Homeಮುಖಪುಟದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

ದೀದಿ V/s ಮೋದಿ: ಬಿಜೆಪಿಯಿಂದ ಟಿಎಂಸಿಗೆ ಮತ್ತೆ ವಾಪಸಾಗಲು ಬಯಸುತ್ತಿರುವ ನಾಯಕರು

- Advertisement -
- Advertisement -

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಮುನ್ನ ತೃಣಮೂಲ ಕಾಂಗ್ರೆಸ್‌ನಿಂದ ಬಿಜೆಪಿಗೆ ಪಕ್ಷಾಂತರಗೊಂಡಿದ್ದ ನಾಯಕರು ಈಗ ಮತ್ತೆ ಟಿಎಂಸಿಗೆ ವಾಪಾಸ್‌ ಆಗುತ್ತಿದ್ದಾರೆ. ಇದರಿಂದ ಬಂಗಾಳದಲ್ಲಿ ದೀದಿ V/s ಮೋದಿ ಎಂಬ ಆಟಕ್ಕೆ ಮತ್ತಷ್ಟು ಕಳೆ ಬಂದಿದೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯ ಚುನಾವಣೆಗೆ ಮೊದಲು ಎದುರಿಸಿದ ದೊಡ್ಡ ಸವಾಲು ಎಂದರೆ, ತಮ್ಮ ಪಕ್ಷದ ನಾಯಕರು ಬಿಜೆಪಿಗೆ ಭಾರಿ ಪ್ರಮಾಣದಲ್ಲಿ ಪಕ್ಷಾಂತರವಾದದ್ದು. ನಿರಂತರವಾಗಿ ನಡೆದ ಈ ಪ್ರಕ್ರಿಯೆಯಿಂದ ಬಂಗಾಳದಲ್ಲಿ ಟಿಎಂಸಿಗೆ ಮತ್ತೆ ಅಧಿಕಾರ ಸಿಗುವುದಿಲ್ಲ ಎಂದು ಬಿಜೆಪಿ ಪ್ರಚಾರಪಡಿಸಿತ್ತು.

ಆದರೆ, ಮೇ 2 ರಂದು ಬಂದ ಫಲಿತಾಂಶದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಗೆ ಭರ್ಜರಿ ಬಹುಮತ ದೊರಕಿ, ಸರ್ಕಾರ ರಚಿಸಿದರು. ತೃಣಮೂಲ ಕಾಂಗ್ರೆಸ್ 292 ವಿಧಾನಸಭಾ ಸ್ಥಾನಗಳಲ್ಲಿ 213 ಸ್ಥಾನಗಳು ಮತ್ತು  ಬಿಜೆಪಿ 77 ಸ್ಥಾನಗಳನ್ನು ಗಳಿಸಿದೆ.

ಈಗ, ಬಂಗಾಳದಲ್ಲಿ ರಿವರ್ಸ್ ಮೈಗ್ರೇಶನ್ ಹೊಸ ಪ್ರವೃತ್ತಿಯಾಗಿದ್ದು, ಬಿಜೆಪಿಯಿಂದ ತೃಣಮೂಲ ಕಾಂಗ್ರೆಸ್‌ಗೆ ಪಕ್ಷಾಂತರ ಮಾಡುವವರು ಹೆಚ್ಚಾಗಿದ್ದು, ಮಮತಾ ಬ್ಯಾನರ್ಜಿ ಅವರಿಗೆ ಪತ್ರ ಬರೆದು ಪಕ್ಷಕ್ಕೆ ಮರು ಪ್ರವೇಶ ಕೋರಿದ್ದಾರೆ.

ಇದನ್ನೂ ಓದಿ: ಲಕ್ಷದ್ವೀಪದ ಆಡಳಿತಾಧಿಕಾರಿಯನ್ನು ವಾಪಾಸು ಕರೆಸಿ-ಕೇರಳ ಅಸೆಂಬ್ಲಿ ನಿರ್ಣಯ ಮಂಡನೆ

ಉದಾಹರಣೆಗೆ, ಮಾಜಿ ಶಾಸಕ ಸೋನಾಲಿ ಗುಹಾ, ಮಾರ್ಚ್‌ನಲ್ಲಿ ತೃಣಮೂಲವನ್ನು ತೊರೆದ ನಂತರ “ನೀರಿನಿಂದ ಹೊರ ಬಂದ ಮೀನು ನಾನು” ಎಂದು ಹೇಳಿದ್ದರು. “ಮತ್ತೊಮ್ಮೆ ಟಿಎಂಸಿ ಧ್ವಜವನ್ನು ಹಿಡಿಯಲು ಬಯಸುತ್ತೇನೆ” ಎಂದು ಫುಟ್ಬಾಲ್ ಆಟಗಾರ, ರಾಜಕಾರಣಿ ದೀಪೇಂದು ಬಿಸ್ವಾಸ್, ಮಮತಾ ಬ್ಯಾನರ್ಜಿಗೆ ಪತ್ರ ಬರೆದಿದ್ದಾರೆ. ಇನ್ನೂ ಪಿಟಿಐ ವರದಿಯ ಪ್ರಕಾರ ಅಂತಹ ಇತರ ಹೆಸರುಗಳಲ್ಲಿ ಸರಳಾ ಮುರ್ಮೂ ಮತ್ತು ಅಮಲ್ ಆಚಾರ್ಯ ಕೂಡ ಸೇರಿದ್ದಾರೆ. ಮಮತಾ ಬ್ಯಾನರ್ಜಿ ಸರ್ಕಾರದಲ್ಲಿ ಮಂತ್ರಿಯಾಗಿದ್ದ ರಾಜೀಬ್ ಬ್ಯಾನರ್ಜಿ ಕೂಡ ಪಕ್ಷಕ್ಕೆ ವಾಪಸ್ ಬರುವುದಾಗಿ ಹೇಳಿದ್ದಾರೆ.

“ನಾಯಕರು ಮಾತ್ರವಲ್ಲ, 7 ರಿಂದ 8 ಮಂದಿ ವಿಜೇತ ಶಾಸಕರು ಮತ್ತು ಬಿಜೆಪಿಯ 3 ರಿಂದ 4 ಮಂದಿ ಹಾಲಿ ಸಂಸದರು ತೃಣಮೂಲ ಕಾಂಗ್ರೆಸ್ ಸೇರಲು ಇಚ್ಛೆ ವ್ಯಕ್ತಪಡಿಸಿದ್ದಾರೆ” ಎಂದು ತೃಣಮೂಲ ವಕ್ತಾರ ಕುನಾಲ್ ಘೋಷ್ ತಿಳಿಸಿದ್ದಾರೆ. ಆದರೆ, ಪಕ್ಷದ ನಾಯಕತ್ವವು ಈ ಬಗ್ಗೆ ಯಾವ ನಿರ್ಧಾರ ತೆಗೆದುಕೊಂಡಿದೆ ಎಂಬ ಬಗ್ಗೆ ಅವರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

“ಆದರೆ ನಾವು ಪಕ್ಷದ ಕಾರ್ಯಕರ್ತರ ಭಾವನೆಗಳನ್ನು ಗೌರವಿಸಬೇಕಾಗಿದೆ. ಈ ನಾಯಕರು ಚುನಾವಣೆಗೆ ಸ್ವಲ್ಪ ಮುಂಚಿತವಾಗಿ ಪಕ್ಷವನ್ನು ತೊರೆದಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಮಮತಾ ಬ್ಯಾನರ್ಜಿ ಅವರ ನಾಯಕತ್ವದಲ್ಲಿ ಚುನಾವಣೆಯಲ್ಲಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದಾರೆ” ಎಂದು ಘೋಷ್ ಹೇಳಿದ್ದಾರೆ.

ಟಿಎಂಸಿಗೆ ಹಿಂದಿರುಗುವವರಲ್ಲಿ ಮತ್ತೆ ಕೇಳಿಬಂದಿರುವ ದೊಡ್ಡ ಹೆಸರು ಮುಕುಲ್ ರಾಯ್. ತೃಣಮೂಲ ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆಗೊಂಡ ಮೊದಲ ನಾಯಕರಾದ ಮುಕುಲ್ ರಾಯ್‌. ಅವರ ಮಗ ಈಗ ಬಿಜೆಪಿಯನ್ನು ಟೀಕಿಸಿ ಫೇಸ್‌ಬುಕ್ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಹಿರಿಯ ನಾಯಕ ಮುಕುಲ್ ರಾಯ್‌  ಒಂದು ಮಾತನ್ನೂ ಹೇಳಿಲ್ಲ.

ಒಟ್ಟಾರೆ, ವಿಧಾನಸಭಾ ಚುನಾವಣೆಯಲ್ಲಿ ದೀದಿ V/s ಮೋದಿ ಎಂಬುದು ಜನಪ್ರಿಯವಾಗಿತ್ತು. ಟಿಎಂಸಿಯನ್ನು ಸೋಲಿಸಲು ಬಿಜೆಪಿ ಎಲ್ಲಾ ಪ್ರಯತ್ನಗಳನ್ನು ನಡೆಸಿತ್ತು. ಸುವೇಂದು ಅಧಿಕಾರಿ, ಮುಕುಲ್ ರಾಯ್ ಸೇರಿದಂತೆ ಹಲವು ನಾಯಕರು ಟಿಎಂಸಿ ಬಿಟ್ಟು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈಗ ಬಿಜೆಪಿ ಬಿಟ್ಟು ಟಿಎಂಸಿಗೆ ಸೇರಲು ಬಯಸುತ್ತಿದ್ದಾರೆ.


ಇದನ್ನೂ ಓದಿ: ಸಂಸದ ಪ್ರತಾಪ್ ಸಿಂಹ ನನ್ನ ಮೇಲೆ ವೈಯಕ್ತಿಕ ದಾಳಿ ನಡೆಸುತ್ತಿದ್ದಾರೆ: ಡಿಸಿ ರೋಹಿಣಿ ಸಿಂಧೂರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...