Homeಮುಖಪುಟಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಮಹಿಳೆಯರ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ. 

- Advertisement -
- Advertisement -

ವೈದಿಕಶಾಹಿಯ ಕಬಂದಬಾಹುವಿಗೆ ಸಿಲುಕಿದ್ದ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಇಂದು. 1848 ಜನವರಿ 1 ರಂದು ಮಹಾರಾ‍ಷ್ಟ್ರದ ಭೀಡೆ ವಾಡದಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದು ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಭಾರತದ ಇಂದಿನ ಹೆಣ್ಣುಮಕ್ಕಳು ಏನೇ ಸಾಧನೆ ಮಾಡಿದ್ದರೂ ಅವುಗಳ ಹಿಂದೆ ಸಾವಿತ್ರಿಬಾಯಿ ಫುಲೆಯವರ ತ್ಯಾಗ ಮತ್ತು ಆಶಯವಿದೆ. ಅಂದು ಇವರು ನೀಡಿದ ಶಿಕ್ಷಣದ ನೆರಳಿನಳಿಲ್ಲಿ ಬೆಳೆದ ಭಾರತದ ಹೆಣ್ಣು ಜೀವಗಳು ಅಡುಗೆ ಮನೆಯಿಂದ ಹೊರಬಂದು, ಇಂದು ಗಗನಕ್ಕೆ ಹಾರುವವರೆಗೆ ಸಾಧನೆ ಮಾಡಿದ್ದಾರೆ.

ಇಂತಹ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಈ ಶಾಲೆಯನ್ನು ಆರಂಭಿಸಲು ಫುಲೆ ದಂಪತಿಗಳು ಮಾಡಿದ ತ್ಯಾಗಕ್ಕೆ ಇಂದಿನ ನವ ಭಾರತ ನೀಡುತ್ತಿರುವ ಉಡುಗೊರೆ ಇದು. ಹೆಣ್ಣುಮಕ್ಕಳು ಮನೆಯಿಂದಲೇ ಹೊರಗೆ ಹೋಗಬಾರದು ಎಂದು ಕಟ್ಟಳೆ ವಿಧಿಸಿದ್ದ ಕಾಲದಲ್ಲಿ ತಾವೂ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಆಶಿಸಿದ್ದರು ಫುಲೆ ದಂಪತಿಗಳು. ಆದರೆ, ಭಾರತದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಆರಂಭವಾದ ಶಾಲೆಯನ್ನು ಸಂರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು, ನಮ್ಮನ್ನಾಳುವ ಸರ್ಕಾರಗಳ ವೈದಿಕಶಾಹಿ ಧೋರಣೆಯನ್ನು ಎತ್ತಿ ತೋರಿಸುತ್ತವೆ.

ಪರಂಪರೆ ಎಂದರೆ ಕೇವಲ ಬ್ರಾಹ್ಮಣರ, ಸನಾತನದ ಪರಂಪರೆ ಎಂದು ಭಾವಿಸಿರುವ ಸನಾತನಿಗಳ ಪರಂಪರೆಯ ಪಟ್ಟಿಗೆ ಈ ಶಾಲೆ ಸೇರುವುದಿಲ್ಲ. ಮಂದಿರ ಕಟ್ಟಲು ಇರುವ ಉತ್ಸಾಹ, ಶಾಲೆಯನ್ನು ಸಂರಕ್ಷಿಸಲು ಬರುವುದಿಲ್ಲ. ಜಾತಿ-ಮಠಗಳಿಗೆ ನೀಡುವ ಅನುದಾನ ಈ ಶಾಲೆಯನ್ನು ಉದ್ಧಾರ ಮಾಡಲು ನೀಡುವುದಿಲ್ಲ. ಸರ್ಕಾರದ ಜಾಹೀರಾತುಗಳಿಗೆ ಖರ್ಚು ಮಾಡುವ ಹಣ, ಈ ಶಾಲೆಯ ಅಭಿವೃದ್ಧಿಗೆ ದೊರೆಯುವುದಿಲ್ಲ.

ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ಮಹಿಳೆ ಎರಡನೇ ದರ್ಜೆಯ ಪ್ರಜೆ ಎನ್ನುವ ಹಿಂದೂ ಮತ, ದಲಿತರನ್ನು, ದಲಿತ ಮಹಿಳೆಯರನ್ನು ಮನುಷ್ಯರು ಎಂದೇ ಪರಿಗಣಿಸಿರಲಿಲ್ಲ. ಇಂತಹವರಿಗೆ ಶಿಕ್ಷಣ ನೀಡುವ ಮೂಲಕ ಮುನ್ನೆಲೆಗೆ ತರಬೇಕು ಎನ್ನುವ ಕ್ರಾಂತಿಕಾರಿ ನಿರ್ಧಾರದಿಂದ ಆರಂಭವಾದ ಶಾಲೆಯನ್ನು ರಕ್ಷಿಸಲು ಈ ಸನಾತನವಾದಿಗಳು ಹೇಗೆ ಮನಸ್ಸು ಮಾಡುತ್ತಾರೆ. ವಿಪರ್ಯಾಸವೆಂದರೆ ಇಂದಿನ ನವಬ್ರಾಹ್ಮಣವಾದಿಗಳಾಗಿ ಮಾರ್ಪಾಡಾಗಿರುವ ದಲಿತ ನಾಯಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಆದರೆ ಪ್ರಜ್ಞಾವಂತರು ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ. ಈ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...