Homeಮುಖಪುಟಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಸಂಪೂರ್ಣ ಫಲಿತಾಂಶದ ಪಟ್ಟಿ ಹೀಗಿದೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಗಿದಿದೆ. ದೇಶದ ಜನರ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಒಂದು ಕಾಲದ ಆಪ್ತ, ಬಿಜೆಪಿಯ ಅಭ್ಯರ್ಥಿ ಸುವೆಂಧು ಅಧಿಕಾರಿ ವಿರುದ್ದ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ. ಕೇರಳದಲ್ಲಿ ಸತತವಾಗಿ ಎಡಕ್ಷಗಳು ಗದ್ದುಗೆಗೆ ಏರಿದೆ. ತಮಿಳುನಾಡಿನಲ್ಲಿ ಡಿಎಂಕೆ ದಶಕಗಳ ನಂತರ ರಾಜ್ಯವನ್ನು ಗೆದ್ದುಕೊಂಡಿದೆ. ಅಸ್ಸಾಂ ಮತ್ತೆ ಬಿಜೆಪಿಯ ತೆಕ್ಕೆಗೆ ಬಿದ್ದರೆ, ಪುದುಚೇರಿಯಲ್ಲಿ ಕೂಡಾ ಬಿಜೆಪಿ ಬಹುಮತಕ್ಕೇರಿದೆ.

ತಮ್ಮ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮಬಂಗಾಳ – 292 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 148

TMC ► 214
BJP ► 76
Cong & Left ► 1
ಇತರೆ ► 1

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌


ಕೇರಳ – 140 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 71

ಕೇರಳದ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬದಲಾಯಿಸಿದೆ. ನಾಲ್ಕು ದಶಕಗಳ ನಂತರ ಕೇರಳದಲ್ಲಿ ಸತತವಾಗಿ ಮೈತ್ರಿಕೂಟವೊಂದು ಅಧಿಕಾರ ಹಿಡಿಯಲಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತಾದರೂ ಅಂತಿಮ ಘಟ್ಟದಲ್ಲಿ ಬಿಜೆಪಿ ಮುಗ್ಗರಿಸಿದೆ. ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು. ಇದೀಗ ಕೇರಳದಲ್ಲಿ ಎಲ್‌ಡಿಎಫ್‌ 99 ಕ್ಷೇತ್ರಗಳೊಂದಿಗೆ ಬಹುಮತ ಪಡೆದಿದೆ.

ಸಿಪಿಎಂ ನೇತೃತ್ವದ LDF ► 99 Wins
ಕಾಂಗ್ರೆಸ್ ನೇತೃತ್ವದ UDF ► 41 
ಬಿಜೆಪಿ ನೇತೃತ್ವದ NDA► 0 Wins


ತಮಿಳುನಾಡು- 234 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 118 

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಆದರೆ ಡ್ರಾವಿಡನಾಡಿನಲ್ಲಿ ಬಿಜೆಪಿಯು ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ.

DMK ಒಕ್ಕೂಟ ► 160
AIADMK ಒಕ್ಕೂಟ ► 74

ಇದನ್ನೂ ಓದಿ: `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೂ ಸ್ಥಾನ


ಅಸ್ಸಾಂ – 126 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 64 

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಈ ಮೂಲಕ ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಮತ್ತೆಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

BJP ಮೈತ್ರಿ ► 75
ಕಾಂಗ್ರೆಸ್ ಮೈತ್ರಿ ► 50
ಇತರೆ ► 1


ಪುದುಚೇರಿ – 30 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 16

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಇಲ್ಲಿ ಈ ಹಿಂದೆ ಬಿಜೆಪಿಯು ಆಪರೇಷನ್ ಕಮಲ ನಡೆಸಿ ಸರ್ಕಾರವನ್ನು ಕೆಡವಿಹಾಕಿತ್ತು.

BJP ಮೈತ್ರಿ ► 16
ಕಾಂಗ್ರೆಸ್ ಮೈತ್ರಿ ► 9
ಪಕ್ಷೇತರ ► 5


ಇದನ್ನೂ ಓದಿ: ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...