Homeಕರ್ನಾಟಕ‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

“ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಂಗಾಯಣ ನಿರ್ದೇಶಕರು ಆಶಿಸಿದ್ದಾರೆ

- Advertisement -
- Advertisement -

“ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ನಾನು ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ” ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸ್ಪಷ್ಟಪಡಿಸಿದ್ದಾರೆ.

ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ. ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದು ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಅಡ್ಡಂಡ ಅವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ಕ್ಷಮೆ ಕೋರಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅವರ ಕ್ಷಮೆಯಾಚನೆ ಹೀಗಿದೆ:

“ನಿರ್ಮಲಾನಂದ ಸ್ವಾಮೀಜಿಯವರನ್ನು ಅವಮಾನಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನಾನು ಮೂರ್ಖನಾಗಿ ಏನನ್ನೂ ಮಾತನಾಡಿಲ್ಲ. ಸಂತರ ನಾಡು ಇದು. ಸಂತರಿಲ್ಲದಿದ್ದರೆ ಈ ನಾಡನ್ನು ಕಟ್ಟಲು ಆಗುತ್ತಿಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಕೇವಲ ಸಂತರಲ್ಲ, ಎಂಟೆಕ್‌ ಓದಿಕೊಂಡವರು.”

“ಕೊಡವರಿಗೆ ಮಠಾಧೀಶರಿಲ್ಲ. ನನಗೆ ಯಾರು ಸ್ವಾಮೀಜಿ? ನಿರ್ಮಲಾನಂದ ಸ್ವಾಮೀಜಿಯವರೇ ನನಗೂ ಸ್ವಾಮೀಜಿ. ಕೊಡಗಿನಲ್ಲಿ ಅರೆಭಾಷೆ ಗೌಡರಿದ್ದಾರೆ. ಕೊಡವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದ ಅರೆಭಾಷೆ ಗೌಡ ಸಮುದಾಯಕ್ಕೂ ನಿರ್ಮಲಾನಂದರೇ ಸ್ವಾಮೀಜಿ. ಈ ಸ್ವಾಮೀಜಿಯವರ ಬಗ್ಗೆ ಕೆಟ್ಟ ಮಾತನಾಡಲು ಸಿದ್ಧನಿಲ್ಲ, ನಾನು ಆ ಕೆಲಸ ಮಾಡುವುದಿಲ್ಲ.”

“ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಇರಬೇಕೆಂದು ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿರುವುದಾಗಿ ಪತ್ರಿಕೆಯಲ್ಲಿ ಬಂದಿದೆ ಎಂದು ಹೇಳಿದ್ದೇನಷ್ಟೇ. ಅದು ಸುಳ್ಳಾದರೆ ಸುಳ್ಳು. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.”

“ಸ್ವಾಮೀಜಿಯವರಿಗೆ ಬುದ್ಧಿವಾದ ಹೇಳುವಷ್ಟು ನಾನು ಗ್ರೇಟ್ ಅಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಇವರಂತೆಯೇ ಅನೇಕ ಸ್ವಾಮೀಜಿಗಳು ಈ ನಾಡಿನಲ್ಲಿ ಇದ್ದಾರೆ. ಎಲ್ಲರೂ ಸಂತರೇ. ಇವರನ್ನು ಆರ್‌ಎಸ್‌ಎಸ್‌ ಗೌರವಿಸುತ್ತದೆ, ಸಮಾಜವಾದಿಗಳು ಗೌರವಿಸುತ್ತಾರೆ.”

“ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಅವಹೇಳನ ಮಾಡಿದ್ದೇನೆ ಎಂಬುದು ಸುಳ್ಳು, ರಾಜಕೀಯವಾಗಿ ಮಾತನಾಡಿದ್ದೇನೆ. ರಂಗಾಯಣ ನಿರ್ದೇಶಕರಾಗಿರುವ ನೀನು ರಾಜಕೀಯ ಮಾತನಾಡಬಹುದೇ ಎಂದು ಕೇಳುತ್ತಾರೆ. ರಾಜಕೀಯವೆಂದರೆ ಪವಿತ್ರ ಕ್ಷೇತ್ರ. ಪ್ರಧಾನಿ, ರಾಷ್ಟ್ರಪತಿಯವರೆಲ್ಲ ರಾಜಕೀಯದಿಂದ ಬಂದವರು. ರಾಜಕೀಯ ಮಾತನಾಡಬಾರದು ಎಂಬುದು ಅವೈಜ್ಞಾನಿಕ ಅರೆಜ್ಞಾನ. ರಾಜಕೀಯ ಮಾತನಾಡಿದರೆ ತಪ್ಪೇನು?”

“ಯಾವುದೋ ಒಂದು ಪಕ್ಷದ ಕುರಿತು ಹೇಳಿಲ್ಲ. ಒಟ್ಟು ರಾಜಕೀಯದ ಚರ್ಚೆಯನ್ನು ಮಾಡಿದ್ದೇವೆ. ನಾನು ಈಗ ನೇರವಾಗಿ ಆದಿಚುಂಚನಗಿರಿ ಮಠಕ್ಕೆ ಹೋಗುತ್ತೇನೆ. ಅವರೇನು ನನ್ನನ್ನು ಅಲ್ಲಿಂದ ಓಡಿಸುವುದಿಲ್ಲ. ಯಾಕೆಂದರೆ ಅವರು ಅತ್ಯಂತ ಶಾಂತ ಸ್ವಭಾವದವರು. ಅವರು ಕೋಪ ಮಾಡಿಕೊಂಡಿದ್ದನ್ನು ಎಂದೂ ಕಂಡಿಲ್ಲ.”

“ನಮ್ಮ ನಾಡಿನಲ್ಲಿ ಎಲ್ಲಾ ಜನಾಂಗಗಳಿಗೂ ಸ್ವಾಮೀಜಿಗಳು ಇದ್ದಾರಲ್ಲವಾ? ಅದು ಸುಳ್ಳಾ? ವೀರಶೈವರಿಗೆ ಒಬ್ಬರು ಸ್ವಾಮೀಜಿ, ದಲಿತರಿಗೊಬ್ಬರು ಸ್ವಾಮೀಜಿ ಇದ್ದಾರೆ. ಮುನ್ನೂರು ಜನ ಸ್ವಾಮೀಜಿಗಳು ನನ್ನ ‘ಟಿಪ್ಪು ನಿಜಕನಸುಗಳು’ ನಾಟಕ ನೋಡಲು ಕಲ್ಬುರ್ಗಿಯಲ್ಲಿ ಬಂದಿದ್ದರು. ನಾನು ಸಂತರಿಗೆ ಗೌರವ ಕೊಡುವ ಸಂಸ್ಕಾರದವನು. ನಾನು ಕಮ್ಯುನಿಸ್ಟ್ ಅಲ್ಲ.ಈ ಚುನಾವಣೆ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಯವರ ಹೆಸರನ್ನು ಯಾರಾದರೂ ಬಳಸಿಕೊಂಡರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಂತರು ಕ್ಷಮಿಸಬಲ್ಲರಲ್ಲವಾ? ಕ್ಷಮಿಸಿ.”

“ಒಕ್ಕಲಿಗರು ಬಂದು ಮುತ್ತಿಗೆ ಹಾಕಿದ್ದಾರೆ ಎನ್ನುತ್ತೀರಿ. ಯಾವ ಒಕ್ಕಲಿಗರು ಎಂದು ನೋಡಬೇಕಲ್ಲವಾ? ಜೆಡಿಎಸ್‌‌ ಒಕ್ಕಲಿಗರಾ? ಕಾಂಗ್ರೆಸ್ ಒಕ್ಕಲಿಗರಾ? ಬಿಜೆಪಿ ಒಕ್ಕಲಿಗರ?- ಇದು ರಾಜಕೀಯ. ಸ್ವಾಮೀಜಿಯವರಲ್ಲಿ ವಿನಂತಿ ಮಾಡುತ್ತೇನೆ. ನಾನು ನಿಮ್ಮಷ್ಟು ದೊಡ್ಡ ವ್ಯಕ್ತಿಯಾಗಲಾರೆ. ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರು ಬೆಳೆಯಬೇಕೆಂದು ಹೇಳುತ್ತಿಲ್ಲ, ಒಟ್ಟಾರೆ ಸ್ವಾಮೀಜಿಗಳ ಕುರಿತು ಹೇಳುತ್ತಿದ್ದೇನೆ.”

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

“ನಾನು ಮಾತನಾಡಿದ್ದು ತಪ್ಪು ಎಂಬುದಾದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ವಿಷಾದ ಬೇರೆಯಲ್ಲ, ಕ್ಷಮೆ ಬೇರೆಯಲ್ಲ. ಸ್ವಾಮೀಜಿಗಿಂತ ದೊಡ್ಡವನು ನಾನಲ್ಲ. ನಾನು ಸ್ವಾಮೀಜಿಗೆ ಅವಮಾನ ಮಾಡಿಲ್ಲ. ಮಾಡುವುದೂ ಇಲ್ಲ. ನನ್ನ ಹೇಳಿಕೆಯಿಂದ ಅವರ ಭಕ್ತಕೋಟಿಯಲ್ಲಿ ಮುಜುಗರವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರಲ್ಲಿ ನಾನು ಕ್ಷಮೆ ಕೋರುತ್ತೇನೆ ಹೊರತು, ಇಲ್ಲಿ ಬಂದು ರಾಜಕೀಯಕ್ಕಾಗಿ ಗಲಾಟೆ ಮಾಡುವವರಲ್ಲಿ ಅಲ್ಲ. ಒಂದು ಪಕ್ಷದ ಹಿಂಬಾಲಕರಲ್ಲಿ ಕ್ಷಮೆ ಕೇಳಲ್ಲ.”

“ನಿರ್ಮಲಾನಂದ ಸ್ವಾಮೀಜಿಯವರ ಬಗ್ಗೆ ನಾನು ಅಪಮಾನಕರವಾಗಿ ಮಾತನಾಡಿಲ್ಲ. ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಬಂದರೆ ಅದಕ್ಕೆ ನಾನು ಹೊಣೆಯಲ್ಲ. ನಾನು ಮಾತನಾಡಿದ್ದು ನನ್ನ ಬಳಿ ರೆಕಾರ್ಡ್‌‌ನಲ್ಲಿ ಇದೆ. ನಾನು ಎಲ್ಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಲ್ಲ, ಮಾಧ್ಯಮ ಗೋಷ್ಠಿ ನಡೆಸಿ ಹೇಳಿದ್ದಲ್ಲ. ಯಾವುದೋ ಒಂದು ಮಿಡಿಯದವರು ತಮಗೆ ಬೇಕಾದಂತೆ ಬಳಸಿಕೊಂಡು ಟಿಆರ್‌ಪಿ ಹೆಚ್ಚಿಸಿಕೊಂಡಿದ್ದರೆ, ಅವರಿಗೆ ಲಾಭವಾಗಿದ್ದರೆ ಧನ್ಯವಾದ. ಆ ಟಿ.ವಿ. ಚಾನೆಲ್‌ ಕೂಡ ಲಾಸ್ ಆಗಬಾರದು.”

-ಈ ಮೇಲಿನ ಮಾತುಗಳನ್ನು ಅಡ್ಡಂಡ ಕಾರ್ಯಪ್ಪ ಅವರು ಖಾಸಗಿ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....