Homeಮುಖಪುಟನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ಸ್ವಾತಂತ್ರ್ಯ ಹೋರಾಟಗಾರ ಪಿಂಗಾಳಿ ವೆಂಕಯ್ಯ ಎಂಬವರು ಸ್ವರಾಜ್ಯ ಧ್ವಜವನ್ನು ಮೊದಲು ವಿನ್ಯಾಸಗೊಳಿಸಿದ್ದರು. ಅದರಲ್ಲಿ ಈಗಿರುವ ಅಶೋಕ ಚಕ್ರದ ಬದಲಿಗೆ ಚರಕವಿತ್ತು.

- Advertisement -
- Advertisement -

ಇತ್ತೀಚೆಗೆ ಆರೆಸ್ಸೆಸ್ ಸಂಘಟನೆಯ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟ “ಕೇಸರಿ ನಮ್ಮ ಅಸಲಿ ರಾಷ್ಟ್ರಧ್ವಜ, ಮತ್ತೆ ಮುಸ್ಲಿಮರು ಗಲಾಟೆ ಮಾಡಿದ್ದಕ್ಕೆ ಒಂದು ಹಸಿರು ಬಟ್ಟೆಯ ತುಂಡನ್ನು ಅದಕ್ಕೆ ಜೋಡಿಸಿದ್ದು” ಎಂದು  ಮಾತನಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಅಲ್ಲಿದ್ದ 90% ಮಂದಿ ಕುರುಡಾಗಿ ನಂಬಿರುತ್ತಾರೆ.ಯಾಕೆಂದರೆ ಆತನ ಭಾಷಣ ಆಲಿಸಲು ಹೋಗುವವರೆಲ್ಲಾ ಯೋಚಿಸಿ ಪರಾಮರ್ಶಿಸುವ ಗುಣ ಉಳ್ಳವರಲ್ಲ. ಇನ್ನು ಮಾಧ್ಯಮಗಳು ಸಹ ಅದನ್ನೆ ಪ್ರಸಾರ ಮಾಡುತ್ತಿವೆ. ಈ ಸಂದರ್ಭದಲ್ಲಿ ನಮ್ಮ ರಾಷ್ಟ್ರ ಧ್ವಜದ ಮತ್ತು ರಾಷ್ಟ್ರೀಯ ಲಾಂಛನ ವಿನ್ಯಾಸದ ನಿಜವಾದ ಕತೆಯನ್ನು ಹೆಚ್ಚೆಚ್ಚು ಪ್ರಚಾರ ಮಾಡಬೇಕಾದುದು ಕಾಲದ ಜರೂರು ಕೂಡಾ.

ರಾಷ್ಟ್ರ ಧ್ವಜದ ಬಣ್ಣಗಳು ಯಾವುದೇ ಧರ್ಮ ಜಾತಿ ಪಂಗಡವನ್ನು ಸಂಕೇತಿಸುವುದಿಲ್ಲ.ಕೇಸರಿ ಹಿಂದೂ ಅಲ್ಲ, ಹಸಿರು ಮುಸ್ಲಿಂ ಕೂಡಾ ಅಲ್ಲ. ಬದಲಿಗೆ;

  • ಕೇಸರಿ ತ್ಯಾಗದ ಸಂಕೇತ.
  • ಬಿಳಿ ಶಾಂತಿಯ ಸಂಕೇತ.
  • ಹಸಿರು ಸಮೃದ್ಧಿಯ ಸಂಕೇತ.

ಸ್ವಾತಂತ್ರ್ಯ ಹೋರಾಟಗಾರ ಪಿಂಗಾಳಿ ವೆಂಕಯ್ಯ ಎಂಬವರು ಸ್ವರಾಜ್ಯ ಧ್ವಜವನ್ನು ಮೊದಲು ವಿನ್ಯಾಸಗೊಳಿಸಿದ್ದರು. ಅದರ ಬಣ್ಣ ಈಗಿನ ರಾಷ್ಟ್ರಧ್ವಜದ ಬಣ್ಣವನ್ನು ಹೋಲುತ್ತಿತ್ತು. ಈಗಿರುವ ಅಶೋಕ ಚಕ್ರದ ಬದಲಿಗೆ ಚರಕವಿತ್ತು. ಅದನ್ನೇ ರಾಷ್ಟ್ರಧ್ಚಜ ಮಾಡುವ ಬಗ್ಗೆ ಆಗಿನ ಅನೇಕ ಮುಖಂಡರ ಒಲವಿತ್ತು. ಆದರೆ ಅದಕ್ಕೆ ಭಿನ್ನಮತ ಬಂದಾಗ ಡಾ. ಬಾಬು ರಾಜೇಂದ್ರ ಪ್ರಸಾದರ ನೇತೃತ್ವದಲ್ಲಿ ಫ್ಲ್ಯಾಗ್ ಕಮಿಟಿಯೊಂದನ್ನು ರೂಪಿಸಲಾಯಿತು.

ಈ ಸಮಿತಿಯಲ್ಲಿ ನಾಗರಿಕ ಸೇವಾ ಪರೀಕ್ಷೆ ಉತ್ತೀರ್ಣರಾಗಿದ್ದ ಬದ್ರುದ್ದೀನ್ ತಯ್ಯ್‌ಬ್‌ಜಿ ಅವರೂ ಸದಸ್ಯರಾಗಿದ್ದರು. ಬದ್ರುದ್ದೀನ್ ತಯ್ಯ‌ಬ್‌ಜಿ ಅವರಿಗೆ ದೇಶ ವಿಭಜನೆಯ ಕಾರ್ಯಾಚರಣೆ ನಡೆಯುತ್ತಿದ್ದಾಗ ನೀವು ಪಾಕಿಸ್ತಾನಕ್ಕೆ ಬರಬೇಕೆಂದೂ, ನಿಮಗೆ ಪಾಕಿಸ್ತಾನದಲ್ಲಿ ಉನ್ನತವಾದ ಸ್ಥಾನಮಾನ ನೀಡಲಾಗುವುದೆಂದೂ ಮುಸ್ಲಿಮ್ ಲೀಗಿನ ಮುಖಂಡರು ಆಹ್ವಾನ ನೀಡಿದ್ದರು. ಅದಕ್ಕೆ ಬದ್ರುದ್ದೀನ್ ತಯ್ಯ್‌ಬ್‌ಜಿ ಅವರು ಮುಸ್ಲಿಂ ಲೀಗ್ ಮುಖಂಡರಿಗೆ ತನ್ನ ನಿಲುವನ್ನು ಸ್ಪಷ್ಟವಾಗಿ ವಿವರಿಸುವ ಪತ್ರದ ಮೂಲಕ ಉತ್ತರ ನೀಡಿದರು. ಅದರ ಸಾರಾಂಶ ಹೀಗಿದೆ.

ಬದ್ರುದ್ದೀನ್ ತಯ್ಯ್‌ಬ್‌ಜಿ ಮತ್ತು ಸುರಯ್ಯಾ ತಯ್ಯ್‌ಬ್‌ಜಿ

“ಪಾಕಿಸ್ತಾನದ ಜೊತೆಗೆ ಬಂದರೆ ನನಗೆ ನೀವು ಉನ್ನತ ಸ್ಥಾನಮಾನವೇನೋ ನೀಡಬಹುದು. ಆದರೆ ನಾನು ಧರ್ಮಾಧಾರಿತ ರಾಷ್ಟ್ರದಲ್ಲಿ ಇರಬಯಸುವುದಿಲ್ಲ. ಅಲ್ಲದೆ ನಾನು ಮುಸ್ಲಿಂ ‌ಲೀಗ್‌ನ ಸಿದ್ಧಾಂತವನ್ನು ಒಪ್ಪುವುದಿಲ್ಲ. ನಾನು ಯಾವುದೇ ಕಾರಣಕ್ಕೂ ನನ್ನ ಮಾತೃಭೂಮಿ ತೊರೆದು ಬರಲಾರೆ. ಇನ್ನು ಮನವೊಲಿಸುವ ಪ್ರಯತ್ನ ಮುಂದುವರಿಸದಿರಿ”

ಫ್ಯ್ಲಾಗ್ ಕಮಿಟಿ ಧ್ವಜದ ವಿನ್ಯಾಸಗಳನ್ನು ಮತ್ತು ರಾಷ್ಟ್ರೀಯ ಲಾಂಛನದ ವಿನ್ಯಾಸಗಳನ್ನು ತಯಾರಿಸಿ ಕಳುಹಿಸುವಂತೆ ಎಲ್ಲಾ ಶಾಲೆಗಳಿಗೆ ಪತ್ರಗಳನ್ನು ಕಳುಹಿಸಿತು. ಜವಾಹರ್‌ಲಾಲ್ ನೆಹರೂ ಅವರು ಬದ್ರುದ್ದೀನ್ ತಯ್ಯ್‌ಬ್‌ಜಿ ಅವರನ್ನು ಕರೆದು,“ಬದ್ರ್.. ನೀವಿದರಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳಬೇಕು. ಮತ್ತು ವಿನ್ಯಾಸದಲ್ಲಿ ನಿಮ್ಮ ಪ್ರಮುಖ ಪಾತ್ರವನ್ನು ನಾನು ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದರು.

ಬದ್ರುದ್ದೀನ್ ತಯ್ಯ‌ಬ್‌ಜಿಯವರ ಪತ್ನಿ ಸುರಯ್ಯಾ ತಯ್ಯ್‌ಬ್‌ಜಿ ಆ ಕಾಲದ ಪ್ರಸಿದ್ಧ ಲೇಖಕಿಯಾಗಿದ್ದರು. ಧ್ವಜ ವಿನ್ಯಾಸ ಮತ್ತು ಲಾಂಛನ ವಿನ್ಯಾಸ ಕಾರ್ಯದಲ್ಲಿ ಅವರು ಗಂಭೀರವಾಗಿ ತೊಡಗಿಸಿಕೊಂಡರು. ಅವರು ಕೇಸರಿ ಬಿಳಿ ಹಸಿರು ಮತ್ತು ಮಧ್ಯೆ ಕಪ್ಪು ಬಣ್ಣದ ಅಶೋಕ ಚಕ್ರವಿರುವ ವಿನ್ಯಾಸವನ್ನು ತಯಾರಿಸಿ ಕಳುಹಿಸಿದರು. ಮತ್ತು ನಾಲ್ಕು ಸಿಂಹಗಳ ಮುಖವನ್ನು ರಾಷ್ಟ್ರೀಯ ಲಾಂಛನದ ಆಯ್ಕೆಗೆ ಕಳುಹಿಸಿದರು.

ಅದಾಗಲೇ ನೂರಾರು ಧ್ವಜ ವಿನ್ಯಾಸಗಳು ಮತ್ತು‌ ಲಾಂಛನ ವಿನ್ಯಾಸಗಳು ಆಯ್ಕೆ ಕೋರಿ ಬಂದಿತ್ತು.
ಹೆಚ್ಚಿನವುಗಳಲ್ಲಿ ಬ್ರಿಟಿಷ್ ಧ್ವಜ ಮತ್ತು‌ ಲಾಂಛನದ ಪ್ರಭಾವ ಎದ್ದು ಕಾಣುತ್ತಿದ್ದವು. ಅವುಗಳನ್ನೆಲ್ಲಾ ಫ್ಲ್ಯಾಗ್ ಕಮಿಟಿ ತಿರಸ್ಕರಿಸಿತು. ಕೊನೆಯ ಸುತ್ತಿಗೆ ಕೆಲವನ್ನು ಆಯ್ಕೆ ಮಾಡಲಾಗಿತ್ತು. ಅಂತಿಮವಾಗಿ ಸುರಯ್ಯಾ ತಯ್ಯ್‌ಬ್‌ಜಿ ವಿನ್ಯಾಸಗೊಳಿಸಿದ ಧ್ವಜ ಸರ್ವಾನುಮತದ ಆಯ್ಕೆಯಾಯಿತು. ಗಾಂಧೀಜಿಯವರು ಅದರಲ್ಲೊಂದು ಪುಟ್ಟ ಬದಲಾವಣೆ ಮಾಡಿದರು. ಸುರಯ್ಯಾ ಅವರ ವಿನ್ಯಾಸದಲ್ಲಿ ಅಶೋಕ ಚಕ್ರವು ಕಪ್ಪು ಬಣ್ಣದಲ್ಲಿತ್ತು, ಗಾಂಧೀಜಿ ಅದಕ್ಕೆ ನೀಲಿ ಬಣ್ಣ ಕೊಡುವಂತೆ ಸಲಹೆ ನೀಡಿದರು.

ರಾಷ್ಟ್ರೀಯ ಲಾಂಛನಕ್ಕೆ ಹುಲಿ, ಚಿರತೆ, ಕರಡಿ, ಹಂಸ ಮುಂತಾದ ಪ್ರಾಣಿ ಪಕ್ಷಿಗಳ ವಿನ್ಯಾಸವಿರುವವುಗಳು ಕೂಡಾ ಸುರಯ್ಯಾ ತಯ್ಯ್‌ಬ್‌ಜಿ ಅವರ ವಿನ್ಯಾಸದ ಜೊತೆಗೆ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿತ್ತು. ಅಂತಿಮವಾಗಿ ಸುರಯ್ಯಾ ತಯ್ಯಬ್‌ಜಿ ಅವರು ವಿನ್ಯಾಸಗೊಳಿಸಿದ ನಾಲ್ಕು ಸಿಂಹಗಳು ರಾಷ್ಟ್ರೀಯ ಲಾಂಛನವಾಗಿ ಆಯ್ಕೆಗೊಂಡಿತು. ಭಾರತ ಸರಕಾರದ ಯಾವುದೇ ಪತ್ರದಲ್ಲಿರುವ ಮತ್ತು ಧ್ವಜ ಸ್ಥಂಭದ ಬುಡದಲ್ಲಿ ನಾಲ್ಕು‌ ಸಿಂಹಗಳ ಚಿಹ್ನೆ ಸುರಯ್ಯಾ ತಯ್ಯ್‌ಬ್‌ಜಿ ಅವರು ವಿನ್ಯಾಸಗೊಳಿಸಿದ್ದು. 1947ರಲ್ಲಿ ಇದನ್ನು ಭಾರತ ಸರಕಾರ ಆಯ್ಕೆ ಮಾಡುವಾಗ ಸುರಯ್ಯಾರಿಗಿನ್ನೂ ಇಪ್ಪತ್ತೆಂಟು ವರ್ಷ ವಯಸ್ಸು.

ಇದು ಆಗಿನ ಮುಸ್ಲಿಮರ ರಾಷ್ಟ್ರೀಯತೆ, ಮುಸ್ಲಿಮರ ದೇಶಪ್ರೇಮವನ್ನು ತೋರಿಸುತ್ತದೆ. ಈ ದೇಶ ಕಟ್ಟಲು ನಮ್ಮ ಹಿರಿಯರು ಕೊಟ್ಟ ಕೊಡುಗೆ, ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಯಾರಿಂದಲೂ ಸಾಧ್ಯವಿಲ್ಲ.

(ಆಧಾರ : ದಿ ವೈರ್‌ನಲ್ಲಿ ಸುರಯ್ಯಾ- ಬದ್ರುದ್ದೀನ್ ದಂಪತಿಗಳ ಪುತ್ರಿ ಲೈಲಾ ತಯ್ಯ್‌ಬ್‌ಜಿ 2018ರಲ್ಲಿ ಬರೆದ ಲೇಖನ)

ಇದನ್ನೂ ಓದಿ: ಭಾರತದ ಮೂರು ಬಣ್ಣಗಳು; ತ್ರಿವರ್ಣ ಧ್ವಜ ತಯಾರಕರ ನಲಿವು-ನೋವುಗಳು: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...