Homeಮುಖಪುಟಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

ಹೆಚ್ಚು ಪಡಿತರಕ್ಕಾಗಿ 20 ಮಕ್ಕಳನ್ನು ಹೆರಬಾರದೆ..? ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ತಿರತ್ ಸಿಂಗ್ ರಾವತ್

- Advertisement -
- Advertisement -

ಕೆಲ ದಿನಗಳ ಹಿಂದೆ ಯುವತಿಯರು ಹರಿದ ಜೀನ್ಸ್‌ ತೊಡುವ ಬಗ್ಗೆ ವಿವಾದತ್ಮಕ  ಹೇಳಿಕೆ ನೀಡಿ, ತೀವ್ರ ಟೀಕೆಗೆ ಒಳಗಾಗಿ ಕ್ಷಮೆ ಕೇಳಿದ್ದ ಉತ್ತರಾಖಂಡದ ನೂತನ ಮುಖ್ಯಮಂತ್ರಿ ತಿರತ್ ಸಿಂಗ್‌ ರಾವತ್‌, ಮತ್ತೆ ಪಡಿತರ ವಿತರಣೆ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಕೊರೊನಾ ಸಾಂಕ್ರಾಮಿಕದ ಮಧ್ಯೆ ತಮ್ಮನ್ನು ತಾವು ಪೋಷಿಸಲು ಕಷ್ಟಪಡುತ್ತಿರುವ ಬಡ ಕುಟುಂಬಗಳು ಆಹಾರ ಧಾನ್ಯಗಳು ಮತ್ತು ಬೇಳೆಕಾಳುಗಳನ್ನು ವಿತರಿಸುವ ಕೇಂದ್ರ ಸರ್ಕಾರದ ಯೋಜನೆಯಿಂದ ಹೆಚ್ಚಿನ ಪಡಿತರವನ್ನು ಬಯಸಿದರೆ 20 ಮಕ್ಕಳನ್ನು ಹೆರಬೇಕಿತ್ತು ಎಂದಿದ್ದಾರೆ ಮುಖ್ಯಮಂತ್ರಿ ತಿರತ್ ​​ಸಿಂಗ್ ರಾವತ್.

“ಪ್ರತಿ ಮನೆಗೆ ಐದು ಕೆಜಿ ಪಡಿತರವನ್ನು ನೀಡಲಾಯಿತು. ಒಂದು ಮನೆಯಲ್ಲಿ 10 ಜನರಿದ್ದರೆ 50 ಕೆಜಿ , 20 ಜನರಿಗೆ 100 ಕೆಜಿ ಪಡಿತರ ದೊರೆತಿದೆ. ಆದರೆ ಕೆಲವರು ಇದಕ್ಕೆ ಅಸೂಯೆ ಪಟ್ಟಿದ್ದಾರೆ. ಇಬ್ಬರೇ ಇರುವವರಿಗೆ 10 ಕೆಜಿ ಪಡಿತರ ದೊರೆತಿದೆ. ಏಕೆಂದರೆ ನೀವು ಇಬ್ಬರಿಗೆ ಮಾತ್ರ ಜನ್ಮ ನೀಡಿದಿರಾ..ಸಮಯವಿದ್ದರೂ 20 ಮಕ್ಕಳನ್ನು ಯಾಕೆ ಹೆರಲಿಲ್ಲ” ಎಂದು ರಾವತ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್‌ಐ ಉಲ್ಲೇಖಿಸಿದೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ತನ್ನ ವಿವಾದಾತ್ಮಕ ಹೇಳಿಕೆಗೆ ಕ್ಷಮೆಯಾಚಿಸಿದ ಉತ್ತರಾಖಂಡ್ ಸಿಎಂ

ಕಳೆದ ವರ್ಷ ಸಾಂಕ್ರಾಮಿಕ ರೋಗವು ಭಾರತಕ್ಕೆ ಅಪ್ಪಳಿಸಿದಾಗಿನಿಂದ ದೇಶದ ಆರ್ಥಿಕತೆ ಕುಸಿದಿದೆ. ಸಾವಿರಾರು ಕಂಪನಿಗಳು, ಉದ್ಯೋಗಗಳು ಸಂಪೂರ್ಣ ಮುಚ್ಚಿ ಹೋಗಿದೆ. ಉದ್ಯೋಗ ಅಥವಾ ಆಹಾರವಿಲ್ಲದೆ ಕೋಟಿಗಟ್ಟಲೆ ಜನ ಸಂಕಷ್ಟದಲ್ಲಿ ಬೀಳುವಂತಾಗಿದೆ. ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ಅಡಿಯಲ್ಲಿ ಪ್ರತಿ ವ್ಯಕ್ತಿಗೆ ಐದು ಕೆಜಿ ಆಹಾರ ಧಾನ್ಯಗಳು ಮತ್ತು ಒಂದು ಕೆಜಿ ಕೆಜಿ ದ್ವಿದಳ ಧಾನ್ಯವನ್ನು  ನೀಡುವುದಾಗಿ ಘೋಷಿಸಿತ್ತು.

ಮಾರ್ಚ್ 10 ರಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ತಿರತ್ ಸಿಂಗ್ ರಾವತ್, ನೈನಿತಾಲ್‌ನ ರಾಮನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಡಿತರ ಕುರಿತು, ಬಡವರು ಮಕ್ಕಳು ಹೆರುವ ಬಗ್ಗೆ ವಿವಾದಾತ್ಮಕವಾಗಿ ಮಾತನಾಡಿದ್ದಾರೆ.

ಇದೇ ವೇಳೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು “200 ವರ್ಷಗಳ ಕಾಲ ನಮ್ಮನ್ನು ಗುಲಾಮರನ್ನಾಗಿ ಮಾಡಿ ಇಡೀ ಜಗತ್ತನ್ನು ಆಳಿದ ಅಮೆರಿಕವು ಹೆಣಗಾಡುತ್ತಿದೆ” ಎಂದು ತಪ್ಪು ತಪ್ಪಾಗಿ ಮಾತಾಡಿ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗೆ ಒಳಗಾಗುತ್ತಿದ್ದಾರೆ.

ಇದನ್ನೂ ಓದಿ: ಜೀನ್ಸ್ ಪ್ಯಾಂಟ್ ವಿವಾದ: ಸಾಂಸ್ಕೃತಿಕ ಪರಂಪರೆ ಉಳಿಸುವುದು ಮಹಿಳೆಯರ ಜವಾಬ್ದಾರಿ ಎಂದ ಉತ್ತರಾಖಂಡ ಸಿಎಂ ಪತ್ನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...