Homeಮುಖಪುಟಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಸಂಪೂರ್ಣ ಫಲಿತಾಂಶದ ಪಟ್ಟಿ ಹೀಗಿದೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಗಿದಿದೆ. ದೇಶದ ಜನರ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಒಂದು ಕಾಲದ ಆಪ್ತ, ಬಿಜೆಪಿಯ ಅಭ್ಯರ್ಥಿ ಸುವೆಂಧು ಅಧಿಕಾರಿ ವಿರುದ್ದ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ. ಕೇರಳದಲ್ಲಿ ಸತತವಾಗಿ ಎಡಕ್ಷಗಳು ಗದ್ದುಗೆಗೆ ಏರಿದೆ. ತಮಿಳುನಾಡಿನಲ್ಲಿ ಡಿಎಂಕೆ ದಶಕಗಳ ನಂತರ ರಾಜ್ಯವನ್ನು ಗೆದ್ದುಕೊಂಡಿದೆ. ಅಸ್ಸಾಂ ಮತ್ತೆ ಬಿಜೆಪಿಯ ತೆಕ್ಕೆಗೆ ಬಿದ್ದರೆ, ಪುದುಚೇರಿಯಲ್ಲಿ ಕೂಡಾ ಬಿಜೆಪಿ ಬಹುಮತಕ್ಕೇರಿದೆ.

ತಮ್ಮ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮಬಂಗಾಳ – 292 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 148

TMC ► 214
BJP ► 76
Cong & Left ► 1
ಇತರೆ ► 1

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌


ಕೇರಳ – 140 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 71

ಕೇರಳದ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬದಲಾಯಿಸಿದೆ. ನಾಲ್ಕು ದಶಕಗಳ ನಂತರ ಕೇರಳದಲ್ಲಿ ಸತತವಾಗಿ ಮೈತ್ರಿಕೂಟವೊಂದು ಅಧಿಕಾರ ಹಿಡಿಯಲಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತಾದರೂ ಅಂತಿಮ ಘಟ್ಟದಲ್ಲಿ ಬಿಜೆಪಿ ಮುಗ್ಗರಿಸಿದೆ. ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು. ಇದೀಗ ಕೇರಳದಲ್ಲಿ ಎಲ್‌ಡಿಎಫ್‌ 99 ಕ್ಷೇತ್ರಗಳೊಂದಿಗೆ ಬಹುಮತ ಪಡೆದಿದೆ.

ಸಿಪಿಎಂ ನೇತೃತ್ವದ LDF ► 99 Wins
ಕಾಂಗ್ರೆಸ್ ನೇತೃತ್ವದ UDF ► 41 
ಬಿಜೆಪಿ ನೇತೃತ್ವದ NDA► 0 Wins


ತಮಿಳುನಾಡು- 234 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 118 

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಆದರೆ ಡ್ರಾವಿಡನಾಡಿನಲ್ಲಿ ಬಿಜೆಪಿಯು ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ.

DMK ಒಕ್ಕೂಟ ► 160
AIADMK ಒಕ್ಕೂಟ ► 74

ಇದನ್ನೂ ಓದಿ: `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೂ ಸ್ಥಾನ


ಅಸ್ಸಾಂ – 126 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 64 

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಈ ಮೂಲಕ ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಮತ್ತೆಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

BJP ಮೈತ್ರಿ ► 75
ಕಾಂಗ್ರೆಸ್ ಮೈತ್ರಿ ► 50
ಇತರೆ ► 1


ಪುದುಚೇರಿ – 30 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 16

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಇಲ್ಲಿ ಈ ಹಿಂದೆ ಬಿಜೆಪಿಯು ಆಪರೇಷನ್ ಕಮಲ ನಡೆಸಿ ಸರ್ಕಾರವನ್ನು ಕೆಡವಿಹಾಕಿತ್ತು.

BJP ಮೈತ್ರಿ ► 16
ಕಾಂಗ್ರೆಸ್ ಮೈತ್ರಿ ► 9
ಪಕ್ಷೇತರ ► 5


ಇದನ್ನೂ ಓದಿ: ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...