Homeಮುಖಪುಟಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಬಂಗಾಳಕ್ಕೆ ‘ದೀದಿ’, ತಮಿಳುನಾಡಿಗೆ ‘ಸ್ಟಾಲಿನ್’, ಕೇರಳಕ್ಕೆ ‘ವಿಜಯನ್’!

ಸಂಪೂರ್ಣ ಫಲಿತಾಂಶದ ಪಟ್ಟಿ ಹೀಗಿದೆ

- Advertisement -
- Advertisement -

Election Results 2021 Live Updates | Assembly election 2021 result | latest election results | latest election news | NaanuGauri

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಶನಿವಾರ ಮುಗಿದಿದೆ. ದೇಶದ ಜನರ ಗಮನ ಸೆಳೆದಿದ್ದ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸ್ಪಷ್ಟ ಬಹುಮತ ಪಡೆದಿದೆ. ಆದರೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ತಮ್ಮ ಒಂದು ಕಾಲದ ಆಪ್ತ, ಬಿಜೆಪಿಯ ಅಭ್ಯರ್ಥಿ ಸುವೆಂಧು ಅಧಿಕಾರಿ ವಿರುದ್ದ ನಂದಿಗ್ರಾಮದಲ್ಲಿ ಸೋಲುಂಡಿದ್ದಾರೆ. ಕೇರಳದಲ್ಲಿ ಸತತವಾಗಿ ಎಡಕ್ಷಗಳು ಗದ್ದುಗೆಗೆ ಏರಿದೆ. ತಮಿಳುನಾಡಿನಲ್ಲಿ ಡಿಎಂಕೆ ದಶಕಗಳ ನಂತರ ರಾಜ್ಯವನ್ನು ಗೆದ್ದುಕೊಂಡಿದೆ. ಅಸ್ಸಾಂ ಮತ್ತೆ ಬಿಜೆಪಿಯ ತೆಕ್ಕೆಗೆ ಬಿದ್ದರೆ, ಪುದುಚೇರಿಯಲ್ಲಿ ಕೂಡಾ ಬಿಜೆಪಿ ಬಹುಮತಕ್ಕೇರಿದೆ.

ತಮ್ಮ ಸೋಲಿನ ಕುರಿತು ಪ್ರತಿಕ್ರಿಯಿಸಿರುವ ಮಮತಾ ಬ್ಯಾನರ್ಜಿ, “ನಂದಿಗ್ರಾಮದ ಜನತೆ ಯಾವುದೇ ತೀರ್ಪು ಕೊಟ್ಟರೂ ಸ್ವೀಕರಿಸುತ್ತೇನೆ. ನಮ್ಮ ಬೃಹತ್ ವಿಜಯದಲ್ಲಿ ನಂದಿಗ್ರಾಮವನ್ನು ತ್ಯಾಗಮಾಡಬೇಕಾಗಿ ಬಂದಿದೆ. ಆದರೆ ನಾವು ಇಡೀ ರಾಜ್ಯವನ್ನು ಗೆದ್ದಿದ್ದೇವೆ. ಇದುವರೆಗೆ ಏನಾಗಿದೆಯೊ ಅದು ನಮಗೆ ಒಳಿತಾಗಿದೆ. ಆದರೆ ನಾನು ನಂದಿಗ್ರಾಮದ ಫಲಿತಾಂಶದ ವಿಚಾರದಲ್ಲಿ ಕೋರ್ಟಿಗೆ ಹೋಗುತ್ತೇನೆ. ಅಲ್ಲಿ ಕೆಲವು ದುಷ್ಕೃತ್ಯಗಳು ನಡೆದಿವೆ ಎಂದು ನಾನು ಕೇಳಿದ್ದೇನೆ” ಎಂದು ತಿಳಿಸಿದ್ದಾರೆ.

ಪಶ್ಚಿಮಬಂಗಾಳ – 292 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 148

TMC ► 214
BJP ► 76
Cong & Left ► 1
ಇತರೆ ► 1

ಇದನ್ನೂ ಓದಿ: ಅಸ್ಸಾಂ ಚುನಾವಣೆ: ಜೈಲಿನಲ್ಲಿದ್ದುಕೊಂಡೇ ಜಯಗಳಿಸಿದ ಹೋರಾಟಗಾರ ಅಖಿಲ್ ಗೊಗೊಯ್‌


ಕೇರಳ – 140 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 71

ಕೇರಳದ ರಾಜಕೀಯ ಸಂಪ್ರದಾಯವನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ಬದಲಾಯಿಸಿದೆ. ನಾಲ್ಕು ದಶಕಗಳ ನಂತರ ಕೇರಳದಲ್ಲಿ ಸತತವಾಗಿ ಮೈತ್ರಿಕೂಟವೊಂದು ಅಧಿಕಾರ ಹಿಡಿಯಲಿದೆ. ಆದರೆ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಬಿಜೆಪಿ ಕಳೆದುಕೊಂಡಿದೆ.

ಆರಂಭದಲ್ಲಿ ಕೇರಳದ ಪಾಲಕ್ಕಾಡ್, ಕಾಸರಗೋಡ್‌, ನೇಮಂನಲ್ಲಿ ಬಿಜೆಪಿ ಮುನ್ನಡೆಯಲ್ಲಿತ್ತಾದರೂ ಅಂತಿಮ ಘಟ್ಟದಲ್ಲಿ ಬಿಜೆಪಿ ಮುಗ್ಗರಿಸಿದೆ. ರಾಜ್ಯದಲ್ಲಿ ಬಿಜೆಪಿ ಈ ಹಿಂದೆ ಇದ್ದ ಒಂದು ಕ್ಷೇತ್ರವನ್ನು ಕೂಡಾ ಕಳೆದುಕೊಂಡಿದೆ.

ಮುಖ್ಯಮಂತ್ರಿ ಪಿಣರಾಯಿ ಈ ಹಿಂದೆ ಬಿಜೆಪಿಗೆ ಇರುವ ಒಂದು ಕ್ಷೇತ್ರವನ್ನು ಕೂಡಾ ‘ಕ್ಲೋಸ್’ ಮಾಡುವುದಾಗಿ ಹೇಳಿದ್ದರು. ಇದೀಗ ಕೇರಳದಲ್ಲಿ ಎಲ್‌ಡಿಎಫ್‌ 99 ಕ್ಷೇತ್ರಗಳೊಂದಿಗೆ ಬಹುಮತ ಪಡೆದಿದೆ.

ಸಿಪಿಎಂ ನೇತೃತ್ವದ LDF ► 99 Wins
ಕಾಂಗ್ರೆಸ್ ನೇತೃತ್ವದ UDF ► 41 
ಬಿಜೆಪಿ ನೇತೃತ್ವದ NDA► 0 Wins


ತಮಿಳುನಾಡು- 234 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 118 

ತಮಿಳುನಾಡಿನಲ್ಲಿ ಚುನಾವಣೋತ್ತರ ಸಮೀಕ್ಷೆಗಳ ಮಾಹಿತಿಯಂತೆ ವಿರೋಧ ಪಕ್ಷವಾದ ಡಿಎಂಕೆ ದಶಕಗಳ ನಂತರ ಅಧಿಕಾರ ಹಿಡಿಯುವತ್ತ ಹೊರಟಿದೆ. ಆದರೆ ಡ್ರಾವಿಡನಾಡಿನಲ್ಲಿ ಬಿಜೆಪಿಯು ಮೊದಲ ಬಾರಿಗೆ ತನ್ನ ಖಾತೆಯನ್ನು ತೆರೆದಿದೆ.

DMK ಒಕ್ಕೂಟ ► 160
AIADMK ಒಕ್ಕೂಟ ► 74

ಇದನ್ನೂ ಓದಿ: `ಕೇರಳ 99′ – ಎಡ ಮೈತ್ರಿಯಲ್ಲಿರುವ ಎಲ್ಲಾ ಪಕ್ಷಗಳಿಗೂ ಸ್ಥಾನ


ಅಸ್ಸಾಂ – 126 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 64 

ಅಸ್ಸಾಂನಲ್ಲಿ ಬಿಜೆಪಿ ನೇತೃತ್ವದ ಆಡಳಿತ ಪಕ್ಷಗಳ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಈ ಮೂಲಕ ಆಡಳಿತರೂಢ ಬಿಜೆಪಿ ನೇತೃತ್ವದ ಮೈತ್ರಿ ಮತ್ತೆಅಧಿಕಾರ ಹಿಡಿಯುವತ್ತ ದಾಪುಗಾಲಿಟ್ಟಿದೆ.

BJP ಮೈತ್ರಿ ► 75
ಕಾಂಗ್ರೆಸ್ ಮೈತ್ರಿ ► 50
ಇತರೆ ► 1


ಪುದುಚೇರಿ – 30 ಕ್ಷೇತ್ರಗಳು
ಮ್ಯಾಜಿಕ್ ಸಂಖ್ಯೆ- 16

ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಬಹುಮತ ದೊರಕಿದೆ. ಇಲ್ಲಿ ಈ ಹಿಂದೆ ಬಿಜೆಪಿಯು ಆಪರೇಷನ್ ಕಮಲ ನಡೆಸಿ ಸರ್ಕಾರವನ್ನು ಕೆಡವಿಹಾಕಿತ್ತು.

BJP ಮೈತ್ರಿ ► 16
ಕಾಂಗ್ರೆಸ್ ಮೈತ್ರಿ ► 9
ಪಕ್ಷೇತರ ► 5


ಇದನ್ನೂ ಓದಿ: ಸುವೆಂದು ಅಧಿಕಾರಿ ವಿರುದ್ಧ ಸೋಲು: ಕೋರ್ಟಿಗೆ ಹೋಗುತ್ತೇನೆಂದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ ಎಸ್‌ಐಆರ್ | ಮೇಲ್ಮನವಿ ನ್ಯಾಯಮಂಡಳಿಗಳಿಗೆ ಕಾಲಮಿತಿ ನಿಗದಿಪಡಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಮೇಲ್ಮನವಿಗಳ ವಿಚಾರಣೆ ನಡೆಸುತ್ತಿರುವ ಮೇಲ್ಮನವಿ ನ್ಯಾಯಾಧಿಕರಣಗಳ ನಿರ್ಧಾರಗಳಿಗೆ ಯಾವುದೇ ನಿರ್ದಿಷ್ಟ ಸಮಯದ ಮಿತಿಯನ್ನು ನಿಗದಿಪಡಿಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್...

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...