Homeಮುಖಪುಟಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಮಹಿಳೆಯರ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ. 

- Advertisement -
- Advertisement -

ವೈದಿಕಶಾಹಿಯ ಕಬಂದಬಾಹುವಿಗೆ ಸಿಲುಕಿದ್ದ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಇಂದು. 1848 ಜನವರಿ 1 ರಂದು ಮಹಾರಾ‍ಷ್ಟ್ರದ ಭೀಡೆ ವಾಡದಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದು ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಭಾರತದ ಇಂದಿನ ಹೆಣ್ಣುಮಕ್ಕಳು ಏನೇ ಸಾಧನೆ ಮಾಡಿದ್ದರೂ ಅವುಗಳ ಹಿಂದೆ ಸಾವಿತ್ರಿಬಾಯಿ ಫುಲೆಯವರ ತ್ಯಾಗ ಮತ್ತು ಆಶಯವಿದೆ. ಅಂದು ಇವರು ನೀಡಿದ ಶಿಕ್ಷಣದ ನೆರಳಿನಳಿಲ್ಲಿ ಬೆಳೆದ ಭಾರತದ ಹೆಣ್ಣು ಜೀವಗಳು ಅಡುಗೆ ಮನೆಯಿಂದ ಹೊರಬಂದು, ಇಂದು ಗಗನಕ್ಕೆ ಹಾರುವವರೆಗೆ ಸಾಧನೆ ಮಾಡಿದ್ದಾರೆ.

ಇಂತಹ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಈ ಶಾಲೆಯನ್ನು ಆರಂಭಿಸಲು ಫುಲೆ ದಂಪತಿಗಳು ಮಾಡಿದ ತ್ಯಾಗಕ್ಕೆ ಇಂದಿನ ನವ ಭಾರತ ನೀಡುತ್ತಿರುವ ಉಡುಗೊರೆ ಇದು. ಹೆಣ್ಣುಮಕ್ಕಳು ಮನೆಯಿಂದಲೇ ಹೊರಗೆ ಹೋಗಬಾರದು ಎಂದು ಕಟ್ಟಳೆ ವಿಧಿಸಿದ್ದ ಕಾಲದಲ್ಲಿ ತಾವೂ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಆಶಿಸಿದ್ದರು ಫುಲೆ ದಂಪತಿಗಳು. ಆದರೆ, ಭಾರತದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಆರಂಭವಾದ ಶಾಲೆಯನ್ನು ಸಂರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು, ನಮ್ಮನ್ನಾಳುವ ಸರ್ಕಾರಗಳ ವೈದಿಕಶಾಹಿ ಧೋರಣೆಯನ್ನು ಎತ್ತಿ ತೋರಿಸುತ್ತವೆ.

ಪರಂಪರೆ ಎಂದರೆ ಕೇವಲ ಬ್ರಾಹ್ಮಣರ, ಸನಾತನದ ಪರಂಪರೆ ಎಂದು ಭಾವಿಸಿರುವ ಸನಾತನಿಗಳ ಪರಂಪರೆಯ ಪಟ್ಟಿಗೆ ಈ ಶಾಲೆ ಸೇರುವುದಿಲ್ಲ. ಮಂದಿರ ಕಟ್ಟಲು ಇರುವ ಉತ್ಸಾಹ, ಶಾಲೆಯನ್ನು ಸಂರಕ್ಷಿಸಲು ಬರುವುದಿಲ್ಲ. ಜಾತಿ-ಮಠಗಳಿಗೆ ನೀಡುವ ಅನುದಾನ ಈ ಶಾಲೆಯನ್ನು ಉದ್ಧಾರ ಮಾಡಲು ನೀಡುವುದಿಲ್ಲ. ಸರ್ಕಾರದ ಜಾಹೀರಾತುಗಳಿಗೆ ಖರ್ಚು ಮಾಡುವ ಹಣ, ಈ ಶಾಲೆಯ ಅಭಿವೃದ್ಧಿಗೆ ದೊರೆಯುವುದಿಲ್ಲ.

ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ಮಹಿಳೆ ಎರಡನೇ ದರ್ಜೆಯ ಪ್ರಜೆ ಎನ್ನುವ ಹಿಂದೂ ಮತ, ದಲಿತರನ್ನು, ದಲಿತ ಮಹಿಳೆಯರನ್ನು ಮನುಷ್ಯರು ಎಂದೇ ಪರಿಗಣಿಸಿರಲಿಲ್ಲ. ಇಂತಹವರಿಗೆ ಶಿಕ್ಷಣ ನೀಡುವ ಮೂಲಕ ಮುನ್ನೆಲೆಗೆ ತರಬೇಕು ಎನ್ನುವ ಕ್ರಾಂತಿಕಾರಿ ನಿರ್ಧಾರದಿಂದ ಆರಂಭವಾದ ಶಾಲೆಯನ್ನು ರಕ್ಷಿಸಲು ಈ ಸನಾತನವಾದಿಗಳು ಹೇಗೆ ಮನಸ್ಸು ಮಾಡುತ್ತಾರೆ. ವಿಪರ್ಯಾಸವೆಂದರೆ ಇಂದಿನ ನವಬ್ರಾಹ್ಮಣವಾದಿಗಳಾಗಿ ಮಾರ್ಪಾಡಾಗಿರುವ ದಲಿತ ನಾಯಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಆದರೆ ಪ್ರಜ್ಞಾವಂತರು ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ. ಈ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...