Homeಮುಖಪುಟದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

ದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುನ್ನ ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ನಾಯಕರು ಈಗ ಮತ್ತೆ ಟಿಎಂಸಿಗೆ ವಾಪಾಸ್‌ ಆಗುತ್ತಿದ್ದಾರೆ. ಇದರಿಂದ ಬಂಗಾಳದಲ್ಲಿ ದೀದಿ V/s ಮೋದಿ ಎಂಬ ಆಟಕ್ಕೆ ಮತ್ತಷ್ಟು ಕಳೆ ಬಂದಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಚುನಾವಣೆಗೆ ಮೊದಲು ಎದುರಿಸಿದ ದೊಡ್ಡ ಸವಾಲು ಎಂದರೆ, ತಮ್ಮ ಪಕ್ಷದ ನಾಯಕರು ಬಿಜೆಪಿಗೆ ಭಾರಿ ಪ್ರಮಾಣದಲ್ಲಿ ಪಕ್ಷಾಂತರವಾದದ್ದು. ನಿರಂತರವಾಗಿ ನಡೆದ ಈ ಪ್ರಕ್ರಿಯೆಯಿಂದ ಬಂಗಾಳದಲ್ಲಿ ಟಿಎಂಸಿಗೆ ಮತ್ತೆ ಅಧಿಕಾರ ಸಿಗುವುದಿಲ್ಲ ಎಂದು ಬಿಜೆಪಿ ಪ್ರಚಾರಪಡಿಸಿತ್ತು.

ಆದರೆ, ಮೇ 2 ರಂದು ಬಂದ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಭರ್ಜರಿ ಬಹುಮತ ದೊರಕಿ, ಸರ್ಕಾರ ರಚಿಸಿದರು. ತೃಣಮೂಲ ಕಾಂಗ್ರೆಸ್ 292 ವಿಧಾನಸಭಾ ಸ್ಥಾನಗಳಲ್ಲಿ 213 ಸ್ಥಾನಗಳು ಮತ್ತು  ಬಿಜೆಪಿ 77 ಸ್ಥಾನಗಳನ್ನು ಗಳಿಸಿದೆ.

ಈಗ, ಬಂಗಾಳದಲ್ಲಿ ರಿವರ್ಸ್ ಮೈಗ್ರೇಶನ್ ಹೊಸ ಪ್ರವೃತ್ತಿಯಾಗಿದ್ದು, ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುವವರು ಹೆಚ್ಚಾಗಿದ್ದು, ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ಪಕ್ಷಕ್ಕೆ ಮರು ಪ್ರವೇಶ ಕೋರಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಉದಾಹರಣೆಗೆ, ಮಾಜಿ ಶಾಸಕ ಸೋನಾಲಿ ಗುಹಾ, ಮಾರ್ಚ್‌ನಲ್ಲಿ ತೃಣಮೂಲವನ್ನು ತೊರೆದ ನಂತರ “ನೀರಿನಿಂದ ಹೊರ ಬಂದ ಮೀನು ನಾನು” ಎಂದು ಹೇಳಿದ್ದರು. “ಮತ್ತೊಮ್ಮೆ ಟಿಎಂಸಿ ಧ್ವಜವನ್ನು ಹಿಡಿಯಲು ಬಯಸುತ್ತೇನೆ” ಎಂದು ಫುಟ್ಬಾಲ್ ಆಟಗಾರ, ರಾಜಕಾರಣಿ ದೀಪೇಂದು ಬಿಸ್ವಾಸ್, ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದಾರೆ. ಇನ್ನೂ ಪಿಟಿಐ ವರದಿಯ ಪ್ರಕಾರ ಅಂತಹ ಇತರ ಹೆಸರುಗಳಲ್ಲಿ ಸರಳಾ ಮುರ್ಮೂ ಮತ್ತು ಅಮಲ್ ಆಚಾರ್ಯ ಕೂಡ ಸೇರಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ರಾಜೀಬ್ ಬ್ಯಾನರ್ಜಿ ಕೂಡ ಪಕ್ಷಕ್ಕೆ ವಾಪಸ್ ಬರುವುದಾಗಿ ಹೇಳಿದ್ದಾರೆ.

“ನಾಯಕರು ಮಾತ್ರವಲ್ಲ, 7 ರಿಂದ 8 ಮಂದಿ ವಿಜೇತ ಶಾಸಕರು ಮತ್ತು ಬಿಜೆಪಿಯ 3 ರಿಂದ 4 ಮಂದಿ ಹಾಲಿ ಸಂಸದರು ತೃಣಮೂಲ ಕಾಂಗ್ರೆಸ್ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ” ಎಂದು ತೃಣಮೂಲ ವಕ್ತಾರ ಕುನಾಲ್ ಘೋಷ್ ತಿಳಿಸಿದ್ದಾರೆ. ಆದರೆ, ಪಕ್ಷದ ನಾಯಕತ್ವವು ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ಆದರೆ ನಾವು ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕಾಗಿದೆ. ಈ ನಾಯಕರು ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಪಕ್ಷವನ್ನು ತೊರೆದಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಮಮತಾ ಬ್ಯಾನರ್ಜಿ ಅವರ ನಾಯಕತ್ವದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಟಿಎಂಸಿಗೆ ಹಿಂದಿರುಗುವವರಲ್ಲಿ ಮತ್ತೆ ಕೇಳಿಬಂದಿರುವ ದೊಡ್ಡ ಹೆಸರು ಮುಕುಲ್ ರಾಯ್. ತೃಣಮೂಲ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆಗೊಂಡ ಮೊದಲ ನಾಯಕರಾದ ಮುಕುಲ್ ರಾಯ್‌. ಅವರ ಮಗ ಈಗ ಬಿಜೆಪಿಯನ್ನು ಟೀಕಿಸಿ ಫೇಸ್‌ಬುಕ್ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಹಿರಿಯ ನಾಯಕ ಮುಕುಲ್ ರಾಯ್‌  ಒಂದು ಮಾತನ್ನೂ ಹೇಳಿಲ್ಲ.

ಒಟ್ಟಾರೆ, ವಿಧಾನಸಭಾ ಚುನಾವಣೆಯಲ್ಲಿ ದೀದಿ V/s ಮೋದಿ ಎಂಬುದು ಜನಪ್ರಿಯವಾಗಿತ್ತು. ಟಿಎಂಸಿಯನ್ನು ಸೋಲಿಸಲು ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ನಡೆಸಿತ್ತು. ಸುವೇಂದು ಅಧಿಕಾರಿ, ಮುಕುಲ್ ರಾಯ್ ಸೇರಿದಂತೆ ಹಲವು ನಾಯಕರು ಟಿಎಂಸಿ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಬಿಜೆಪಿ ಬಿಟ್ಟು ಟಿಎಂಸಿಗೆ ಸೇರಲು ಬಯಸುತ್ತಿದ್ದಾರೆ.


ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...