Homeಮುಖಪುಟಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಸಂಪೂರ್ಣ ಫಲಿತಾಂಶದ ಪಟ್ಟಿ ಹೀಗಿದೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಗಿದಿದೆ. ದೇಶದ ಜನರ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಒಂದು ಕಾಲದ ಆಪ್ತ, ಬಿಜೆಪಿಯ ಅಭ್ಯರ್ಥಿ ಸುವೆಂಧು ಅಧಿಕಾರಿ ವಿರುದ್ದ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ. ಕೇರಳದಲ್ಲಿ ಸತತವಾಗಿ ಎಡಕ್ಷಗಳು ಗದ್ದುಗೆಗೆ ಏರಿದೆ. ತಮಿಳುನಾಡಿನಲ್ಲಿ ಡಿಎಂಕೆ ದಶಕಗಳ ನಂತರ ರಾಜ್ಯವನ್ನು ಗೆದ್ದುಕೊಂಡಿದೆ. ಅಸ್ಸಾಂ ಮತ್ತೆ ಬಿಜೆಪಿಯ ತೆಕ್ಕೆಗೆ ಬಿದ್ದರೆ, ಪುದುಚೇರಿಯಲ್ಲಿ ಕೂಡಾ ಬಿಜೆಪಿ ಬಹುಮತಕ್ಕೇರಿದೆ.

ತಮ್ಮ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮಬಂಗಾಳ – 292 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 148

TMC ► 214
BJP ► 76
Cong & Left ► 1
ಇತರೆ ► 1

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌


ಕೇರಳ – 140 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 71

ಕೇರಳದ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬದಲಾಯಿಸಿದೆ. ನಾಲ್ಕು ದಶಕಗಳ ನಂತರ ಕೇರಳದಲ್ಲಿ ಸತತವಾಗಿ ಮೈತ್ರಿಕೂಟವೊಂದು ಅಧಿಕಾರ ಹಿಡಿಯಲಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತಾದರೂ ಅಂತಿಮ ಘಟ್ಟದಲ್ಲಿ ಬಿಜೆಪಿ ಮುಗ್ಗರಿಸಿದೆ. ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು. ಇದೀಗ ಕೇರಳದಲ್ಲಿ ಎಲ್‌ಡಿಎಫ್‌ 99 ಕ್ಷೇತ್ರಗಳೊಂದಿಗೆ ಬಹುಮತ ಪಡೆದಿದೆ.

ಸಿಪಿಎಂ ನೇತೃತ್ವದ LDF ► 99 Wins
ಕಾಂಗ್ರೆಸ್ ನೇತೃತ್ವದ UDF ► 41 
ಬಿಜೆಪಿ ನೇತೃತ್ವದ NDA► 0 Wins


ತಮಿಳುನಾಡು- 234 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 118 

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಆದರೆ ಡ್ರಾವಿಡನಾಡಿನಲ್ಲಿ ಬಿಜೆಪಿಯು ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ.

DMK ಒಕ್ಕೂಟ ► 160
AIADMK ಒಕ್ಕೂಟ ► 74

ಇದನ್ನೂ ಓದಿ: `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೂ ಸ್ಥಾನ


ಅಸ್ಸಾಂ – 126 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 64 

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಈ ಮೂಲಕ ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಮತ್ತೆಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

BJP ಮೈತ್ರಿ ► 75
ಕಾಂಗ್ರೆಸ್ ಮೈತ್ರಿ ► 50
ಇತರೆ ► 1


ಪುದುಚೇರಿ – 30 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 16

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಇಲ್ಲಿ ಈ ಹಿಂದೆ ಬಿಜೆಪಿಯು ಆಪರೇಷನ್ ಕಮಲ ನಡೆಸಿ ಸರ್ಕಾರವನ್ನು ಕೆಡವಿಹಾಕಿತ್ತು.

BJP ಮೈತ್ರಿ ► 16
ಕಾಂಗ್ರೆಸ್ ಮೈತ್ರಿ ► 9
ಪಕ್ಷೇತರ ► 5


ಇದನ್ನೂ ಓದಿ: ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....