸದ ರಾಜಕೀಯ ನಾಯಕರಿಗ್ಯಾಕಿಲ್ಲ? ಎಂದು ಹೈಕೋರ್ಟ್ ರಾಜ್ಯ ಸರ್ಕಾರವನ್ನು ಕಟುವಾಗಿ ಪ್ರಶ್ನಿಸಿದೆ.

ಮಾಸ್ಕ್ ಧರಿಸದೇ ನಿಯಮ ಉಲ್ಲಂಘಿಸಿದ ರಾಜಕಾರಣಿಗಳ ವಿರುದ್ಧ ಮಾತ್ರ ಯಾವುದೇ ಕ್ರಮ ಜರುಗಿಸಿಲ್ಲ. ಕೇವಲ ಸಾಮಾನ್ಯ ಜನರಿಗಷ್ಟೇ ಕಾನೂನು ಇದೆಯೇ? ಅವರು ಮಾತ್ರ ದಂಡ ಪಾವತಿಸಬೇಕೆ ಎಂದು ಹೈಕೋರ್ಟ್ ಕೇಳಿದೆ.

ಕೊರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕೆಂದು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಲೆಟ್ಜ್ ಕಿಟ್‌ ಸಂಸ್ಥೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕ ಅವರ ನೇತೃತ್ವದ ವಿಭಾಗೀಯ ಪೀಠ ಅರ್ಜಿ ವಿಚಾರಣೆ ಮಾಡುತ್ತಿದೆ.

ರಾಜಕೀಯ ನಾಯಕರು, ಗಣ್ಯರು ಕೊರೊನಾ ನಿಯಮಗಳನ್ನು ಉಲ್ಲಂಘಿಸಿರುವುದು ಫೋಟೋಗಳಲ್ಲೇ ಸ್ಪಷ್ಟವಾಗಿ ಕಾಣುತ್ತಿದೆ. ಆದರೆ, ಅವರ ವಿರುದ್ಧ ದಂಡ ಸಂಗ್ರಹಿಸಿಲ್ಲ. ಸರ್ಕಾರ ಕ್ರಮ ಜರುಗಿಸಿಲ್ಲ. ಬದಲಿಗೆ ಕ್ರಮ ಜರುಗಿಸಲಾಗುತ್ತಿದೆ ಎಂಬುದಾಗಿ ಉತ್ತರ ನೀಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಇದನ್ನೂ ಓದಿ: ತೇಜಸ್ವಿ ಸೂರ್ಯನ ಕೋಮುವಾದಿ ಭಾಷಣ ಬೇಡ: ಜರ್ಮನ್ ಭಾರತೀಯರ ಒತ್ತಾಯ

ಸೆ.30 ರಂದು ಸಂಸದ ತೇಜಸ್ವಿ ಸೂರ್ಯರನ್ನು ವಿಮಾನ ನಿಲ್ದಾಣದಿಂದ ಪಕ್ಷದ ಕಚೇರಿಗೆ ಸ್ವಾಗತಿಸುವ ವೇಳೆ ನಡೆದ ರ್‍ಯಾಲಿಯಲ್ಲಿ ತೇಜಸ್ವಿ ಮಾಸ್ಕ್ ಧರಿಸಿದ್ದರು. ಅಲ್ಲಿದ್ದ ಕಾರ್ಯಕರ್ತರು ಮಾಸ್ಕ್ ಧರಿಸದೇ ಇರುವುದು ಹಾಗೂ ದೈಹಿಕ ಅಂತರ ಕಾಯ್ದುಕೊಳ್ಳದೇ ಇರುವುದು ಕಂಡುಬಂದಿದೆ ಎಂದು ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ಮಾಹಿತಿ ನೀಡಿತು.

ಆದರೆ, ವಕೀಲ ಜಿ.ಆರ್. ಮೋಹನ್ ಪೋಟೊಗಳ ಸಹಿತ ಸಲ್ಲಿಸಿರುವ ಮೆಮೊದಲ್ಲಿ ಸಂಸದ ಸೇರಿದಂತೆ ಯಾರೂ ಕೂಡ ಆ ದಿನ ಮಾಸ್ಕ್‌ಗಳನ್ನು ಧರಿಸಿರಲಿಲ್ಲ. ಸುರಕ್ಷಿತ ಅಂತರ ಕಾಯ್ದುಕೊಂಡಿರಲಿಲ್ಲ. ರ್‍ಯಾಲಿಯ ಆಯೋಜನೆಯ ವೇಳೆ ಪಾಲಿಸಬೇಕಾದ ಕೇಂದ್ರ ಸರಕಾರದ ಎಸ್‌ಒಪಿ ನಿಯಮವನ್ನು ಉಲ್ಲಂಘಿಸಲಾಗಿದೆ ಎಂದು ಹೇಳಿದ್ದಾರೆ.

ಮಾಸ್ಕ್‌ಗಳನ್ನು ಧರಿಸದೇ ಇರುವುದಕ್ಕೆ ಸಂಸತ್ ಸದಸ್ಯ (ತೇಜಸ್ವಿ ಸೂರ್ಯ) ಹಾಗೂ ಇತರ ರಾಜಕೀಯ ಮುಖಂಡರಿಂದ ನೀವು ದಂಡ ಸಂಗ್ರಹಿಸಿದ್ದೀರಾ? ರಾಜಕಾರಣಿಗಳ ವಿರುದ್ಧ ಏಕೆ ಎಫ್‌ಐಆರ್‌ ದಾಖಲಿಸಿಲ್ಲ? ಕಠಿಣ ಕ್ರಮ ಜರುಗಿಸಲು ಹಿಂದೇಟು ಹಾಕುತ್ತಿರುವ ಸರ್ಕಾರವು ಸಮಾಜಕ್ಕೆ ಯಾವ ಸಂದೇಶ ರವಾನಿಸುತ್ತಿದೆ ಎಂದು ನ್ಯಾಯಪೀಠ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿರುವ ಸರ್ಕಾರದ ಪರ ವಕೀಲರು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾದ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ ನಡೆಸಿದ ರ್‍ಯಾಲಿಯಲ್ಲಿ ಭಾಗವಹಿಸಿದ್ದವರ ವಿರುದ್ಧ ಹಾಗೂ ಆರ್‌.ಆರ್‌.ನಗರ ಚುನಾವಣಾ ಪ್ರಚಾರದಲ್ಲಿ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು.

ದೂರು ದಾಖಲಾದ ನಂತರ ಈ ಸಂಬಂಧ ಕೈಗೊಂಡ ಕ್ರಮಗಳೇನು ಎಂದು ನ್ಯಾಯಪೀಠ ಪ್ರಶ್ನಿಸಿತು. ಜೊತೆಗೆ, ರ್‍ಯಾಲಿಯಲ್ಲಿ ಮಾಸ್ಕ್‌ ಧರಿಸದ ಹಾಗೂ ದೈಹಿಕ ಅಂತರ ಪಾಲಿಸದವರ ವಿರುದ್ಧ ಪೋಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಕುರಿತುನಗರ ಪೊಲೀಸ್‌ ಆಯುಕ್ತರು ವಿವರಣೆ ನೀಡಬೇಕು ಎಂದು ಸೂಚಿಸಿ ವಿಚಾರಣೆಯನ್ನು ನವೆಂಬರ್‌ 9ಕ್ಕೆ ಮುಂದೂಡಿದೆ.


ಇದನ್ನೂ ಓದಿ: ’ಬೆಂಗಳೂರು ಭಯೋತ್ಪಾದಕ ಚಟುವಟಿಕೆಗಳ ಕೇಂದ್ರ’: ಸಂಸದ ತೇಜಸ್ವಿ ಸೂರ್ಯ ಹೇಳಿಕೆಗೆ ವ್ಯಾಪಕ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...