Homeಕರ್ನಾಟಕ‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

“ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಂಗಾಯಣ ನಿರ್ದೇಶಕರು ಆಶಿಸಿದ್ದಾರೆ

- Advertisement -
- Advertisement -

“ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ನಾನು ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ” ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸ್ಪಷ್ಟಪಡಿಸಿದ್ದಾರೆ.

ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ. ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದು ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಅಡ್ಡಂಡ ಅವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ಕ್ಷಮೆ ಕೋರಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅವರ ಕ್ಷಮೆಯಾಚನೆ ಹೀಗಿದೆ:

“ನಿರ್ಮಲಾನಂದ ಸ್ವಾಮೀಜಿಯವರನ್ನು ಅವಮಾನಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನಾನು ಮೂರ್ಖನಾಗಿ ಏನನ್ನೂ ಮಾತನಾಡಿಲ್ಲ. ಸಂತರ ನಾಡು ಇದು. ಸಂತರಿಲ್ಲದಿದ್ದರೆ ಈ ನಾಡನ್ನು ಕಟ್ಟಲು ಆಗುತ್ತಿಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಕೇವಲ ಸಂತರಲ್ಲ, ಎಂಟೆಕ್‌ ಓದಿಕೊಂಡವರು.”

“ಕೊಡವರಿಗೆ ಮಠಾಧೀಶರಿಲ್ಲ. ನನಗೆ ಯಾರು ಸ್ವಾಮೀಜಿ? ನಿರ್ಮಲಾನಂದ ಸ್ವಾಮೀಜಿಯವರೇ ನನಗೂ ಸ್ವಾಮೀಜಿ. ಕೊಡಗಿನಲ್ಲಿ ಅರೆಭಾಷೆ ಗೌಡರಿದ್ದಾರೆ. ಕೊಡವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದ ಅರೆಭಾಷೆ ಗೌಡ ಸಮುದಾಯಕ್ಕೂ ನಿರ್ಮಲಾನಂದರೇ ಸ್ವಾಮೀಜಿ. ಈ ಸ್ವಾಮೀಜಿಯವರ ಬಗ್ಗೆ ಕೆಟ್ಟ ಮಾತನಾಡಲು ಸಿದ್ಧನಿಲ್ಲ, ನಾನು ಆ ಕೆಲಸ ಮಾಡುವುದಿಲ್ಲ.”

“ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಇರಬೇಕೆಂದು ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿರುವುದಾಗಿ ಪತ್ರಿಕೆಯಲ್ಲಿ ಬಂದಿದೆ ಎಂದು ಹೇಳಿದ್ದೇನಷ್ಟೇ. ಅದು ಸುಳ್ಳಾದರೆ ಸುಳ್ಳು. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.”

“ಸ್ವಾಮೀಜಿಯವರಿಗೆ ಬುದ್ಧಿವಾದ ಹೇಳುವಷ್ಟು ನಾನು ಗ್ರೇಟ್ ಅಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಇವರಂತೆಯೇ ಅನೇಕ ಸ್ವಾಮೀಜಿಗಳು ಈ ನಾಡಿನಲ್ಲಿ ಇದ್ದಾರೆ. ಎಲ್ಲರೂ ಸಂತರೇ. ಇವರನ್ನು ಆರ್‌ಎಸ್‌ಎಸ್‌ ಗೌರವಿಸುತ್ತದೆ, ಸಮಾಜವಾದಿಗಳು ಗೌರವಿಸುತ್ತಾರೆ.”

“ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಅವಹೇಳನ ಮಾಡಿದ್ದೇನೆ ಎಂಬುದು ಸುಳ್ಳು, ರಾಜಕೀಯವಾಗಿ ಮಾತನಾಡಿದ್ದೇನೆ. ರಂಗಾಯಣ ನಿರ್ದೇಶಕರಾಗಿರುವ ನೀನು ರಾಜಕೀಯ ಮಾತನಾಡಬಹುದೇ ಎಂದು ಕೇಳುತ್ತಾರೆ. ರಾಜಕೀಯವೆಂದರೆ ಪವಿತ್ರ ಕ್ಷೇತ್ರ. ಪ್ರಧಾನಿ, ರಾಷ್ಟ್ರಪತಿಯವರೆಲ್ಲ ರಾಜಕೀಯದಿಂದ ಬಂದವರು. ರಾಜಕೀಯ ಮಾತನಾಡಬಾರದು ಎಂಬುದು ಅವೈಜ್ಞಾನಿಕ ಅರೆಜ್ಞಾನ. ರಾಜಕೀಯ ಮಾತನಾಡಿದರೆ ತಪ್ಪೇನು?”

“ಯಾವುದೋ ಒಂದು ಪಕ್ಷದ ಕುರಿತು ಹೇಳಿಲ್ಲ. ಒಟ್ಟು ರಾಜಕೀಯದ ಚರ್ಚೆಯನ್ನು ಮಾಡಿದ್ದೇವೆ. ನಾನು ಈಗ ನೇರವಾಗಿ ಆದಿಚುಂಚನಗಿರಿ ಮಠಕ್ಕೆ ಹೋಗುತ್ತೇನೆ. ಅವರೇನು ನನ್ನನ್ನು ಅಲ್ಲಿಂದ ಓಡಿಸುವುದಿಲ್ಲ. ಯಾಕೆಂದರೆ ಅವರು ಅತ್ಯಂತ ಶಾಂತ ಸ್ವಭಾವದವರು. ಅವರು ಕೋಪ ಮಾಡಿಕೊಂಡಿದ್ದನ್ನು ಎಂದೂ ಕಂಡಿಲ್ಲ.”

“ನಮ್ಮ ನಾಡಿನಲ್ಲಿ ಎಲ್ಲಾ ಜನಾಂಗಗಳಿಗೂ ಸ್ವಾಮೀಜಿಗಳು ಇದ್ದಾರಲ್ಲವಾ? ಅದು ಸುಳ್ಳಾ? ವೀರಶೈವರಿಗೆ ಒಬ್ಬರು ಸ್ವಾಮೀಜಿ, ದಲಿತರಿಗೊಬ್ಬರು ಸ್ವಾಮೀಜಿ ಇದ್ದಾರೆ. ಮುನ್ನೂರು ಜನ ಸ್ವಾಮೀಜಿಗಳು ನನ್ನ ‘ಟಿಪ್ಪು ನಿಜಕನಸುಗಳು’ ನಾಟಕ ನೋಡಲು ಕಲ್ಬುರ್ಗಿಯಲ್ಲಿ ಬಂದಿದ್ದರು. ನಾನು ಸಂತರಿಗೆ ಗೌರವ ಕೊಡುವ ಸಂಸ್ಕಾರದವನು. ನಾನು ಕಮ್ಯುನಿಸ್ಟ್ ಅಲ್ಲ.ಈ ಚುನಾವಣೆ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಯವರ ಹೆಸರನ್ನು ಯಾರಾದರೂ ಬಳಸಿಕೊಂಡರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಂತರು ಕ್ಷಮಿಸಬಲ್ಲರಲ್ಲವಾ? ಕ್ಷಮಿಸಿ.”

“ಒಕ್ಕಲಿಗರು ಬಂದು ಮುತ್ತಿಗೆ ಹಾಕಿದ್ದಾರೆ ಎನ್ನುತ್ತೀರಿ. ಯಾವ ಒಕ್ಕಲಿಗರು ಎಂದು ನೋಡಬೇಕಲ್ಲವಾ? ಜೆಡಿಎಸ್‌‌ ಒಕ್ಕಲಿಗರಾ? ಕಾಂಗ್ರೆಸ್ ಒಕ್ಕಲಿಗರಾ? ಬಿಜೆಪಿ ಒಕ್ಕಲಿಗರ?- ಇದು ರಾಜಕೀಯ. ಸ್ವಾಮೀಜಿಯವರಲ್ಲಿ ವಿನಂತಿ ಮಾಡುತ್ತೇನೆ. ನಾನು ನಿಮ್ಮಷ್ಟು ದೊಡ್ಡ ವ್ಯಕ್ತಿಯಾಗಲಾರೆ. ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರು ಬೆಳೆಯಬೇಕೆಂದು ಹೇಳುತ್ತಿಲ್ಲ, ಒಟ್ಟಾರೆ ಸ್ವಾಮೀಜಿಗಳ ಕುರಿತು ಹೇಳುತ್ತಿದ್ದೇನೆ.”

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

“ನಾನು ಮಾತನಾಡಿದ್ದು ತಪ್ಪು ಎಂಬುದಾದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ವಿಷಾದ ಬೇರೆಯಲ್ಲ, ಕ್ಷಮೆ ಬೇರೆಯಲ್ಲ. ಸ್ವಾಮೀಜಿಗಿಂತ ದೊಡ್ಡವನು ನಾನಲ್ಲ. ನಾನು ಸ್ವಾಮೀಜಿಗೆ ಅವಮಾನ ಮಾಡಿಲ್ಲ. ಮಾಡುವುದೂ ಇಲ್ಲ. ನನ್ನ ಹೇಳಿಕೆಯಿಂದ ಅವರ ಭಕ್ತಕೋಟಿಯಲ್ಲಿ ಮುಜುಗರವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರಲ್ಲಿ ನಾನು ಕ್ಷಮೆ ಕೋರುತ್ತೇನೆ ಹೊರತು, ಇಲ್ಲಿ ಬಂದು ರಾಜಕೀಯಕ್ಕಾಗಿ ಗಲಾಟೆ ಮಾಡುವವರಲ್ಲಿ ಅಲ್ಲ. ಒಂದು ಪಕ್ಷದ ಹಿಂಬಾಲಕರಲ್ಲಿ ಕ್ಷಮೆ ಕೇಳಲ್ಲ.”

“ನಿರ್ಮಲಾನಂದ ಸ್ವಾಮೀಜಿಯವರ ಬಗ್ಗೆ ನಾನು ಅಪಮಾನಕರವಾಗಿ ಮಾತನಾಡಿಲ್ಲ. ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಬಂದರೆ ಅದಕ್ಕೆ ನಾನು ಹೊಣೆಯಲ್ಲ. ನಾನು ಮಾತನಾಡಿದ್ದು ನನ್ನ ಬಳಿ ರೆಕಾರ್ಡ್‌‌ನಲ್ಲಿ ಇದೆ. ನಾನು ಎಲ್ಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಲ್ಲ, ಮಾಧ್ಯಮ ಗೋಷ್ಠಿ ನಡೆಸಿ ಹೇಳಿದ್ದಲ್ಲ. ಯಾವುದೋ ಒಂದು ಮಿಡಿಯದವರು ತಮಗೆ ಬೇಕಾದಂತೆ ಬಳಸಿಕೊಂಡು ಟಿಆರ್‌ಪಿ ಹೆಚ್ಚಿಸಿಕೊಂಡಿದ್ದರೆ, ಅವರಿಗೆ ಲಾಭವಾಗಿದ್ದರೆ ಧನ್ಯವಾದ. ಆ ಟಿ.ವಿ. ಚಾನೆಲ್‌ ಕೂಡ ಲಾಸ್ ಆಗಬಾರದು.”

-ಈ ಮೇಲಿನ ಮಾತುಗಳನ್ನು ಅಡ್ಡಂಡ ಕಾರ್ಯಪ್ಪ ಅವರು ಖಾಸಗಿ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...