Homeಮುಖಪುಟನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ಸ್ವಾತಂತ್ರ್ಯ ಹೋರಾಟಗಾರ ಪಿಂಗಾಳಿ ವೆಂಕಯ್ಯ ಎಂಬವರು ಸ್ವರಾಜ್ಯ ಧ್ವಜವನ್ನು ಮೊದಲು ವಿನ್ಯಾಸಗೊಳಿಸಿದ್ದರು. ಅದರಲ್ಲಿ ಈಗಿರುವ ಅಶೋಕ ಚಕ್ರದ ಬದಲಿಗೆ ಚರಕವಿತ್ತು.

- Advertisement -
- Advertisement -

ಇತ್ತೀಚೆಗೆ ಆರೆಸ್ಸೆಸ್ ಸಂಘಟನೆಯ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟ “ಕೇಸರಿ ನಮ್ಮ ಅಸಲಿ ರಾಷ್ಟ್ರಧ್ವಜ, ಮತ್ತೆ ಮುಸ್ಲಿಮರು ಗಲಾಟೆ ಮಾಡಿದ್ದಕ್ಕೆ ಒಂದು ಹಸಿರು ಬಟ್ಟೆಯ ತುಂಡನ್ನು ಅದಕ್ಕೆ ಜೋಡಿಸಿದ್ದು” ಎಂದು  ಮಾತನಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಅಲ್ಲಿದ್ದ 90% ಮಂದಿ ಕುರುಡಾಗಿ ನಂಬಿರುತ್ತಾರೆ.ಯಾಕೆಂದರೆ ಆತನ ಭಾಷಣ ಆಲಿಸಲು ಹೋಗುವವರೆಲ್ಲಾ ಯೋಚಿಸಿ ಪರಾಮರ್ಶಿಸುವ ಗುಣ ಉಳ್ಳವರಲ್ಲ. ಇನ್ನು ಮಾಧ್ಯಮಗಳು ಸಹ ಅದನ್ನೆ ಪ್ರಸಾರ ಮಾಡುತ್ತಿವೆ. ಈ ಸಂದರ್ಭದಲ್ಲಿ ನಮ್ಮ ರಾಷ್ಟ್ರ ಧ್ವಜದ ಮತ್ತು ರಾಷ್ಟ್ರೀಯ ಲಾಂಛನ ವಿನ್ಯಾಸದ ನಿಜವಾದ ಕತೆಯನ್ನು ಹೆಚ್ಚೆಚ್ಚು ಪ್ರಚಾರ ಮಾಡಬೇಕಾದುದು ಕಾಲದ ಜರೂರು ಕೂಡಾ.

ರಾಷ್ಟ್ರ ಧ್ವಜದ ಬಣ್ಣಗಳು ಯಾವುದೇ ಧರ್ಮ ಜಾತಿ ಪಂಗಡವನ್ನು ಸಂಕೇತಿಸುವುದಿಲ್ಲ.ಕೇಸರಿ ಹಿಂದೂ ಅಲ್ಲ, ಹಸಿರು ಮುಸ್ಲಿಂ ಕೂಡಾ ಅಲ್ಲ. ಬದಲಿಗೆ;

  • ಕೇಸರಿ ತ್ಯಾಗದ ಸಂಕೇತ.
  • ಬಿಳಿ ಶಾಂತಿಯ ಸಂಕೇತ.
  • ಹಸಿರು ಸಮೃದ್ಧಿಯ ಸಂಕೇತ.

ಸ್ವಾತಂತ್ರ್ಯ ಹೋರಾಟಗಾರ ಪಿಂಗಾಳಿ ವೆಂಕಯ್ಯ ಎಂಬವರು ಸ್ವರಾಜ್ಯ ಧ್ವಜವನ್ನು ಮೊದಲು ವಿನ್ಯಾಸಗೊಳಿಸಿದ್ದರು. ಅದರ ಬಣ್ಣ ಈಗಿನ ರಾಷ್ಟ್ರಧ್ವಜದ ಬಣ್ಣವನ್ನು ಹೋಲುತ್ತಿತ್ತು. ಈಗಿರುವ ಅಶೋಕ ಚಕ್ರದ ಬದಲಿಗೆ ಚರಕವಿತ್ತು. ಅದನ್ನೇ ರಾಷ್ಟ್ರಧ್ಚಜ ಮಾಡುವ ಬಗ್ಗೆ ಆಗಿನ ಅನೇಕ ಮುಖಂಡರ ಒಲವಿತ್ತು. ಆದರೆ ಅದಕ್ಕೆ ಭಿನ್ನಮತ ಬಂದಾಗ ಡಾ. ಬಾಬು ರಾಜೇಂದ್ರ ಪ್ರಸಾದರ ನೇತೃತ್ವದಲ್ಲಿ ಫ್ಲ್ಯಾಗ್ ಕಮಿಟಿಯೊಂದನ್ನು ರೂಪಿಸಲಾಯಿತು.

ಈ ಸಮಿತಿಯಲ್ಲಿ ನಾಗರಿಕ ಸೇವಾ ಪರೀಕ್ಷೆ ಉತ್ತೀರ್ಣರಾಗಿದ್ದ ಬದ್ರುದ್ದೀನ್ ತಯ್ಯ್‌ಬ್‌ಜಿ ಅವರೂ ಸದಸ್ಯರಾಗಿದ್ದರು. ಬದ್ರುದ್ದೀನ್ ತಯ್ಯ‌ಬ್‌ಜಿ ಅವರಿಗೆ ದೇಶ ವಿಭಜನೆಯ ಕಾರ್ಯಾಚರಣೆ ನಡೆಯುತ್ತಿದ್ದಾಗ ನೀವು ಪಾಕಿಸ್ತಾನಕ್ಕೆ ಬರಬೇಕೆಂದೂ, ನಿಮಗೆ ಪಾಕಿಸ್ತಾನದಲ್ಲಿ ಉನ್ನತವಾದ ಸ್ಥಾನಮಾನ ನೀಡಲಾಗುವುದೆಂದೂ ಮುಸ್ಲಿಮ್ ಲೀಗಿನ ಮುಖಂಡರು ಆಹ್ವಾನ ನೀಡಿದ್ದರು. ಅದಕ್ಕೆ ಬದ್ರುದ್ದೀನ್ ತಯ್ಯ್‌ಬ್‌ಜಿ ಅವರು ಮುಸ್ಲಿಂ ಲೀಗ್ ಮುಖಂಡರಿಗೆ ತನ್ನ ನಿಲುವನ್ನು ಸ್ಪಷ್ಟವಾಗಿ ವಿವರಿಸುವ ಪತ್ರದ ಮೂಲಕ ಉತ್ತರ ನೀಡಿದರು. ಅದರ ಸಾರಾಂಶ ಹೀಗಿದೆ.

ಬದ್ರುದ್ದೀನ್ ತಯ್ಯ್‌ಬ್‌ಜಿ ಮತ್ತು ಸುರಯ್ಯಾ ತಯ್ಯ್‌ಬ್‌ಜಿ

“ಪಾಕಿಸ್ತಾನದ ಜೊತೆಗೆ ಬಂದರೆ ನನಗೆ ನೀವು ಉನ್ನತ ಸ್ಥಾನಮಾನವೇನೋ ನೀಡಬಹುದು. ಆದರೆ ನಾನು ಧರ್ಮಾಧಾರಿತ ರಾಷ್ಟ್ರದಲ್ಲಿ ಇರಬಯಸುವುದಿಲ್ಲ. ಅಲ್ಲದೆ ನಾನು ಮುಸ್ಲಿಂ ‌ಲೀಗ್‌ನ ಸಿದ್ಧಾಂತವನ್ನು ಒಪ್ಪುವುದಿಲ್ಲ. ನಾನು ಯಾವುದೇ ಕಾರಣಕ್ಕೂ ನನ್ನ ಮಾತೃಭೂಮಿ ತೊರೆದು ಬರಲಾರೆ. ಇನ್ನು ಮನವೊಲಿಸುವ ಪ್ರಯತ್ನ ಮುಂದುವರಿಸದಿರಿ”

ಫ್ಯ್ಲಾಗ್ ಕಮಿಟಿ ಧ್ವಜದ ವಿನ್ಯಾಸಗಳನ್ನು ಮತ್ತು ರಾಷ್ಟ್ರೀಯ ಲಾಂಛನದ ವಿನ್ಯಾಸಗಳನ್ನು ತಯಾರಿಸಿ ಕಳುಹಿಸುವಂತೆ ಎಲ್ಲಾ ಶಾಲೆಗಳಿಗೆ ಪತ್ರಗಳನ್ನು ಕಳುಹಿಸಿತು. ಜವಾಹರ್‌ಲಾಲ್ ನೆಹರೂ ಅವರು ಬದ್ರುದ್ದೀನ್ ತಯ್ಯ್‌ಬ್‌ಜಿ ಅವರನ್ನು ಕರೆದು,“ಬದ್ರ್.. ನೀವಿದರಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳಬೇಕು. ಮತ್ತು ವಿನ್ಯಾಸದಲ್ಲಿ ನಿಮ್ಮ ಪ್ರಮುಖ ಪಾತ್ರವನ್ನು ನಾನು ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದರು.

ಬದ್ರುದ್ದೀನ್ ತಯ್ಯ‌ಬ್‌ಜಿಯವರ ಪತ್ನಿ ಸುರಯ್ಯಾ ತಯ್ಯ್‌ಬ್‌ಜಿ ಆ ಕಾಲದ ಪ್ರಸಿದ್ಧ ಲೇಖಕಿಯಾಗಿದ್ದರು. ಧ್ವಜ ವಿನ್ಯಾಸ ಮತ್ತು ಲಾಂಛನ ವಿನ್ಯಾಸ ಕಾರ್ಯದಲ್ಲಿ ಅವರು ಗಂಭೀರವಾಗಿ ತೊಡಗಿಸಿಕೊಂಡರು. ಅವರು ಕೇಸರಿ ಬಿಳಿ ಹಸಿರು ಮತ್ತು ಮಧ್ಯೆ ಕಪ್ಪು ಬಣ್ಣದ ಅಶೋಕ ಚಕ್ರವಿರುವ ವಿನ್ಯಾಸವನ್ನು ತಯಾರಿಸಿ ಕಳುಹಿಸಿದರು. ಮತ್ತು ನಾಲ್ಕು ಸಿಂಹಗಳ ಮುಖವನ್ನು ರಾಷ್ಟ್ರೀಯ ಲಾಂಛನದ ಆಯ್ಕೆಗೆ ಕಳುಹಿಸಿದರು.

ಅದಾಗಲೇ ನೂರಾರು ಧ್ವಜ ವಿನ್ಯಾಸಗಳು ಮತ್ತು‌ ಲಾಂಛನ ವಿನ್ಯಾಸಗಳು ಆಯ್ಕೆ ಕೋರಿ ಬಂದಿತ್ತು.
ಹೆಚ್ಚಿನವುಗಳಲ್ಲಿ ಬ್ರಿಟಿಷ್ ಧ್ವಜ ಮತ್ತು‌ ಲಾಂಛನದ ಪ್ರಭಾವ ಎದ್ದು ಕಾಣುತ್ತಿದ್ದವು. ಅವುಗಳನ್ನೆಲ್ಲಾ ಫ್ಲ್ಯಾಗ್ ಕಮಿಟಿ ತಿರಸ್ಕರಿಸಿತು. ಕೊನೆಯ ಸುತ್ತಿಗೆ ಕೆಲವನ್ನು ಆಯ್ಕೆ ಮಾಡಲಾಗಿತ್ತು. ಅಂತಿಮವಾಗಿ ಸುರಯ್ಯಾ ತಯ್ಯ್‌ಬ್‌ಜಿ ವಿನ್ಯಾಸಗೊಳಿಸಿದ ಧ್ವಜ ಸರ್ವಾನುಮತದ ಆಯ್ಕೆಯಾಯಿತು. ಗಾಂಧೀಜಿಯವರು ಅದರಲ್ಲೊಂದು ಪುಟ್ಟ ಬದಲಾವಣೆ ಮಾಡಿದರು. ಸುರಯ್ಯಾ ಅವರ ವಿನ್ಯಾಸದಲ್ಲಿ ಅಶೋಕ ಚಕ್ರವು ಕಪ್ಪು ಬಣ್ಣದಲ್ಲಿತ್ತು, ಗಾಂಧೀಜಿ ಅದಕ್ಕೆ ನೀಲಿ ಬಣ್ಣ ಕೊಡುವಂತೆ ಸಲಹೆ ನೀಡಿದರು.

ರಾಷ್ಟ್ರೀಯ ಲಾಂಛನಕ್ಕೆ ಹುಲಿ, ಚಿರತೆ, ಕರಡಿ, ಹಂಸ ಮುಂತಾದ ಪ್ರಾಣಿ ಪಕ್ಷಿಗಳ ವಿನ್ಯಾಸವಿರುವವುಗಳು ಕೂಡಾ ಸುರಯ್ಯಾ ತಯ್ಯ್‌ಬ್‌ಜಿ ಅವರ ವಿನ್ಯಾಸದ ಜೊತೆಗೆ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿತ್ತು. ಅಂತಿಮವಾಗಿ ಸುರಯ್ಯಾ ತಯ್ಯಬ್‌ಜಿ ಅವರು ವಿನ್ಯಾಸಗೊಳಿಸಿದ ನಾಲ್ಕು ಸಿಂಹಗಳು ರಾಷ್ಟ್ರೀಯ ಲಾಂಛನವಾಗಿ ಆಯ್ಕೆಗೊಂಡಿತು. ಭಾರತ ಸರಕಾರದ ಯಾವುದೇ ಪತ್ರದಲ್ಲಿರುವ ಮತ್ತು ಧ್ವಜ ಸ್ಥಂಭದ ಬುಡದಲ್ಲಿ ನಾಲ್ಕು‌ ಸಿಂಹಗಳ ಚಿಹ್ನೆ ಸುರಯ್ಯಾ ತಯ್ಯ್‌ಬ್‌ಜಿ ಅವರು ವಿನ್ಯಾಸಗೊಳಿಸಿದ್ದು. 1947ರಲ್ಲಿ ಇದನ್ನು ಭಾರತ ಸರಕಾರ ಆಯ್ಕೆ ಮಾಡುವಾಗ ಸುರಯ್ಯಾರಿಗಿನ್ನೂ ಇಪ್ಪತ್ತೆಂಟು ವರ್ಷ ವಯಸ್ಸು.

ಇದು ಆಗಿನ ಮುಸ್ಲಿಮರ ರಾಷ್ಟ್ರೀಯತೆ, ಮುಸ್ಲಿಮರ ದೇಶಪ್ರೇಮವನ್ನು ತೋರಿಸುತ್ತದೆ. ಈ ದೇಶ ಕಟ್ಟಲು ನಮ್ಮ ಹಿರಿಯರು ಕೊಟ್ಟ ಕೊಡುಗೆ, ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಯಾರಿಂದಲೂ ಸಾಧ್ಯವಿಲ್ಲ.

(ಆಧಾರ : ದಿ ವೈರ್‌ನಲ್ಲಿ ಸುರಯ್ಯಾ- ಬದ್ರುದ್ದೀನ್ ದಂಪತಿಗಳ ಪುತ್ರಿ ಲೈಲಾ ತಯ್ಯ್‌ಬ್‌ಜಿ 2018ರಲ್ಲಿ ಬರೆದ ಲೇಖನ)

ಇದನ್ನೂ ಓದಿ: ಭಾರತದ ಮೂರು ಬಣ್ಣಗಳು; ತ್ರಿವರ್ಣ ಧ್ವಜ ತಯಾರಕರ ನಲಿವು-ನೋವುಗಳು: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...