Homeಕರ್ನಾಟಕ‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

“ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಂಗಾಯಣ ನಿರ್ದೇಶಕರು ಆಶಿಸಿದ್ದಾರೆ

- Advertisement -
- Advertisement -

“ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ನಾನು ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ” ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸ್ಪಷ್ಟಪಡಿಸಿದ್ದಾರೆ.

ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ. ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದು ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಅಡ್ಡಂಡ ಅವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ಕ್ಷಮೆ ಕೋರಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅವರ ಕ್ಷಮೆಯಾಚನೆ ಹೀಗಿದೆ:

“ನಿರ್ಮಲಾನಂದ ಸ್ವಾಮೀಜಿಯವರನ್ನು ಅವಮಾನಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನಾನು ಮೂರ್ಖನಾಗಿ ಏನನ್ನೂ ಮಾತನಾಡಿಲ್ಲ. ಸಂತರ ನಾಡು ಇದು. ಸಂತರಿಲ್ಲದಿದ್ದರೆ ಈ ನಾಡನ್ನು ಕಟ್ಟಲು ಆಗುತ್ತಿಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಕೇವಲ ಸಂತರಲ್ಲ, ಎಂಟೆಕ್‌ ಓದಿಕೊಂಡವರು.”

“ಕೊಡವರಿಗೆ ಮಠಾಧೀಶರಿಲ್ಲ. ನನಗೆ ಯಾರು ಸ್ವಾಮೀಜಿ? ನಿರ್ಮಲಾನಂದ ಸ್ವಾಮೀಜಿಯವರೇ ನನಗೂ ಸ್ವಾಮೀಜಿ. ಕೊಡಗಿನಲ್ಲಿ ಅರೆಭಾಷೆ ಗೌಡರಿದ್ದಾರೆ. ಕೊಡವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದ ಅರೆಭಾಷೆ ಗೌಡ ಸಮುದಾಯಕ್ಕೂ ನಿರ್ಮಲಾನಂದರೇ ಸ್ವಾಮೀಜಿ. ಈ ಸ್ವಾಮೀಜಿಯವರ ಬಗ್ಗೆ ಕೆಟ್ಟ ಮಾತನಾಡಲು ಸಿದ್ಧನಿಲ್ಲ, ನಾನು ಆ ಕೆಲಸ ಮಾಡುವುದಿಲ್ಲ.”

“ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಇರಬೇಕೆಂದು ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿರುವುದಾಗಿ ಪತ್ರಿಕೆಯಲ್ಲಿ ಬಂದಿದೆ ಎಂದು ಹೇಳಿದ್ದೇನಷ್ಟೇ. ಅದು ಸುಳ್ಳಾದರೆ ಸುಳ್ಳು. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.”

“ಸ್ವಾಮೀಜಿಯವರಿಗೆ ಬುದ್ಧಿವಾದ ಹೇಳುವಷ್ಟು ನಾನು ಗ್ರೇಟ್ ಅಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಇವರಂತೆಯೇ ಅನೇಕ ಸ್ವಾಮೀಜಿಗಳು ಈ ನಾಡಿನಲ್ಲಿ ಇದ್ದಾರೆ. ಎಲ್ಲರೂ ಸಂತರೇ. ಇವರನ್ನು ಆರ್‌ಎಸ್‌ಎಸ್‌ ಗೌರವಿಸುತ್ತದೆ, ಸಮಾಜವಾದಿಗಳು ಗೌರವಿಸುತ್ತಾರೆ.”

“ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಅವಹೇಳನ ಮಾಡಿದ್ದೇನೆ ಎಂಬುದು ಸುಳ್ಳು, ರಾಜಕೀಯವಾಗಿ ಮಾತನಾಡಿದ್ದೇನೆ. ರಂಗಾಯಣ ನಿರ್ದೇಶಕರಾಗಿರುವ ನೀನು ರಾಜಕೀಯ ಮಾತನಾಡಬಹುದೇ ಎಂದು ಕೇಳುತ್ತಾರೆ. ರಾಜಕೀಯವೆಂದರೆ ಪವಿತ್ರ ಕ್ಷೇತ್ರ. ಪ್ರಧಾನಿ, ರಾಷ್ಟ್ರಪತಿಯವರೆಲ್ಲ ರಾಜಕೀಯದಿಂದ ಬಂದವರು. ರಾಜಕೀಯ ಮಾತನಾಡಬಾರದು ಎಂಬುದು ಅವೈಜ್ಞಾನಿಕ ಅರೆಜ್ಞಾನ. ರಾಜಕೀಯ ಮಾತನಾಡಿದರೆ ತಪ್ಪೇನು?”

“ಯಾವುದೋ ಒಂದು ಪಕ್ಷದ ಕುರಿತು ಹೇಳಿಲ್ಲ. ಒಟ್ಟು ರಾಜಕೀಯದ ಚರ್ಚೆಯನ್ನು ಮಾಡಿದ್ದೇವೆ. ನಾನು ಈಗ ನೇರವಾಗಿ ಆದಿಚುಂಚನಗಿರಿ ಮಠಕ್ಕೆ ಹೋಗುತ್ತೇನೆ. ಅವರೇನು ನನ್ನನ್ನು ಅಲ್ಲಿಂದ ಓಡಿಸುವುದಿಲ್ಲ. ಯಾಕೆಂದರೆ ಅವರು ಅತ್ಯಂತ ಶಾಂತ ಸ್ವಭಾವದವರು. ಅವರು ಕೋಪ ಮಾಡಿಕೊಂಡಿದ್ದನ್ನು ಎಂದೂ ಕಂಡಿಲ್ಲ.”

“ನಮ್ಮ ನಾಡಿನಲ್ಲಿ ಎಲ್ಲಾ ಜನಾಂಗಗಳಿಗೂ ಸ್ವಾಮೀಜಿಗಳು ಇದ್ದಾರಲ್ಲವಾ? ಅದು ಸುಳ್ಳಾ? ವೀರಶೈವರಿಗೆ ಒಬ್ಬರು ಸ್ವಾಮೀಜಿ, ದಲಿತರಿಗೊಬ್ಬರು ಸ್ವಾಮೀಜಿ ಇದ್ದಾರೆ. ಮುನ್ನೂರು ಜನ ಸ್ವಾಮೀಜಿಗಳು ನನ್ನ ‘ಟಿಪ್ಪು ನಿಜಕನಸುಗಳು’ ನಾಟಕ ನೋಡಲು ಕಲ್ಬುರ್ಗಿಯಲ್ಲಿ ಬಂದಿದ್ದರು. ನಾನು ಸಂತರಿಗೆ ಗೌರವ ಕೊಡುವ ಸಂಸ್ಕಾರದವನು. ನಾನು ಕಮ್ಯುನಿಸ್ಟ್ ಅಲ್ಲ.ಈ ಚುನಾವಣೆ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಯವರ ಹೆಸರನ್ನು ಯಾರಾದರೂ ಬಳಸಿಕೊಂಡರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಂತರು ಕ್ಷಮಿಸಬಲ್ಲರಲ್ಲವಾ? ಕ್ಷಮಿಸಿ.”

“ಒಕ್ಕಲಿಗರು ಬಂದು ಮುತ್ತಿಗೆ ಹಾಕಿದ್ದಾರೆ ಎನ್ನುತ್ತೀರಿ. ಯಾವ ಒಕ್ಕಲಿಗರು ಎಂದು ನೋಡಬೇಕಲ್ಲವಾ? ಜೆಡಿಎಸ್‌‌ ಒಕ್ಕಲಿಗರಾ? ಕಾಂಗ್ರೆಸ್ ಒಕ್ಕಲಿಗರಾ? ಬಿಜೆಪಿ ಒಕ್ಕಲಿಗರ?- ಇದು ರಾಜಕೀಯ. ಸ್ವಾಮೀಜಿಯವರಲ್ಲಿ ವಿನಂತಿ ಮಾಡುತ್ತೇನೆ. ನಾನು ನಿಮ್ಮಷ್ಟು ದೊಡ್ಡ ವ್ಯಕ್ತಿಯಾಗಲಾರೆ. ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರು ಬೆಳೆಯಬೇಕೆಂದು ಹೇಳುತ್ತಿಲ್ಲ, ಒಟ್ಟಾರೆ ಸ್ವಾಮೀಜಿಗಳ ಕುರಿತು ಹೇಳುತ್ತಿದ್ದೇನೆ.”

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

“ನಾನು ಮಾತನಾಡಿದ್ದು ತಪ್ಪು ಎಂಬುದಾದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ವಿಷಾದ ಬೇರೆಯಲ್ಲ, ಕ್ಷಮೆ ಬೇರೆಯಲ್ಲ. ಸ್ವಾಮೀಜಿಗಿಂತ ದೊಡ್ಡವನು ನಾನಲ್ಲ. ನಾನು ಸ್ವಾಮೀಜಿಗೆ ಅವಮಾನ ಮಾಡಿಲ್ಲ. ಮಾಡುವುದೂ ಇಲ್ಲ. ನನ್ನ ಹೇಳಿಕೆಯಿಂದ ಅವರ ಭಕ್ತಕೋಟಿಯಲ್ಲಿ ಮುಜುಗರವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರಲ್ಲಿ ನಾನು ಕ್ಷಮೆ ಕೋರುತ್ತೇನೆ ಹೊರತು, ಇಲ್ಲಿ ಬಂದು ರಾಜಕೀಯಕ್ಕಾಗಿ ಗಲಾಟೆ ಮಾಡುವವರಲ್ಲಿ ಅಲ್ಲ. ಒಂದು ಪಕ್ಷದ ಹಿಂಬಾಲಕರಲ್ಲಿ ಕ್ಷಮೆ ಕೇಳಲ್ಲ.”

“ನಿರ್ಮಲಾನಂದ ಸ್ವಾಮೀಜಿಯವರ ಬಗ್ಗೆ ನಾನು ಅಪಮಾನಕರವಾಗಿ ಮಾತನಾಡಿಲ್ಲ. ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಬಂದರೆ ಅದಕ್ಕೆ ನಾನು ಹೊಣೆಯಲ್ಲ. ನಾನು ಮಾತನಾಡಿದ್ದು ನನ್ನ ಬಳಿ ರೆಕಾರ್ಡ್‌‌ನಲ್ಲಿ ಇದೆ. ನಾನು ಎಲ್ಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಲ್ಲ, ಮಾಧ್ಯಮ ಗೋಷ್ಠಿ ನಡೆಸಿ ಹೇಳಿದ್ದಲ್ಲ. ಯಾವುದೋ ಒಂದು ಮಿಡಿಯದವರು ತಮಗೆ ಬೇಕಾದಂತೆ ಬಳಸಿಕೊಂಡು ಟಿಆರ್‌ಪಿ ಹೆಚ್ಚಿಸಿಕೊಂಡಿದ್ದರೆ, ಅವರಿಗೆ ಲಾಭವಾಗಿದ್ದರೆ ಧನ್ಯವಾದ. ಆ ಟಿ.ವಿ. ಚಾನೆಲ್‌ ಕೂಡ ಲಾಸ್ ಆಗಬಾರದು.”

-ಈ ಮೇಲಿನ ಮಾತುಗಳನ್ನು ಅಡ್ಡಂಡ ಕಾರ್ಯಪ್ಪ ಅವರು ಖಾಸಗಿ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...