Homeಮುಖಪುಟನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ನಮ್ಮ ರಾಷ್ಟ್ರ ಧ್ವಜದ ವಿನ್ಯಾಸಕಾರ್ತಿ ಸುರಯ್ಯಾ ತಯ್ಯ್‌ಬ್‌ಜಿ: ಭಾರತೀಯರೆಲ್ಲಾ ತಿಳಿಯಬೇಕಾದ ವಾಸ್ತವ

ಸ್ವಾತಂತ್ರ್ಯ ಹೋರಾಟಗಾರ ಪಿಂಗಾಳಿ ವೆಂಕಯ್ಯ ಎಂಬವರು ಸ್ವರಾಜ್ಯ ಧ್ವಜವನ್ನು ಮೊದಲು ವಿನ್ಯಾಸಗೊಳಿಸಿದ್ದರು. ಅದರಲ್ಲಿ ಈಗಿರುವ ಅಶೋಕ ಚಕ್ರದ ಬದಲಿಗೆ ಚರಕವಿತ್ತು.

- Advertisement -
- Advertisement -

ಇತ್ತೀಚೆಗೆ ಆರೆಸ್ಸೆಸ್ ಸಂಘಟನೆಯ ಮುಖ್ಯಸ್ಥ ಕಲ್ಲಡ್ಕ ಪ್ರಭಾಕರ ಭಟ್ಟ “ಕೇಸರಿ ನಮ್ಮ ಅಸಲಿ ರಾಷ್ಟ್ರಧ್ವಜ, ಮತ್ತೆ ಮುಸ್ಲಿಮರು ಗಲಾಟೆ ಮಾಡಿದ್ದಕ್ಕೆ ಒಂದು ಹಸಿರು ಬಟ್ಟೆಯ ತುಂಡನ್ನು ಅದಕ್ಕೆ ಜೋಡಿಸಿದ್ದು” ಎಂದು  ಮಾತನಾಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದನ್ನು ಅಲ್ಲಿದ್ದ 90% ಮಂದಿ ಕುರುಡಾಗಿ ನಂಬಿರುತ್ತಾರೆ.ಯಾಕೆಂದರೆ ಆತನ ಭಾಷಣ ಆಲಿಸಲು ಹೋಗುವವರೆಲ್ಲಾ ಯೋಚಿಸಿ ಪರಾಮರ್ಶಿಸುವ ಗುಣ ಉಳ್ಳವರಲ್ಲ. ಇನ್ನು ಮಾಧ್ಯಮಗಳು ಸಹ ಅದನ್ನೆ ಪ್ರಸಾರ ಮಾಡುತ್ತಿವೆ. ಈ ಸಂದರ್ಭದಲ್ಲಿ ನಮ್ಮ ರಾಷ್ಟ್ರ ಧ್ವಜದ ಮತ್ತು ರಾಷ್ಟ್ರೀಯ ಲಾಂಛನ ವಿನ್ಯಾಸದ ನಿಜವಾದ ಕತೆಯನ್ನು ಹೆಚ್ಚೆಚ್ಚು ಪ್ರಚಾರ ಮಾಡಬೇಕಾದುದು ಕಾಲದ ಜರೂರು ಕೂಡಾ.

ರಾಷ್ಟ್ರ ಧ್ವಜದ ಬಣ್ಣಗಳು ಯಾವುದೇ ಧರ್ಮ ಜಾತಿ ಪಂಗಡವನ್ನು ಸಂಕೇತಿಸುವುದಿಲ್ಲ.ಕೇಸರಿ ಹಿಂದೂ ಅಲ್ಲ, ಹಸಿರು ಮುಸ್ಲಿಂ ಕೂಡಾ ಅಲ್ಲ. ಬದಲಿಗೆ;

  • ಕೇಸರಿ ತ್ಯಾಗದ ಸಂಕೇತ.
  • ಬಿಳಿ ಶಾಂತಿಯ ಸಂಕೇತ.
  • ಹಸಿರು ಸಮೃದ್ಧಿಯ ಸಂಕೇತ.

ಸ್ವಾತಂತ್ರ್ಯ ಹೋರಾಟಗಾರ ಪಿಂಗಾಳಿ ವೆಂಕಯ್ಯ ಎಂಬವರು ಸ್ವರಾಜ್ಯ ಧ್ವಜವನ್ನು ಮೊದಲು ವಿನ್ಯಾಸಗೊಳಿಸಿದ್ದರು. ಅದರ ಬಣ್ಣ ಈಗಿನ ರಾಷ್ಟ್ರಧ್ವಜದ ಬಣ್ಣವನ್ನು ಹೋಲುತ್ತಿತ್ತು. ಈಗಿರುವ ಅಶೋಕ ಚಕ್ರದ ಬದಲಿಗೆ ಚರಕವಿತ್ತು. ಅದನ್ನೇ ರಾಷ್ಟ್ರಧ್ಚಜ ಮಾಡುವ ಬಗ್ಗೆ ಆಗಿನ ಅನೇಕ ಮುಖಂಡರ ಒಲವಿತ್ತು. ಆದರೆ ಅದಕ್ಕೆ ಭಿನ್ನಮತ ಬಂದಾಗ ಡಾ. ಬಾಬು ರಾಜೇಂದ್ರ ಪ್ರಸಾದರ ನೇತೃತ್ವದಲ್ಲಿ ಫ್ಲ್ಯಾಗ್ ಕಮಿಟಿಯೊಂದನ್ನು ರೂಪಿಸಲಾಯಿತು.

ಈ ಸಮಿತಿಯಲ್ಲಿ ನಾಗರಿಕ ಸೇವಾ ಪರೀಕ್ಷೆ ಉತ್ತೀರ್ಣರಾಗಿದ್ದ ಬದ್ರುದ್ದೀನ್ ತಯ್ಯ್‌ಬ್‌ಜಿ ಅವರೂ ಸದಸ್ಯರಾಗಿದ್ದರು. ಬದ್ರುದ್ದೀನ್ ತಯ್ಯ‌ಬ್‌ಜಿ ಅವರಿಗೆ ದೇಶ ವಿಭಜನೆಯ ಕಾರ್ಯಾಚರಣೆ ನಡೆಯುತ್ತಿದ್ದಾಗ ನೀವು ಪಾಕಿಸ್ತಾನಕ್ಕೆ ಬರಬೇಕೆಂದೂ, ನಿಮಗೆ ಪಾಕಿಸ್ತಾನದಲ್ಲಿ ಉನ್ನತವಾದ ಸ್ಥಾನಮಾನ ನೀಡಲಾಗುವುದೆಂದೂ ಮುಸ್ಲಿಮ್ ಲೀಗಿನ ಮುಖಂಡರು ಆಹ್ವಾನ ನೀಡಿದ್ದರು. ಅದಕ್ಕೆ ಬದ್ರುದ್ದೀನ್ ತಯ್ಯ್‌ಬ್‌ಜಿ ಅವರು ಮುಸ್ಲಿಂ ಲೀಗ್ ಮುಖಂಡರಿಗೆ ತನ್ನ ನಿಲುವನ್ನು ಸ್ಪಷ್ಟವಾಗಿ ವಿವರಿಸುವ ಪತ್ರದ ಮೂಲಕ ಉತ್ತರ ನೀಡಿದರು. ಅದರ ಸಾರಾಂಶ ಹೀಗಿದೆ.

ಬದ್ರುದ್ದೀನ್ ತಯ್ಯ್‌ಬ್‌ಜಿ ಮತ್ತು ಸುರಯ್ಯಾ ತಯ್ಯ್‌ಬ್‌ಜಿ

“ಪಾಕಿಸ್ತಾನದ ಜೊತೆಗೆ ಬಂದರೆ ನನಗೆ ನೀವು ಉನ್ನತ ಸ್ಥಾನಮಾನವೇನೋ ನೀಡಬಹುದು. ಆದರೆ ನಾನು ಧರ್ಮಾಧಾರಿತ ರಾಷ್ಟ್ರದಲ್ಲಿ ಇರಬಯಸುವುದಿಲ್ಲ. ಅಲ್ಲದೆ ನಾನು ಮುಸ್ಲಿಂ ‌ಲೀಗ್‌ನ ಸಿದ್ಧಾಂತವನ್ನು ಒಪ್ಪುವುದಿಲ್ಲ. ನಾನು ಯಾವುದೇ ಕಾರಣಕ್ಕೂ ನನ್ನ ಮಾತೃಭೂಮಿ ತೊರೆದು ಬರಲಾರೆ. ಇನ್ನು ಮನವೊಲಿಸುವ ಪ್ರಯತ್ನ ಮುಂದುವರಿಸದಿರಿ”

ಫ್ಯ್ಲಾಗ್ ಕಮಿಟಿ ಧ್ವಜದ ವಿನ್ಯಾಸಗಳನ್ನು ಮತ್ತು ರಾಷ್ಟ್ರೀಯ ಲಾಂಛನದ ವಿನ್ಯಾಸಗಳನ್ನು ತಯಾರಿಸಿ ಕಳುಹಿಸುವಂತೆ ಎಲ್ಲಾ ಶಾಲೆಗಳಿಗೆ ಪತ್ರಗಳನ್ನು ಕಳುಹಿಸಿತು. ಜವಾಹರ್‌ಲಾಲ್ ನೆಹರೂ ಅವರು ಬದ್ರುದ್ದೀನ್ ತಯ್ಯ್‌ಬ್‌ಜಿ ಅವರನ್ನು ಕರೆದು,“ಬದ್ರ್.. ನೀವಿದರಲ್ಲಿ ಗಂಭೀರವಾಗಿ ತೊಡಗಿಸಿಕೊಳ್ಳಬೇಕು. ಮತ್ತು ವಿನ್ಯಾಸದಲ್ಲಿ ನಿಮ್ಮ ಪ್ರಮುಖ ಪಾತ್ರವನ್ನು ನಾನು ನಿರೀಕ್ಷಿಸುತ್ತೇನೆ” ಎಂದು ಹೇಳಿದ್ದರು.

ಬದ್ರುದ್ದೀನ್ ತಯ್ಯ‌ಬ್‌ಜಿಯವರ ಪತ್ನಿ ಸುರಯ್ಯಾ ತಯ್ಯ್‌ಬ್‌ಜಿ ಆ ಕಾಲದ ಪ್ರಸಿದ್ಧ ಲೇಖಕಿಯಾಗಿದ್ದರು. ಧ್ವಜ ವಿನ್ಯಾಸ ಮತ್ತು ಲಾಂಛನ ವಿನ್ಯಾಸ ಕಾರ್ಯದಲ್ಲಿ ಅವರು ಗಂಭೀರವಾಗಿ ತೊಡಗಿಸಿಕೊಂಡರು. ಅವರು ಕೇಸರಿ ಬಿಳಿ ಹಸಿರು ಮತ್ತು ಮಧ್ಯೆ ಕಪ್ಪು ಬಣ್ಣದ ಅಶೋಕ ಚಕ್ರವಿರುವ ವಿನ್ಯಾಸವನ್ನು ತಯಾರಿಸಿ ಕಳುಹಿಸಿದರು. ಮತ್ತು ನಾಲ್ಕು ಸಿಂಹಗಳ ಮುಖವನ್ನು ರಾಷ್ಟ್ರೀಯ ಲಾಂಛನದ ಆಯ್ಕೆಗೆ ಕಳುಹಿಸಿದರು.

ಅದಾಗಲೇ ನೂರಾರು ಧ್ವಜ ವಿನ್ಯಾಸಗಳು ಮತ್ತು‌ ಲಾಂಛನ ವಿನ್ಯಾಸಗಳು ಆಯ್ಕೆ ಕೋರಿ ಬಂದಿತ್ತು.
ಹೆಚ್ಚಿನವುಗಳಲ್ಲಿ ಬ್ರಿಟಿಷ್ ಧ್ವಜ ಮತ್ತು‌ ಲಾಂಛನದ ಪ್ರಭಾವ ಎದ್ದು ಕಾಣುತ್ತಿದ್ದವು. ಅವುಗಳನ್ನೆಲ್ಲಾ ಫ್ಲ್ಯಾಗ್ ಕಮಿಟಿ ತಿರಸ್ಕರಿಸಿತು. ಕೊನೆಯ ಸುತ್ತಿಗೆ ಕೆಲವನ್ನು ಆಯ್ಕೆ ಮಾಡಲಾಗಿತ್ತು. ಅಂತಿಮವಾಗಿ ಸುರಯ್ಯಾ ತಯ್ಯ್‌ಬ್‌ಜಿ ವಿನ್ಯಾಸಗೊಳಿಸಿದ ಧ್ವಜ ಸರ್ವಾನುಮತದ ಆಯ್ಕೆಯಾಯಿತು. ಗಾಂಧೀಜಿಯವರು ಅದರಲ್ಲೊಂದು ಪುಟ್ಟ ಬದಲಾವಣೆ ಮಾಡಿದರು. ಸುರಯ್ಯಾ ಅವರ ವಿನ್ಯಾಸದಲ್ಲಿ ಅಶೋಕ ಚಕ್ರವು ಕಪ್ಪು ಬಣ್ಣದಲ್ಲಿತ್ತು, ಗಾಂಧೀಜಿ ಅದಕ್ಕೆ ನೀಲಿ ಬಣ್ಣ ಕೊಡುವಂತೆ ಸಲಹೆ ನೀಡಿದರು.

ರಾಷ್ಟ್ರೀಯ ಲಾಂಛನಕ್ಕೆ ಹುಲಿ, ಚಿರತೆ, ಕರಡಿ, ಹಂಸ ಮುಂತಾದ ಪ್ರಾಣಿ ಪಕ್ಷಿಗಳ ವಿನ್ಯಾಸವಿರುವವುಗಳು ಕೂಡಾ ಸುರಯ್ಯಾ ತಯ್ಯ್‌ಬ್‌ಜಿ ಅವರ ವಿನ್ಯಾಸದ ಜೊತೆಗೆ ಅಂತಿಮ ಸುತ್ತಿನ ಸ್ಪರ್ಧೆಯಲ್ಲಿತ್ತು. ಅಂತಿಮವಾಗಿ ಸುರಯ್ಯಾ ತಯ್ಯಬ್‌ಜಿ ಅವರು ವಿನ್ಯಾಸಗೊಳಿಸಿದ ನಾಲ್ಕು ಸಿಂಹಗಳು ರಾಷ್ಟ್ರೀಯ ಲಾಂಛನವಾಗಿ ಆಯ್ಕೆಗೊಂಡಿತು. ಭಾರತ ಸರಕಾರದ ಯಾವುದೇ ಪತ್ರದಲ್ಲಿರುವ ಮತ್ತು ಧ್ವಜ ಸ್ಥಂಭದ ಬುಡದಲ್ಲಿ ನಾಲ್ಕು‌ ಸಿಂಹಗಳ ಚಿಹ್ನೆ ಸುರಯ್ಯಾ ತಯ್ಯ್‌ಬ್‌ಜಿ ಅವರು ವಿನ್ಯಾಸಗೊಳಿಸಿದ್ದು. 1947ರಲ್ಲಿ ಇದನ್ನು ಭಾರತ ಸರಕಾರ ಆಯ್ಕೆ ಮಾಡುವಾಗ ಸುರಯ್ಯಾರಿಗಿನ್ನೂ ಇಪ್ಪತ್ತೆಂಟು ವರ್ಷ ವಯಸ್ಸು.

ಇದು ಆಗಿನ ಮುಸ್ಲಿಮರ ರಾಷ್ಟ್ರೀಯತೆ, ಮುಸ್ಲಿಮರ ದೇಶಪ್ರೇಮವನ್ನು ತೋರಿಸುತ್ತದೆ. ಈ ದೇಶ ಕಟ್ಟಲು ನಮ್ಮ ಹಿರಿಯರು ಕೊಟ್ಟ ಕೊಡುಗೆ, ಮಾಡಿದ ತ್ಯಾಗಕ್ಕೆ ಬೆಲೆ ಕಟ್ಟಲು ಯಾರಿಂದಲೂ ಸಾಧ್ಯವಿಲ್ಲ.

(ಆಧಾರ : ದಿ ವೈರ್‌ನಲ್ಲಿ ಸುರಯ್ಯಾ- ಬದ್ರುದ್ದೀನ್ ದಂಪತಿಗಳ ಪುತ್ರಿ ಲೈಲಾ ತಯ್ಯ್‌ಬ್‌ಜಿ 2018ರಲ್ಲಿ ಬರೆದ ಲೇಖನ)

ಇದನ್ನೂ ಓದಿ: ಭಾರತದ ಮೂರು ಬಣ್ಣಗಳು; ತ್ರಿವರ್ಣ ಧ್ವಜ ತಯಾರಕರ ನಲಿವು-ನೋವುಗಳು: ಪ್ರೊ. ಜಿ ಎನ್ ದೇವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...