Homeಚಳವಳಿಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು: ರೈತರ ಸಾವಿನ ಬಗ್ಗೆ ನಾಲಗೆ ಹರಿಯ ಬಿಟ್ಟ ಹರಿಯಾಣ ಕೃಷಿ ಸಚಿವ

ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣಕ್ಕಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟದಲ್ಲಿ ಹಲವಾರು ರೈತರು ಸಾವನ್ನಪ್ಪಿದ್ದಾರೆ. ಈ ರೈತರ ಕುರಿತ ಪ್ರಶ್ನೆಗಳಿಗೆ ಹರಿಯಾಣ ಕೃಷಿ ಸಚಿವ ಜೆ.ಪಿ. ದಲಾಲ್, ಅವರು ಮನೆಯಲ್ಲಿದ್ದರೂ ಸಾಯುತ್ತಿದ್ದರು. ಕೆಲವು ರೈತರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು ಎಂದು ಉತ್ತರಿಸಿ ವಿವಾದಕ್ಕೊಳಗಾಗಿದ್ದಾರೆ.

ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ನಡೆಯುತ್ತಿರುವ ಆಂದೋಲನದಲ್ಲಿ ವಿವಿಧ ಕಾರಣಗಳಿಂದ ಸುಮಾರು 200 ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಮಾದ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ಅವರು (ರೈತರು) ಮನೆಯಲ್ಲಿಯೂ ಸಾಯುತ್ತಿದ್ದರು. ಅವರು ಇಲ್ಲಿ ಸಾಯುತ್ತಿಲ್ಲವೇ? ನನ್ನ ಮಾತುಗಳನ್ನು ಕೇಳಿ, ಒಂದೆರೆರಡು ಲಕ್ಷ ಜನರಲ್ಲಿ, ಆರು ತಿಂಗಳಲ್ಲಿ 200 ಮಂದಿ ಸಾಯುದಿಲ್ಲವೇ? ಕೆಲವರು ಹೃದಯಾಘಾತದಿಂದ ಸಾವಿಗೀಡಾದರು, ಕೆಲವರು ಜ್ವರದಿಂದ ಸಾವಿಗೀಡಾದರು ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ ಸತ್ಯ ಒಪ್ಪಿಕೊಂಡಿದ್ದಾರೆ, ಹಾಗೆಯೆ ಕಾಯ್ದೆ ವಾಪಸ್ ಪಡೆಯಲಿ: ದರ್ಶನ್ ಪಾಲ್

“ಒಂದು ವಿಷಯ ಹೇಳಿ, ಭಾರತದಲ್ಲಿ ಸರಾಸರಿ ಜೀವಿತಾವಧಿ ಎಷ್ಟು ಮತ್ತು ವರ್ಷದಲ್ಲಿ ಎಷ್ಟು ಮಂದಿ ಸಾಯುತ್ತಾರೆ. 135 ಕೋಟಿ ಜನರಲ್ಲಿ ಪ್ರತಿಯೊಬ್ಬ ನಾಗರಿಕನ ಸಾವಿಗೆ ನನ್ನ ಸಹಾನುಭೂತಿಯಿದೆ. ಭಾರತವು ಒಂದೇ ಆಗಿದ್ದು, ಪ್ರತಿಯೊಬ್ಬ ಭಾರತೀಯನ ಹಕ್ಕುಗಳು ಒಂದೇ” ಎಂದು ಹೇಳಿದ್ದಾರೆ.

ಆಂದೋಲನದ ಸಮಯದಲ್ಲಿ ರೈತರು ಪ್ರಾಣ ಕಳೆದುಕೊಂಡ ರೀತಿ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ದಲಾಲ್, “ಅವರು ಯಾವುದೇ ಅಪಘಾತದಲ್ಲಿ ಸಾಯಲಿಲ್ಲ, ಅವರು ತಮ್ಮ ಸ್ವಂತ ಇಚ್ಛೆಯಿಂದ ಸಾವನ್ನಪ್ಪಿದರು…. ಅವರಿಗೆ ನನ್ನ ಸಂತಾಪವನ್ನು ಅರ್ಪಿಸುತ್ತೇನೆ. ಕೆಲವರು ಸಹಾನುಭೂತಿಗಾಗಿ ಮತ್ತು ಕೆಲವರು ಜಾತಿಯ ಕಾರಣದಿಂದಾಗಿ ತಮ್ಮ ಪ್ರಾಣವನ್ನು ಕಳೆದುಕೊಂಡರು” ಎಂದು ಅವರು ಹೇಳಿದ್ದಾರೆ.

ದಲಾಲ್‌ ಅವರ ಹೇಳಿಕೆಗೆ ಕಾಂಗ್ರೆಸ್‌‌ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, “ಸಂವೇದನಾಶೀಲ ಮತ್ತು ಸಂಸ್ಕೃತಿಯಿಲ್ಲದ ವ್ಯಕ್ತಿ ಮಾತ್ರ ತಮ್ಮ ಬೇಡಿಕೆಗಳಿಗಾಗಿ ಹೆಣಗಾಡುತ್ತಿರುವ ಅನ್ನದಾತರಿಗೆ ಅಂತಹ ಪದಗಳನ್ನು ಬಳಸಬಹುದು. ಆದರೆ, ಇಷ್ಟಾಗಿಯು ಅವರಿಗೆ ನಾಚಿಕೆಪಡುತ್ತಿಲ್ಲ. ಈ ಹಿಂದೆ ರೈತರನ್ನು ಪಾಕಿಸ್ತಾನಿ, ಚೀನೀ ಬೆಂಬಲಿಗರು ಎಂದು ಕರೆದಿದ್ದ ಹರಿಯಾಣದ ಕೃಷಿ ಸಚಿವ ಜೆ.ಪಿ. ದಲಾಲ್ ಅವರನ್ನು ರಾಜ್ಯದ ಮಂತ್ರಿ ಮಂಡಳಿಯಿಂದ ವಜಾಗೊಳಿಸಬೇಕು” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...