Homeಮುಖಪುಟಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಮಹಿಳೆಯರ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ. 

- Advertisement -
- Advertisement -

ವೈದಿಕಶಾಹಿಯ ಕಬಂದಬಾಹುವಿಗೆ ಸಿಲುಕಿದ್ದ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಇಂದು. 1848 ಜನವರಿ 1 ರಂದು ಮಹಾರಾ‍ಷ್ಟ್ರದ ಭೀಡೆ ವಾಡದಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದು ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಭಾರತದ ಇಂದಿನ ಹೆಣ್ಣುಮಕ್ಕಳು ಏನೇ ಸಾಧನೆ ಮಾಡಿದ್ದರೂ ಅವುಗಳ ಹಿಂದೆ ಸಾವಿತ್ರಿಬಾಯಿ ಫುಲೆಯವರ ತ್ಯಾಗ ಮತ್ತು ಆಶಯವಿದೆ. ಅಂದು ಇವರು ನೀಡಿದ ಶಿಕ್ಷಣದ ನೆರಳಿನಳಿಲ್ಲಿ ಬೆಳೆದ ಭಾರತದ ಹೆಣ್ಣು ಜೀವಗಳು ಅಡುಗೆ ಮನೆಯಿಂದ ಹೊರಬಂದು, ಇಂದು ಗಗನಕ್ಕೆ ಹಾರುವವರೆಗೆ ಸಾಧನೆ ಮಾಡಿದ್ದಾರೆ.

ಇಂತಹ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಈ ಶಾಲೆಯನ್ನು ಆರಂಭಿಸಲು ಫುಲೆ ದಂಪತಿಗಳು ಮಾಡಿದ ತ್ಯಾಗಕ್ಕೆ ಇಂದಿನ ನವ ಭಾರತ ನೀಡುತ್ತಿರುವ ಉಡುಗೊರೆ ಇದು. ಹೆಣ್ಣುಮಕ್ಕಳು ಮನೆಯಿಂದಲೇ ಹೊರಗೆ ಹೋಗಬಾರದು ಎಂದು ಕಟ್ಟಳೆ ವಿಧಿಸಿದ್ದ ಕಾಲದಲ್ಲಿ ತಾವೂ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಆಶಿಸಿದ್ದರು ಫುಲೆ ದಂಪತಿಗಳು. ಆದರೆ, ಭಾರತದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಆರಂಭವಾದ ಶಾಲೆಯನ್ನು ಸಂರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು, ನಮ್ಮನ್ನಾಳುವ ಸರ್ಕಾರಗಳ ವೈದಿಕಶಾಹಿ ಧೋರಣೆಯನ್ನು ಎತ್ತಿ ತೋರಿಸುತ್ತವೆ.

ಪರಂಪರೆ ಎಂದರೆ ಕೇವಲ ಬ್ರಾಹ್ಮಣರ, ಸನಾತನದ ಪರಂಪರೆ ಎಂದು ಭಾವಿಸಿರುವ ಸನಾತನಿಗಳ ಪರಂಪರೆಯ ಪಟ್ಟಿಗೆ ಈ ಶಾಲೆ ಸೇರುವುದಿಲ್ಲ. ಮಂದಿರ ಕಟ್ಟಲು ಇರುವ ಉತ್ಸಾಹ, ಶಾಲೆಯನ್ನು ಸಂರಕ್ಷಿಸಲು ಬರುವುದಿಲ್ಲ. ಜಾತಿ-ಮಠಗಳಿಗೆ ನೀಡುವ ಅನುದಾನ ಈ ಶಾಲೆಯನ್ನು ಉದ್ಧಾರ ಮಾಡಲು ನೀಡುವುದಿಲ್ಲ. ಸರ್ಕಾರದ ಜಾಹೀರಾತುಗಳಿಗೆ ಖರ್ಚು ಮಾಡುವ ಹಣ, ಈ ಶಾಲೆಯ ಅಭಿವೃದ್ಧಿಗೆ ದೊರೆಯುವುದಿಲ್ಲ.

ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ಮಹಿಳೆ ಎರಡನೇ ದರ್ಜೆಯ ಪ್ರಜೆ ಎನ್ನುವ ಹಿಂದೂ ಮತ, ದಲಿತರನ್ನು, ದಲಿತ ಮಹಿಳೆಯರನ್ನು ಮನುಷ್ಯರು ಎಂದೇ ಪರಿಗಣಿಸಿರಲಿಲ್ಲ. ಇಂತಹವರಿಗೆ ಶಿಕ್ಷಣ ನೀಡುವ ಮೂಲಕ ಮುನ್ನೆಲೆಗೆ ತರಬೇಕು ಎನ್ನುವ ಕ್ರಾಂತಿಕಾರಿ ನಿರ್ಧಾರದಿಂದ ಆರಂಭವಾದ ಶಾಲೆಯನ್ನು ರಕ್ಷಿಸಲು ಈ ಸನಾತನವಾದಿಗಳು ಹೇಗೆ ಮನಸ್ಸು ಮಾಡುತ್ತಾರೆ. ವಿಪರ್ಯಾಸವೆಂದರೆ ಇಂದಿನ ನವಬ್ರಾಹ್ಮಣವಾದಿಗಳಾಗಿ ಮಾರ್ಪಾಡಾಗಿರುವ ದಲಿತ ನಾಯಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಆದರೆ ಪ್ರಜ್ಞಾವಂತರು ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ. ಈ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...