Homeಮುಖಪುಟಮುರ್ಷಿದಾಬಾದ್ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ದೀದಿ; 'ಬಿಎಸ್‌ಎಫ್‌ ಉತ್ತೇಜನ ನೀಡಿದೆ' ಎಂದ ಬಂಗಾಳ ಸಿಎಂ

ಮುರ್ಷಿದಾಬಾದ್ ಹಿಂಸಾಚಾರಕ್ಕೆ ಬಿಜೆಪಿಯನ್ನು ದೂಷಿಸಿದ ದೀದಿ; ‘ಬಿಎಸ್‌ಎಫ್‌ ಉತ್ತೇಜನ ನೀಡಿದೆ’ ಎಂದ ಬಂಗಾಳ ಸಿಎಂ

- Advertisement -
- Advertisement -

ವಕ್ಫ್ ತಿದ್ದುಪಡಿ ಕಾಯ್ದೆಯ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಇತ್ತೀಚೆಗೆ ನಡೆದ ಕೋಮು ಹಿಂಸಾಚಾರವು ‘ಪೂರ್ವ ಯೋಜಿತ’ವಾಗಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ), ಕೆಲವು ಕೇಂದ್ರ ಸಂಸ್ಥೆಗಳು ಮತ್ತು ಗಡಿ ಭದ್ರತಾ ಪಡೆಗಳೊಳಗಿನ ಕೆಲವು ಅಂಶಗಳಿಂದ ಈ ಗಲಭೆಗೆ ಉತ್ತೇಜನ ನೀಡಿವೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಸ್ಫೋಟಕ ಆರೋಪ ಮಾಡಿದ್ದಾರೆ.

ಕೋಲ್ಕತ್ತಾದಲ್ಲಿ ಮುಸ್ಲಿಂ ಧಾರ್ಮಿಕ ನಾಯಕರೊಂದಿಗಿನ ಸಭೆಯನ್ನುದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ಪಶ್ಚಿಮ ಬಂಗಾಳದ ಕೆಲವು ಭಾಗಗಳಲ್ಲಿ ಅಶಾಂತಿ ಉಂಟಾಗುವುದಕ್ಕೆ ಮುಂಚಿತವಾಗಿ ಬಾಂಗ್ಲಾದೇಶದಿಂದ ಗಡಿಯಾಚೆಗಿನ ಒಳನುಸುಳುವಿಕೆಗೆ ಅವಕಾಶ ನೀಡುವ ಮೂಲಕ ಬಿಜೆಪಿ ಉದ್ವಿಗ್ನತೆಯನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದರು.

“ಮುರ್ಷಿದಾಬಾದ್ ಅಶಾಂತಿಯಲ್ಲಿ ಗಡಿಯಾಚೆಗಿನ ಅಂಶಗಳ ಪಾತ್ರವನ್ನು ಪ್ರತಿಪಾದಿಸುವ ಸುದ್ದಿಗಳನ್ನು ನಾನು ಓದಿದ್ದೇನೆ. ಗಡಿಯನ್ನು ಕಾಯುವುದು ಬಿಎಸ್‌ಎಫ್ ಪಾತ್ರವಲ್ಲವೇ? ಬಿಎಸ್‌ಎಫ್ ಗೃಹ ಸಚಿವಾಲಯದ (ಎಂಎಚ್‌ಎ) ಅಡಿಯಲ್ಲಿದೆ. ರಾಜ್ಯ ಸರ್ಕಾರ ಅಂತರರಾಷ್ಟ್ರೀಯ ಗಡಿಯನ್ನು ಕಾಯುವುದಿಲ್ಲ. ಕೇಂದ್ರ ಸರ್ಕಾರ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಹಿಂಸಾಚಾರದ ಸಮಯದಲ್ಲಿ ಕಲ್ಲು ತೂರಲು ಸ್ಥಳೀಯ ಯುವಕರಿಗೆ ಹಣವನ್ನು ಪಾವತಿಸುವ ಮೂಲಕ ಬಿಎಸ್‌ಎಫ್ ಗಡಿ ಪ್ರದೇಶಗಳಲ್ಲಿ ಯಾರಿಗೆ ಹಣಕಾಸು ಒದಗಿಸಿದೆ ಎಂಬುದನ್ನು ನಾನು ಕಂಡುಹಿಡಿಯುತ್ತೇನೆ” ಎಂದು ಸಿಎಂ ಹೇಳಿದರು.

“ಹೊರಗಿನ ಬಿಜೆಪಿ ಗೂಂಡಾಗಳು ಸ್ಥಳದಿಂದ ಪಲಾಯನ ಮಾಡುವ ಮೊದಲು ಬಂದು ಅವ್ಯವಸ್ಥೆ ಸೃಷ್ಟಿಸಲು ಏಕೆ ಅವಕಾಶ ನೀಡಿದರು? ಹೊಣೆಗಾರಿಕೆಯನ್ನು ಸರಿಪಡಿಸಬೇಕು. ಅವರು ಹಿಂದೂಗಳು ಮತ್ತು ಮುಸ್ಲಿಮರನ್ನು ಧ್ರುವೀಕರಿಸಿ ವಿಭಜಿಸಲು ಬಯಸುತ್ತಾರೆ. ಅವರು ತಮ್ಮ ಜುಮ್ಲಾ ಸರ್ಕಾರವನ್ನು ಬಯಸುತ್ತಾರೆ. ದೇಶವನ್ನು ವಿಭಜಿಸಬೇಡಿ, ಬದಲಾಗಿ ಅದನ್ನು ಒಗ್ಗೂಡಿಸಿ” ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಹೊಸ ಕಾಯ್ದೆಯ ವಿರುದ್ಧ ಹರುಹಾಯ್ದ ಬ್ಯಾನರ್ಜಿ, “ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಒತ್ತಾಯಿಸಿದರು, ಇದು ದೇಶವನ್ನು ವಿಭಜಿಸುತ್ತದೆ” ಎಂದು ಎಚ್ಚರಿಸಿದರು.

“ಅಮಿತ್ ಶಾ ಅವರ ಮೇಲೆ ನಿಗಾ ಇಡುವಂತೆ ನಾನು ಪ್ರಧಾನಿಯನ್ನು ವಿನಂತಿಸುತ್ತೇನೆ. ಅವರು ತಮ್ಮ ರಾಜಕೀಯ ಹಿತಾಸಕ್ತಿಗಳನ್ನು ಪೂರೈಸಲು ದೇಶಕ್ಕೆ ಹೆಚ್ಚು ಹಾನಿ ಮಾಡುತ್ತಿದ್ದಾರೆ. ಅವರು (ಅಮಿತ್ ಶಾ) ಏಕೆ ಇಷ್ಟು ಆತುರದಲ್ಲಿದ್ದಾರೆ? ಅವರು ಎಂದಿಗೂ ಪ್ರಧಾನಿಯಾಗುವುದಿಲ್ಲ, ಮೋದಿಯವರು ಅಧಿಕಾರದಿಂದ ತೆರಳಿದ ನಂತರ ಅವರು ಏನು ಮಾಡುತ್ತಾರೆ? ತಮ್ಮ ಗೃಹ ಸಚಿವರು ಕೇಂದ್ರ ಸಂಸ್ಥೆಗಳನ್ನು ಹೇಗೆ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಪ್ರಧಾನಿ ನೋಡಬೇಕು. ಪ್ರಧಾನಿ ಅವರನ್ನು ನಿಯಂತ್ರಿಸಬೇಕು” ಎಂದು ಬ್ಯಾನರ್ಜಿ ಹೇಳಿದರು.

ವಿಶಾಲ ವಿರೋಧ ಪಕ್ಷಗಳ ಒಕ್ಕೂಟವಾದ ಇಂಡಿಯಾ ಬಣಕ್ಕೆ ಮನವಿ ಮಾಡಿದ ಬ್ಯಾನರ್ಜಿ, ಇತ್ತೀಚೆಗೆ ಜಾರಿಗೆ ತಂದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಒಗ್ಗಟ್ಟಿನ ಪ್ರತಿರೋಧವನ್ನು ಕೋರಿದರು.

“ನಿಮ್ಮ ಮೂಲಕ ನಾನು ಇಂಡಿಯಾ ಮೈತ್ರಿಕೂಟಕ್ಕೆ ಮನವಿ ಮಾಡುತ್ತೇನೆ. ಇದನ್ನು ಧೈರ್ಯದಿಂದ ಒಗ್ಗೂಡಿ ಹೋರಾಡೋಣ. ಇದು ಕೇವಲ ವೈಯಕ್ತಿಕ ಸಮಸ್ಯೆಯಲ್ಲ; ಇದು ಎಲ್ಲರ ಮೇಲೆ ಪರಿಣಾಮ ಬೀರುತ್ತದೆ. ಇಂದು, ಅವರು ಒಂದು ಗುಂಪನ್ನು ಗುರಿಯಾಗಿಸಿಕೊಂಡಿದ್ದಾರೆ. ನಾಳೆ, ಅದು ಇನ್ನೊಂದು ಗುಂಪಾಗಬಹುದು. ಇದರ ನಂತರ, ಅವರು ಏಕರೂಪ ನಾಗರಿಕ ಸಂಹಿತೆಯನ್ನು ತರುವ ಬಗ್ಗೆಯೂ ಮಾತನಾಡುತ್ತಿದ್ದಾರೆ” ಎಂದು ಅವರು ಹೇಳಿದರು.

ಸಿವಿಲ್ ವಿವಾದದಲ್ಲಿ ಕ್ರಿಮಿನಲ್ ಮೊಕದ್ದಮೆ: ಉತ್ತರ ಪ್ರದೇಶ ಪೊಲೀಸರಿಗೆ ದಂಡ ವಿಧಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...