Homeಕರ್ನಾಟಕ‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

“ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಂಗಾಯಣ ನಿರ್ದೇಶಕರು ಆಶಿಸಿದ್ದಾರೆ

- Advertisement -
- Advertisement -

“ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ನಾನು ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ” ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸ್ಪಷ್ಟಪಡಿಸಿದ್ದಾರೆ.

ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ. ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದು ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಅಡ್ಡಂಡ ಅವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ಕ್ಷಮೆ ಕೋರಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅವರ ಕ್ಷಮೆಯಾಚನೆ ಹೀಗಿದೆ:

“ನಿರ್ಮಲಾನಂದ ಸ್ವಾಮೀಜಿಯವರನ್ನು ಅವಮಾನಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನಾನು ಮೂರ್ಖನಾಗಿ ಏನನ್ನೂ ಮಾತನಾಡಿಲ್ಲ. ಸಂತರ ನಾಡು ಇದು. ಸಂತರಿಲ್ಲದಿದ್ದರೆ ಈ ನಾಡನ್ನು ಕಟ್ಟಲು ಆಗುತ್ತಿಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಕೇವಲ ಸಂತರಲ್ಲ, ಎಂಟೆಕ್‌ ಓದಿಕೊಂಡವರು.”

“ಕೊಡವರಿಗೆ ಮಠಾಧೀಶರಿಲ್ಲ. ನನಗೆ ಯಾರು ಸ್ವಾಮೀಜಿ? ನಿರ್ಮಲಾನಂದ ಸ್ವಾಮೀಜಿಯವರೇ ನನಗೂ ಸ್ವಾಮೀಜಿ. ಕೊಡಗಿನಲ್ಲಿ ಅರೆಭಾಷೆ ಗೌಡರಿದ್ದಾರೆ. ಕೊಡವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದ ಅರೆಭಾಷೆ ಗೌಡ ಸಮುದಾಯಕ್ಕೂ ನಿರ್ಮಲಾನಂದರೇ ಸ್ವಾಮೀಜಿ. ಈ ಸ್ವಾಮೀಜಿಯವರ ಬಗ್ಗೆ ಕೆಟ್ಟ ಮಾತನಾಡಲು ಸಿದ್ಧನಿಲ್ಲ, ನಾನು ಆ ಕೆಲಸ ಮಾಡುವುದಿಲ್ಲ.”

“ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಇರಬೇಕೆಂದು ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿರುವುದಾಗಿ ಪತ್ರಿಕೆಯಲ್ಲಿ ಬಂದಿದೆ ಎಂದು ಹೇಳಿದ್ದೇನಷ್ಟೇ. ಅದು ಸುಳ್ಳಾದರೆ ಸುಳ್ಳು. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.”

“ಸ್ವಾಮೀಜಿಯವರಿಗೆ ಬುದ್ಧಿವಾದ ಹೇಳುವಷ್ಟು ನಾನು ಗ್ರೇಟ್ ಅಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಇವರಂತೆಯೇ ಅನೇಕ ಸ್ವಾಮೀಜಿಗಳು ಈ ನಾಡಿನಲ್ಲಿ ಇದ್ದಾರೆ. ಎಲ್ಲರೂ ಸಂತರೇ. ಇವರನ್ನು ಆರ್‌ಎಸ್‌ಎಸ್‌ ಗೌರವಿಸುತ್ತದೆ, ಸಮಾಜವಾದಿಗಳು ಗೌರವಿಸುತ್ತಾರೆ.”

“ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಅವಹೇಳನ ಮಾಡಿದ್ದೇನೆ ಎಂಬುದು ಸುಳ್ಳು, ರಾಜಕೀಯವಾಗಿ ಮಾತನಾಡಿದ್ದೇನೆ. ರಂಗಾಯಣ ನಿರ್ದೇಶಕರಾಗಿರುವ ನೀನು ರಾಜಕೀಯ ಮಾತನಾಡಬಹುದೇ ಎಂದು ಕೇಳುತ್ತಾರೆ. ರಾಜಕೀಯವೆಂದರೆ ಪವಿತ್ರ ಕ್ಷೇತ್ರ. ಪ್ರಧಾನಿ, ರಾಷ್ಟ್ರಪತಿಯವರೆಲ್ಲ ರಾಜಕೀಯದಿಂದ ಬಂದವರು. ರಾಜಕೀಯ ಮಾತನಾಡಬಾರದು ಎಂಬುದು ಅವೈಜ್ಞಾನಿಕ ಅರೆಜ್ಞಾನ. ರಾಜಕೀಯ ಮಾತನಾಡಿದರೆ ತಪ್ಪೇನು?”

“ಯಾವುದೋ ಒಂದು ಪಕ್ಷದ ಕುರಿತು ಹೇಳಿಲ್ಲ. ಒಟ್ಟು ರಾಜಕೀಯದ ಚರ್ಚೆಯನ್ನು ಮಾಡಿದ್ದೇವೆ. ನಾನು ಈಗ ನೇರವಾಗಿ ಆದಿಚುಂಚನಗಿರಿ ಮಠಕ್ಕೆ ಹೋಗುತ್ತೇನೆ. ಅವರೇನು ನನ್ನನ್ನು ಅಲ್ಲಿಂದ ಓಡಿಸುವುದಿಲ್ಲ. ಯಾಕೆಂದರೆ ಅವರು ಅತ್ಯಂತ ಶಾಂತ ಸ್ವಭಾವದವರು. ಅವರು ಕೋಪ ಮಾಡಿಕೊಂಡಿದ್ದನ್ನು ಎಂದೂ ಕಂಡಿಲ್ಲ.”

“ನಮ್ಮ ನಾಡಿನಲ್ಲಿ ಎಲ್ಲಾ ಜನಾಂಗಗಳಿಗೂ ಸ್ವಾಮೀಜಿಗಳು ಇದ್ದಾರಲ್ಲವಾ? ಅದು ಸುಳ್ಳಾ? ವೀರಶೈವರಿಗೆ ಒಬ್ಬರು ಸ್ವಾಮೀಜಿ, ದಲಿತರಿಗೊಬ್ಬರು ಸ್ವಾಮೀಜಿ ಇದ್ದಾರೆ. ಮುನ್ನೂರು ಜನ ಸ್ವಾಮೀಜಿಗಳು ನನ್ನ ‘ಟಿಪ್ಪು ನಿಜಕನಸುಗಳು’ ನಾಟಕ ನೋಡಲು ಕಲ್ಬುರ್ಗಿಯಲ್ಲಿ ಬಂದಿದ್ದರು. ನಾನು ಸಂತರಿಗೆ ಗೌರವ ಕೊಡುವ ಸಂಸ್ಕಾರದವನು. ನಾನು ಕಮ್ಯುನಿಸ್ಟ್ ಅಲ್ಲ.ಈ ಚುನಾವಣೆ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಯವರ ಹೆಸರನ್ನು ಯಾರಾದರೂ ಬಳಸಿಕೊಂಡರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಂತರು ಕ್ಷಮಿಸಬಲ್ಲರಲ್ಲವಾ? ಕ್ಷಮಿಸಿ.”

“ಒಕ್ಕಲಿಗರು ಬಂದು ಮುತ್ತಿಗೆ ಹಾಕಿದ್ದಾರೆ ಎನ್ನುತ್ತೀರಿ. ಯಾವ ಒಕ್ಕಲಿಗರು ಎಂದು ನೋಡಬೇಕಲ್ಲವಾ? ಜೆಡಿಎಸ್‌‌ ಒಕ್ಕಲಿಗರಾ? ಕಾಂಗ್ರೆಸ್ ಒಕ್ಕಲಿಗರಾ? ಬಿಜೆಪಿ ಒಕ್ಕಲಿಗರ?- ಇದು ರಾಜಕೀಯ. ಸ್ವಾಮೀಜಿಯವರಲ್ಲಿ ವಿನಂತಿ ಮಾಡುತ್ತೇನೆ. ನಾನು ನಿಮ್ಮಷ್ಟು ದೊಡ್ಡ ವ್ಯಕ್ತಿಯಾಗಲಾರೆ. ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರು ಬೆಳೆಯಬೇಕೆಂದು ಹೇಳುತ್ತಿಲ್ಲ, ಒಟ್ಟಾರೆ ಸ್ವಾಮೀಜಿಗಳ ಕುರಿತು ಹೇಳುತ್ತಿದ್ದೇನೆ.”

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

“ನಾನು ಮಾತನಾಡಿದ್ದು ತಪ್ಪು ಎಂಬುದಾದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ವಿಷಾದ ಬೇರೆಯಲ್ಲ, ಕ್ಷಮೆ ಬೇರೆಯಲ್ಲ. ಸ್ವಾಮೀಜಿಗಿಂತ ದೊಡ್ಡವನು ನಾನಲ್ಲ. ನಾನು ಸ್ವಾಮೀಜಿಗೆ ಅವಮಾನ ಮಾಡಿಲ್ಲ. ಮಾಡುವುದೂ ಇಲ್ಲ. ನನ್ನ ಹೇಳಿಕೆಯಿಂದ ಅವರ ಭಕ್ತಕೋಟಿಯಲ್ಲಿ ಮುಜುಗರವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರಲ್ಲಿ ನಾನು ಕ್ಷಮೆ ಕೋರುತ್ತೇನೆ ಹೊರತು, ಇಲ್ಲಿ ಬಂದು ರಾಜಕೀಯಕ್ಕಾಗಿ ಗಲಾಟೆ ಮಾಡುವವರಲ್ಲಿ ಅಲ್ಲ. ಒಂದು ಪಕ್ಷದ ಹಿಂಬಾಲಕರಲ್ಲಿ ಕ್ಷಮೆ ಕೇಳಲ್ಲ.”

“ನಿರ್ಮಲಾನಂದ ಸ್ವಾಮೀಜಿಯವರ ಬಗ್ಗೆ ನಾನು ಅಪಮಾನಕರವಾಗಿ ಮಾತನಾಡಿಲ್ಲ. ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಬಂದರೆ ಅದಕ್ಕೆ ನಾನು ಹೊಣೆಯಲ್ಲ. ನಾನು ಮಾತನಾಡಿದ್ದು ನನ್ನ ಬಳಿ ರೆಕಾರ್ಡ್‌‌ನಲ್ಲಿ ಇದೆ. ನಾನು ಎಲ್ಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಲ್ಲ, ಮಾಧ್ಯಮ ಗೋಷ್ಠಿ ನಡೆಸಿ ಹೇಳಿದ್ದಲ್ಲ. ಯಾವುದೋ ಒಂದು ಮಿಡಿಯದವರು ತಮಗೆ ಬೇಕಾದಂತೆ ಬಳಸಿಕೊಂಡು ಟಿಆರ್‌ಪಿ ಹೆಚ್ಚಿಸಿಕೊಂಡಿದ್ದರೆ, ಅವರಿಗೆ ಲಾಭವಾಗಿದ್ದರೆ ಧನ್ಯವಾದ. ಆ ಟಿ.ವಿ. ಚಾನೆಲ್‌ ಕೂಡ ಲಾಸ್ ಆಗಬಾರದು.”

-ಈ ಮೇಲಿನ ಮಾತುಗಳನ್ನು ಅಡ್ಡಂಡ ಕಾರ್ಯಪ್ಪ ಅವರು ಖಾಸಗಿ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...