Homeಕರ್ನಾಟಕ‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

‘ಸ್ವಾಮೀಜಿಗೆ ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ’: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

“ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ” ಎಂದು ರಂಗಾಯಣ ನಿರ್ದೇಶಕರು ಆಶಿಸಿದ್ದಾರೆ

- Advertisement -
- Advertisement -

“ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ನಾನು ಅವಹೇಳನ ಮಾಡಿಲ್ಲ, ರಾಜಕೀಯವಾಗಿ ಮಾತನಾಡಿದ್ದೇನಷ್ಟೇ” ಎಂದು ಮೈಸೂರು ರಂಗಾಯಣದ ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಸ್ಪಷ್ಟಪಡಿಸಿದ್ದಾರೆ.

ನಿರ್ಮಲಾನಂದನಾಥರು ಒಕ್ಕಲಿಗ ಸಮುದಾಯಕ್ಕೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಳಿಗೆ ಅಲ್ಲ, ಒಕ್ಕಲಿಗ ಸಮುದಾಯದ ರಕ್ಷಣೆ ಮಾಡುವುದು ಅವರ ಕೆಲಸ. ಹಾಗಂತ ಉರಿಗೌಡ, ನಂಜೇಗೌಡರ ಕುರಿತು ಚರ್ಚೆ ನಡೆಯಲೇಬಾರದು ಎಂದು ಹೇಳಿದ್ದು ಸರಿಯಲ್ಲ” ಎಂದು ಹೇಳಿಕೆ ನೀಡಿ ಇಕ್ಕಟ್ಟಿಗೆ ಸಿಲುಕಿರುವ ಅಡ್ಡಂಡ ಅವರು ಖಾಸಗಿ ಮಾಧ್ಯಮವೊಂದಕ್ಕೆ ಸ್ಪಷ್ಟನೆಯನ್ನು ನೀಡಿದ್ದಾರೆ. ಜೊತೆಗೆ ಕ್ಷಮೆ ಕೋರಿದ್ದಾರೆ.

ಅಡ್ಡಂಡ ಕಾರ್ಯಪ್ಪ ಅವರ ಕ್ಷಮೆಯಾಚನೆ ಹೀಗಿದೆ:

“ನಿರ್ಮಲಾನಂದ ಸ್ವಾಮೀಜಿಯವರನ್ನು ಅವಮಾನಿಸಿದ್ದೇನೆ ಎಂಬುದು ಶುದ್ಧ ಸುಳ್ಳು. ನಾನು ಮೂರ್ಖನಾಗಿ ಏನನ್ನೂ ಮಾತನಾಡಿಲ್ಲ. ಸಂತರ ನಾಡು ಇದು. ಸಂತರಿಲ್ಲದಿದ್ದರೆ ಈ ನಾಡನ್ನು ಕಟ್ಟಲು ಆಗುತ್ತಿಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರ ಮೇಲೆ ನನಗೆ ಅಪಾರವಾದ ಗೌರವವಿದೆ. ಅವರು ಕೇವಲ ಸಂತರಲ್ಲ, ಎಂಟೆಕ್‌ ಓದಿಕೊಂಡವರು.”

“ಕೊಡವರಿಗೆ ಮಠಾಧೀಶರಿಲ್ಲ. ನನಗೆ ಯಾರು ಸ್ವಾಮೀಜಿ? ನಿರ್ಮಲಾನಂದ ಸ್ವಾಮೀಜಿಯವರೇ ನನಗೂ ಸ್ವಾಮೀಜಿ. ಕೊಡಗಿನಲ್ಲಿ ಅರೆಭಾಷೆ ಗೌಡರಿದ್ದಾರೆ. ಕೊಡವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದ ಅರೆಭಾಷೆ ಗೌಡ ಸಮುದಾಯಕ್ಕೂ ನಿರ್ಮಲಾನಂದರೇ ಸ್ವಾಮೀಜಿ. ಈ ಸ್ವಾಮೀಜಿಯವರ ಬಗ್ಗೆ ಕೆಟ್ಟ ಮಾತನಾಡಲು ಸಿದ್ಧನಿಲ್ಲ, ನಾನು ಆ ಕೆಲಸ ಮಾಡುವುದಿಲ್ಲ.”

“ಒಕ್ಕಲಿಗ ಸಮುದಾಯದ ಮುಖ್ಯಮಂತ್ರಿ ಇರಬೇಕೆಂದು ಕುಮಾರಸ್ವಾಮಿಯವರನ್ನು ಬೆಂಬಲಿಸುವಂತೆ ಡಿ.ಕೆ.ಶಿವಕುಮಾರ್‌ ಅವರಿಗೆ ಹೇಳಿರುವುದಾಗಿ ಪತ್ರಿಕೆಯಲ್ಲಿ ಬಂದಿದೆ ಎಂದು ಹೇಳಿದ್ದೇನಷ್ಟೇ. ಅದು ಸುಳ್ಳಾದರೆ ಸುಳ್ಳು. ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ.”

“ಸ್ವಾಮೀಜಿಯವರಿಗೆ ಬುದ್ಧಿವಾದ ಹೇಳುವಷ್ಟು ನಾನು ಗ್ರೇಟ್ ಅಲ್ಲ. ನಿರ್ಮಲಾನಂದನಾಥ ಸ್ವಾಮೀಜಿಯವರು ಈ ನಾಡಿನ ಸಂತ. ಇವರಂತೆಯೇ ಅನೇಕ ಸ್ವಾಮೀಜಿಗಳು ಈ ನಾಡಿನಲ್ಲಿ ಇದ್ದಾರೆ. ಎಲ್ಲರೂ ಸಂತರೇ. ಇವರನ್ನು ಆರ್‌ಎಸ್‌ಎಸ್‌ ಗೌರವಿಸುತ್ತದೆ, ಸಮಾಜವಾದಿಗಳು ಗೌರವಿಸುತ್ತಾರೆ.”

“ನಿರ್ಮಲಾನಂದನಾಥ ಸ್ವಾಮೀಜಿಯವರಿಗೆ ಅವಹೇಳನ ಮಾಡಿದ್ದೇನೆ ಎಂಬುದು ಸುಳ್ಳು, ರಾಜಕೀಯವಾಗಿ ಮಾತನಾಡಿದ್ದೇನೆ. ರಂಗಾಯಣ ನಿರ್ದೇಶಕರಾಗಿರುವ ನೀನು ರಾಜಕೀಯ ಮಾತನಾಡಬಹುದೇ ಎಂದು ಕೇಳುತ್ತಾರೆ. ರಾಜಕೀಯವೆಂದರೆ ಪವಿತ್ರ ಕ್ಷೇತ್ರ. ಪ್ರಧಾನಿ, ರಾಷ್ಟ್ರಪತಿಯವರೆಲ್ಲ ರಾಜಕೀಯದಿಂದ ಬಂದವರು. ರಾಜಕೀಯ ಮಾತನಾಡಬಾರದು ಎಂಬುದು ಅವೈಜ್ಞಾನಿಕ ಅರೆಜ್ಞಾನ. ರಾಜಕೀಯ ಮಾತನಾಡಿದರೆ ತಪ್ಪೇನು?”

“ಯಾವುದೋ ಒಂದು ಪಕ್ಷದ ಕುರಿತು ಹೇಳಿಲ್ಲ. ಒಟ್ಟು ರಾಜಕೀಯದ ಚರ್ಚೆಯನ್ನು ಮಾಡಿದ್ದೇವೆ. ನಾನು ಈಗ ನೇರವಾಗಿ ಆದಿಚುಂಚನಗಿರಿ ಮಠಕ್ಕೆ ಹೋಗುತ್ತೇನೆ. ಅವರೇನು ನನ್ನನ್ನು ಅಲ್ಲಿಂದ ಓಡಿಸುವುದಿಲ್ಲ. ಯಾಕೆಂದರೆ ಅವರು ಅತ್ಯಂತ ಶಾಂತ ಸ್ವಭಾವದವರು. ಅವರು ಕೋಪ ಮಾಡಿಕೊಂಡಿದ್ದನ್ನು ಎಂದೂ ಕಂಡಿಲ್ಲ.”

“ನಮ್ಮ ನಾಡಿನಲ್ಲಿ ಎಲ್ಲಾ ಜನಾಂಗಗಳಿಗೂ ಸ್ವಾಮೀಜಿಗಳು ಇದ್ದಾರಲ್ಲವಾ? ಅದು ಸುಳ್ಳಾ? ವೀರಶೈವರಿಗೆ ಒಬ್ಬರು ಸ್ವಾಮೀಜಿ, ದಲಿತರಿಗೊಬ್ಬರು ಸ್ವಾಮೀಜಿ ಇದ್ದಾರೆ. ಮುನ್ನೂರು ಜನ ಸ್ವಾಮೀಜಿಗಳು ನನ್ನ ‘ಟಿಪ್ಪು ನಿಜಕನಸುಗಳು’ ನಾಟಕ ನೋಡಲು ಕಲ್ಬುರ್ಗಿಯಲ್ಲಿ ಬಂದಿದ್ದರು. ನಾನು ಸಂತರಿಗೆ ಗೌರವ ಕೊಡುವ ಸಂಸ್ಕಾರದವನು. ನಾನು ಕಮ್ಯುನಿಸ್ಟ್ ಅಲ್ಲ.ಈ ಚುನಾವಣೆ ಸಂದರ್ಭದಲ್ಲಿ ನಿರ್ಮಲಾನಂದ ಸ್ವಾಮೀಜಿಯವರ ಹೆಸರನ್ನು ಯಾರಾದರೂ ಬಳಸಿಕೊಂಡರೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ. ಸಂತರು ಕ್ಷಮಿಸಬಲ್ಲರಲ್ಲವಾ? ಕ್ಷಮಿಸಿ.”

“ಒಕ್ಕಲಿಗರು ಬಂದು ಮುತ್ತಿಗೆ ಹಾಕಿದ್ದಾರೆ ಎನ್ನುತ್ತೀರಿ. ಯಾವ ಒಕ್ಕಲಿಗರು ಎಂದು ನೋಡಬೇಕಲ್ಲವಾ? ಜೆಡಿಎಸ್‌‌ ಒಕ್ಕಲಿಗರಾ? ಕಾಂಗ್ರೆಸ್ ಒಕ್ಕಲಿಗರಾ? ಬಿಜೆಪಿ ಒಕ್ಕಲಿಗರ?- ಇದು ರಾಜಕೀಯ. ಸ್ವಾಮೀಜಿಯವರಲ್ಲಿ ವಿನಂತಿ ಮಾಡುತ್ತೇನೆ. ನಾನು ನಿಮ್ಮಷ್ಟು ದೊಡ್ಡ ವ್ಯಕ್ತಿಯಾಗಲಾರೆ. ಜಾತಿಯನ್ನು ಮೀರಿ ಸ್ವಾಮೀಜಿಗಳು ಬೆಳೆಯಲಿ ಎಂದು ನಾನು ಬಯಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರು ಬೆಳೆಯಬೇಕೆಂದು ಹೇಳುತ್ತಿಲ್ಲ, ಒಟ್ಟಾರೆ ಸ್ವಾಮೀಜಿಗಳ ಕುರಿತು ಹೇಳುತ್ತಿದ್ದೇನೆ.”

ಇದನ್ನೂ ಓದಿರಿ: ನಿರ್ಮಲಾನಂದನಾಥರು ಒಕ್ಕಲಿಗರಿಗೆ ಮಾತ್ರ ಸ್ವಾಮೀಜಿ, ಬೇರೆ ಜಾತಿಗಲ್ಲ: ಅಡ್ಡಂಡ ಕಾರ್ಯಪ್ಪ

“ನಾನು ಮಾತನಾಡಿದ್ದು ತಪ್ಪು ಎಂಬುದಾದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ವಿಷಾದ ಬೇರೆಯಲ್ಲ, ಕ್ಷಮೆ ಬೇರೆಯಲ್ಲ. ಸ್ವಾಮೀಜಿಗಿಂತ ದೊಡ್ಡವನು ನಾನಲ್ಲ. ನಾನು ಸ್ವಾಮೀಜಿಗೆ ಅವಮಾನ ಮಾಡಿಲ್ಲ. ಮಾಡುವುದೂ ಇಲ್ಲ. ನನ್ನ ಹೇಳಿಕೆಯಿಂದ ಅವರ ಭಕ್ತಕೋಟಿಯಲ್ಲಿ ಮುಜುಗರವಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ನಿರ್ಮಲಾನಂದ ಸ್ವಾಮೀಜಿಯವರಲ್ಲಿ ನಾನು ಕ್ಷಮೆ ಕೋರುತ್ತೇನೆ ಹೊರತು, ಇಲ್ಲಿ ಬಂದು ರಾಜಕೀಯಕ್ಕಾಗಿ ಗಲಾಟೆ ಮಾಡುವವರಲ್ಲಿ ಅಲ್ಲ. ಒಂದು ಪಕ್ಷದ ಹಿಂಬಾಲಕರಲ್ಲಿ ಕ್ಷಮೆ ಕೇಳಲ್ಲ.”

“ನಿರ್ಮಲಾನಂದ ಸ್ವಾಮೀಜಿಯವರ ಬಗ್ಗೆ ನಾನು ಅಪಮಾನಕರವಾಗಿ ಮಾತನಾಡಿಲ್ಲ. ತಿರುಚಲ್ಪಟ್ಟು ಮಾಧ್ಯಮಗಳಲ್ಲಿ ಬಂದರೆ ಅದಕ್ಕೆ ನಾನು ಹೊಣೆಯಲ್ಲ. ನಾನು ಮಾತನಾಡಿದ್ದು ನನ್ನ ಬಳಿ ರೆಕಾರ್ಡ್‌‌ನಲ್ಲಿ ಇದೆ. ನಾನು ಎಲ್ಲ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಲ್ಲ, ಮಾಧ್ಯಮ ಗೋಷ್ಠಿ ನಡೆಸಿ ಹೇಳಿದ್ದಲ್ಲ. ಯಾವುದೋ ಒಂದು ಮಿಡಿಯದವರು ತಮಗೆ ಬೇಕಾದಂತೆ ಬಳಸಿಕೊಂಡು ಟಿಆರ್‌ಪಿ ಹೆಚ್ಚಿಸಿಕೊಂಡಿದ್ದರೆ, ಅವರಿಗೆ ಲಾಭವಾಗಿದ್ದರೆ ಧನ್ಯವಾದ. ಆ ಟಿ.ವಿ. ಚಾನೆಲ್‌ ಕೂಡ ಲಾಸ್ ಆಗಬಾರದು.”

-ಈ ಮೇಲಿನ ಮಾತುಗಳನ್ನು ಅಡ್ಡಂಡ ಕಾರ್ಯಪ್ಪ ಅವರು ಖಾಸಗಿ ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...