Homeಮುಖಪುಟಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಸಾವಿತ್ರಿ ಬಾಯಿ ಫುಲೆ ಸ್ಥಾಪಿಸಿದ ಮೊಟ್ಟಮೊದಲ ಹೆಣ್ಣು ಮಕ್ಕಳ ಶಾಲೆಯ ಸ್ಥಿತಿ ಹೇಗಿದೆ ಗೊತ್ತಾ?

ಮಹಿಳೆಯರ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ. 

- Advertisement -
- Advertisement -

ವೈದಿಕಶಾಹಿಯ ಕಬಂದಬಾಹುವಿಗೆ ಸಿಲುಕಿದ್ದ ಭಾರತದ ಹೆಣ್ಣುಮಕ್ಕಳ ಭವಿಷ್ಯವನ್ನು ಶಿಕ್ಷಣದ ಮೂಲಕ ಬೆಳಕಿಗೆ ತಂದು ಇತಿಹಾಸ ಸೃಷ್ಟಿಸಿದ್ದ ಅಕ್ಷರ ಮಾತೆ ಸಾವಿತ್ರಿ ಬಾಯಿ ಫುಲೆಯವರ ಜನ್ಮ ದಿನ ಇಂದು. 1848 ಜನವರಿ 1 ರಂದು ಮಹಾರಾ‍ಷ್ಟ್ರದ ಭೀಡೆ ವಾಡದಲ್ಲಿ ಹೆಣ್ಣುಮಕ್ಕಳಿಗಾಗಿ ಶಾಲೆ ತೆರೆದು ಶಿಕ್ಷಣ ನೀಡಲು ಪ್ರಾರಂಭಿಸಿದ್ದರು. ಭಾರತದ ಇಂದಿನ ಹೆಣ್ಣುಮಕ್ಕಳು ಏನೇ ಸಾಧನೆ ಮಾಡಿದ್ದರೂ ಅವುಗಳ ಹಿಂದೆ ಸಾವಿತ್ರಿಬಾಯಿ ಫುಲೆಯವರ ತ್ಯಾಗ ಮತ್ತು ಆಶಯವಿದೆ. ಅಂದು ಇವರು ನೀಡಿದ ಶಿಕ್ಷಣದ ನೆರಳಿನಳಿಲ್ಲಿ ಬೆಳೆದ ಭಾರತದ ಹೆಣ್ಣು ಜೀವಗಳು ಅಡುಗೆ ಮನೆಯಿಂದ ಹೊರಬಂದು, ಇಂದು ಗಗನಕ್ಕೆ ಹಾರುವವರೆಗೆ ಸಾಧನೆ ಮಾಡಿದ್ದಾರೆ.

ಇಂತಹ ಸಾಧನೆಗೆ ಮುನ್ನುಡಿ ಹಾಡಿದ್ದ, ಭಾರತದ ಪ್ರಪ್ರಥಮ ಹೆಣ್ಣುಮಕ್ಕಳ ಶಾಲೆ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಇಂದು ಯಾವ ಸ್ಥಿತಿಗೆ ತಲುಪಿದೆ ಎನ್ನುವುದನ್ನು ನೋಡಿದರೆ, ನಿಜಕ್ಕೂ ಭಾರತೀಯರಾದ ನಮಗೆ ಅವಮಾನವಾಗುತ್ತದೆ.

ಇದನ್ನೂ ಓದಿ: ಪ್ರತಿವರ್ಷ ಸಾವಿತ್ರಿ ಬಾಯಿ ಫುಲೆ ಉತ್ಸವ: ಮಹಾರಾಷ್ಟ್ರ ಸರ್ಕಾರ ಘೋಷಣೆ

ಇದನ್ನೂ ಓದಿ: ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

ಈ ಶಾಲೆಯನ್ನು ಆರಂಭಿಸಲು ಫುಲೆ ದಂಪತಿಗಳು ಮಾಡಿದ ತ್ಯಾಗಕ್ಕೆ ಇಂದಿನ ನವ ಭಾರತ ನೀಡುತ್ತಿರುವ ಉಡುಗೊರೆ ಇದು. ಹೆಣ್ಣುಮಕ್ಕಳು ಮನೆಯಿಂದಲೇ ಹೊರಗೆ ಹೋಗಬಾರದು ಎಂದು ಕಟ್ಟಳೆ ವಿಧಿಸಿದ್ದ ಕಾಲದಲ್ಲಿ ತಾವೂ ಶಿಕ್ಷಣ ಪಡೆಯುವುದರೊಂದಿಗೆ ತಮ್ಮ ಮುಂದಿನ ಪೀಳಿಗೆಯ ಹೆಣ್ಣುಮಕ್ಕಳಿಗೂ ಶಿಕ್ಷಣ ಸಿಗಬೇಕು ಎಂದು ಆಶಿಸಿದ್ದರು ಫುಲೆ ದಂಪತಿಗಳು. ಆದರೆ, ಭಾರತದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಆರಂಭವಾದ ಶಾಲೆಯನ್ನು ಸಂರಕ್ಷಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಯಾವುದೇ ಕ್ರಮ ತೆಗೆದುಕೊಳ್ಳದಿರುವುದು, ನಮ್ಮನ್ನಾಳುವ ಸರ್ಕಾರಗಳ ವೈದಿಕಶಾಹಿ ಧೋರಣೆಯನ್ನು ಎತ್ತಿ ತೋರಿಸುತ್ತವೆ.

ಪರಂಪರೆ ಎಂದರೆ ಕೇವಲ ಬ್ರಾಹ್ಮಣರ, ಸನಾತನದ ಪರಂಪರೆ ಎಂದು ಭಾವಿಸಿರುವ ಸನಾತನಿಗಳ ಪರಂಪರೆಯ ಪಟ್ಟಿಗೆ ಈ ಶಾಲೆ ಸೇರುವುದಿಲ್ಲ. ಮಂದಿರ ಕಟ್ಟಲು ಇರುವ ಉತ್ಸಾಹ, ಶಾಲೆಯನ್ನು ಸಂರಕ್ಷಿಸಲು ಬರುವುದಿಲ್ಲ. ಜಾತಿ-ಮಠಗಳಿಗೆ ನೀಡುವ ಅನುದಾನ ಈ ಶಾಲೆಯನ್ನು ಉದ್ಧಾರ ಮಾಡಲು ನೀಡುವುದಿಲ್ಲ. ಸರ್ಕಾರದ ಜಾಹೀರಾತುಗಳಿಗೆ ಖರ್ಚು ಮಾಡುವ ಹಣ, ಈ ಶಾಲೆಯ ಅಭಿವೃದ್ಧಿಗೆ ದೊರೆಯುವುದಿಲ್ಲ.

ಇದನ್ನೂ ಓದಿ: ನನ್ನ ಮಗ ರಾಜಾ ವೇಮುಲಾ ವಕೀಲನಾಗಿದ್ದು, ಜನರಿಗಾಗಿ ಹೋರಾಡಲಿದ್ದಾನೆ: ರಾಧಿಕ ವೇಮುಲಾ

ಮಹಿಳೆ ಎರಡನೇ ದರ್ಜೆಯ ಪ್ರಜೆ ಎನ್ನುವ ಹಿಂದೂ ಮತ, ದಲಿತರನ್ನು, ದಲಿತ ಮಹಿಳೆಯರನ್ನು ಮನುಷ್ಯರು ಎಂದೇ ಪರಿಗಣಿಸಿರಲಿಲ್ಲ. ಇಂತಹವರಿಗೆ ಶಿಕ್ಷಣ ನೀಡುವ ಮೂಲಕ ಮುನ್ನೆಲೆಗೆ ತರಬೇಕು ಎನ್ನುವ ಕ್ರಾಂತಿಕಾರಿ ನಿರ್ಧಾರದಿಂದ ಆರಂಭವಾದ ಶಾಲೆಯನ್ನು ರಕ್ಷಿಸಲು ಈ ಸನಾತನವಾದಿಗಳು ಹೇಗೆ ಮನಸ್ಸು ಮಾಡುತ್ತಾರೆ. ವಿಪರ್ಯಾಸವೆಂದರೆ ಇಂದಿನ ನವಬ್ರಾಹ್ಮಣವಾದಿಗಳಾಗಿ ಮಾರ್ಪಾಡಾಗಿರುವ ದಲಿತ ನಾಯಕರು ಇದರ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ.

ಆದರೆ ಪ್ರಜ್ಞಾವಂತರು ಈ ಕುರಿತು ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ಕೆಲಸ ಮಾಡಬೇಕಿದೆ. ಈ ಮೂಲಕ ನಮ್ಮ ಪರಂಪರೆಯನ್ನು ಮುಂದಿನ ಪೀಳಿಗೆಗೆ ತಲುಪಿಸುವ ಕೆಲಸ ಮಾಡಬೇಕಿದೆ.


ಇದನ್ನೂ ಓದಿ: “ಪಿಂಜ್ರಾ ತೋಡ್ (ಪಂಜರ ಮುರಿ)” ಎಂಬ ಪುಟ್ಟ ಆಂದೋಲನಕ್ಕೆ ಬೆದರಿತೆ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...