Homeಕರ್ನಾಟಕಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

- Advertisement -
- Advertisement -

| ಸೋಮಶೇಖರ್ ಚಲ್ಯ |

ಸಕ್ಕರೆ ನಾಡು ಎನ್ನುವ ಹೆಗ್ಗಳಿಕೆ ಇರುವ ಮಂಡ್ಯ ಈಗೀಗ ಗುರುತಿಸಿಕೊಳ್ಳುತ್ತಿರುವುದು ಹಲವು ಕುಖ್ಯಾತ ಕಾರಣಗಳಿಂದ. ರೈತರ ಆತ್ಮಹತ್ಯೆ, ಹೆಣ್ಣು ಭ್ರೂಣ ಹತ್ಯೆ, ಮರ್ಯಾದಾ ಹತ್ಯೆ, ಜಾತಿಯಾಧಾರಿತ ದೌರ್ಜನ್ಯಗಳ ಕುಖ್ಯಾತಿಯ ಪಟ್ಟಿಯಲ್ಲಿ ಮಂಡ್ಯ ಮೊದಲ ಶ್ರೇಣಿಯಲ್ಲಿರುವುದು ಮಂಡ್ಯದ ಘನತೆಯನ್ನು ಕುಂದಿಸುತ್ತಿದೆ.

ಈ ಪಟ್ಟಿಗೆ ಇನ್ನೊಂದು ಸೇರ್ಪಡೆ, ಕಲ್ಲಿನ ಕ್ವಾರೆಗಳಲ್ಲಿ ನಿಗೂಢ ಸಾವುಗಳು. ಕೆಆರ್‍ಎಸ್ ಸುತ್ತಮುತ್ತಲಿನ ಶ್ರೀರಂಗಪಟ್ಟಣ, ಬೇಬಿ ಬೆಟ್ಟ ಮುಂತಾದ ಹಲವಾರು ಪ್ರದೇಶಗಳಲ್ಲಿ ಅಧಿಕೃತವಾಗಿ ಮತ್ತು ಅನಧಿಕೃತವಾಗಿ ರಾಜಕೀಯ ಬಲ ಹಾಗೂ ತೋಳ್ಬಲಗಳಿಂದ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಇದರಿಂದಾಗಿ ಆ ಪ್ರದೇಶಗಳು ಬಳ್ಳಾರಿಯಂತಹ ಮೈನಿಂಗ್ ತಾಣಗಳಂತೆ ಕಾಣುತ್ತಿದ್ದು, ಮಂಡ್ಯದ ಮತ್ತೊಂದು ಮುಖವನ್ನು ತೆರೆದಿಟ್ಟಿದೆ. ಈ ಗಣಿಗಾರಿಕೆಗಳಿಂದಾಗಿ ಕೆಆರ್‍ಎಸ್ ಅಣೆಕಟ್ಟೆಗೂ ಅಪಾಯ ಬಂದಿದೆಯೆಂದು, ಅದರ ಉಳಿವಿಗಾಗಿ ಮೈನಿಂಗ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ.

ಇದೆಲ್ಲದರ ನಡುವೆ ಕ್ವಾರೆಗಳಲ್ಲಿ ಕೂಲಿ ಕೆಲಸ ಮಾಡುವ ಜನರ ಸಾವುಗಳು ಸರಣಿ ರೀತಿಯಲ್ಲಿ ನಡೆಯುತ್ತಲೇ ಇವೆ. ಆದರೆ ಈ ಸಾವುಗಳಿಗೆ ಕಾರಣವನ್ನು ಕಂಡುಕೊಳ್ಳುವಲ್ಲಿ ಜಿಲ್ಲಾಡಳಿತ ಸೋತಿರುವುದು ಸ್ಥಳೀಯ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಜೂನ್ 20ರ ರಾತ್ರಿ ಮತ್ತೊಬ್ಬ ಕೂಲಿ ಕಾರ್ಮಿಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನಕೆರೆ ಗ್ರಾಮದ ಕ್ವಾರೆಯಲ್ಲಿ ರಾತ್ರಿ 11 ಗಂಟೆಯ ವೇಳೆಗೆ ಕಂಪ್ರೆಸರ್ ಮೂಲಕ ಕುಳಿ ತೋಡಲು ಹೋಗಿದ್ದ ಕಾರ್ಮಿಕ ರಾಜು ಸಾವನ್ನಪ್ಪಿದ್ದಾನೆ. ಹಿಂದೆ ಒಂದು ಸಾರಿ ಕಲ್ಲನ್ನು ಸಿಡಿಸಲು ತೆಗೆದಿದ್ದ ಹಳೇ ಕುಳಿಯಲ್ಲಿ ಸಿಡಿಮದ್ದು ತುಂಬಿಯೂ ಅದು ಸಿಡಿದಿರಲಿಲ್ಲ. ಈಗ ಅದೇ ಸಿಡಿಮದ್ದು ತುಂಬಿದ್ದ ಕುಳಿಯಲ್ಲಿ ಮತ್ತೆ ಕುಳಿ ತೆಗೆದು ಸಿಡಿಸಲು ಹೋಗಿದ್ದಾರೆ. ಮೊದಲೇ ತುಂಬಿದ್ದ ಸಿಡಿಮದ್ದು ಕುಳಿ ಹಾಕುತ್ತಿದ್ದಂತೆಯೇ ಸಿಡಿದು ಹೋಗಿದೆ. ಇದರಿಂದ ರಾಜು ಸಾವನ್ನಪ್ಪಿದ್ದಾನೆ, ಆತನ ಸಂಬಂಧಿ ಮುನಿಯಪ್ಪನಿಗೆ ಕೈ ಮುರಿದಿದೆ. ಆದರೆ, ಕ್ವಾರೆಯ ಮಾಲೀಕರಾದ ಮೀನಾಕ್ಷಿ, ನಂಜೇಗೌಡ ಮತ್ತು ಸಂತೋಷ್ ಕಂಪ್ರೇಸರ್ ಟ್ರ್ಯಾಕ್ಟರ್ ಮಗುಚಿ ಆತ ಸಾವಿನ್ನಪ್ಪಿದ್ದಾನೆ ಎಂದು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಪ್ರೊ.ಹುಲ್ಕೆರೆ ಮಹದೇವ ಆರೋಪಿಸಿದ್ದಾರೆ.

ಇಂತಹ ಘಟನೆಗಳು ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ಮೊದಲೇನಲ್ಲ. ರಾಜ್ಯದ ಹಲವಾರು ಹಳ್ಳಿಗಳಿಂದ ಬಡಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸಲುವಾಗಿ ಇಂತಹ ಉದ್ಯೋಗಗಳನ್ನು ಅರಸಿ ಬರುತ್ತಾರೆ. ಅಂತಹ ಜನರಿಗೆ ಒಂದಷ್ಟು ಮೊತ್ತದ ದುಡ್ಡು ಕೊಟ್ಟು ಇಂತಿಷ್ಟು ವರ್ಷಗಳಿಗೆ ಎಂದು ಜೀತದ ರೀತಿಯಲ್ಲಿ ದುಡಿಸಿಕೊಳ್ಳುವುದು ಕ್ವಾರೆಗಳಲ್ಲಿ ಇನ್ನು ತಪ್ಪಿಲ್ಲ. ದಾರುಣ ಬಡತನದಲ್ಲಿರುವ ಜನ ಈಗಲೂ ಜೀತದಾಳುಗಳಾಗಿ ಬಂದು ದುಡಿಯುತ್ತಿದ್ದಾರೆ.

ಇದೇ ಶ್ರೀರಂಗಪಟ್ಟಣ ತಾಲ್ಲೂಕಿನ ಹಂಗರಹಳ್ಳಿಯ ಪ್ರಕರಣಗಳು ಎಲ್ಲರಿಗೂ ನೆನಪಿದ್ದೇ ಇರುತ್ತದೆ. 18 ವರ್ಷಗಳ ಹಿಂದೆ, ಹಂಗರಹಳ್ಳಿಯಲ್ಲಿ ಕಾಲಿಗೆ ಕೋಳ ತೊಡಿಸಿ ಕಾರ್ಮಿಕರು ಎಲ್ಲೂ ಹೋಗದಂತೆ ಒಂದೇ ಕಡೆ ಕಟ್ಟಿ ದುಡಿಸಲಾಗುತ್ತಿತ್ತು. ರೈತಸಂಘವು ಅದನ್ನು ಬಯಲಿಗೆ ತಂದನಂತರ ದೇಶಾದ್ಯಂತ ಸುದ್ದಿ ಆಗಿತ್ತು. ನಂತರದಲ್ಲಿ ಆ ಸಂತ್ರಸ್ತರನ್ನೇ ಹೆದರಿಸಿ, ತಮಗೆ ಸಿನೆಮಾ ಶೂಟಿಂಗ್ ಕಾರಣಕ್ಕೆ ಕೋಳ ತೊಡಿಸಲಾಗಿತ್ತೆಂದು ಸಾಕ್ಷಿ ನುಡಿಸಿದ್ದರು. ಅಂತಿಮವಾಗಿ ಕೇಸು ಬಿದ್ದುಹೋಗಿತ್ತು. ಇಷ್ಟಾದ ನಂತರ ಇದೇ ಹಂಗರಹಳ್ಳಿಯಲ್ಲಿ 2018ರ ಅಕ್ಟೋಬರ್‍ನಲ್ಲಿಯೂ ತನ್ನ ದುಡಿಮೆಯ ಲೆಕ್ಕ ಕೇಳಿದ ಕರಿಯಪ್ಪ ಮಾದರ್ ಎಂಬ ಜೀತಗಾರನನ್ನು ಕೊಂದು ನೇಣುಹಾಕಲಾಗಿತ್ತೆಂದು ಹೇಳಲು ಹಲವು ಸಾಂದರ್ಭಿಕ ಸಾಕ್ಷ್ಯಗಳಿದ್ದವು. ಆಗಲೂ ಪ್ರಕರಣ ಮುಚ್ಚಿಹೋಗದಂತೆ ಸ್ಥಳೀಯ ಹೋರಾಟಗಾರರು ಅದನ್ನು ಬೆಳಕಿಗೆ ತಂದಿದ್ದರು. ಅದೇ ಸಮಯದಲ್ಲಿ ಮದ್ದೂರಿನ ಕುದುರುಗುಂಡಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಜೀತಕ್ಕಿರಿಸಿಕೊಂಡು ದುಡಿಸಲಾಗುತ್ತಿತ್ತು. ಆಕೆ ಜೀತವನ್ನು ನಿರಾಕರಿಸಿ ಹೊರಹೋಗಿದ್ದರಿಂದ, ಆಕೆಯನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವೂ ಬೆಳಕಿಗೆ ಬಂದಿತ್ತು. ಈ ಅಮಾನವೀಯ ಕೃತ್ಯಗಳ ಬಗ್ಗೆ ಪತ್ರಿಕೆಯಲ್ಲಿ ವರದಿಯನ್ನೂ ಮಾಡಿದ್ದೆವು.

ಈಗ ನಿಗೂಢವಾಗಿ ಸಾವನ್ನಪ್ಪಿರುವ ರಾಜು ಕೂಡ ಕೊಳ್ಳೆಗಾಲ ತಾಲ್ಲೂಕಿನ ವಡ್ಡಲದೊಡ್ಡಿ ಗ್ರಾಮದಿಂದ ತನ್ನ ಸಂಬಂಧಿ ಮುನಿಯಪ್ಪನ ಜೊತೆ ಬಂದು ಚೆನ್ನಕೆರೆ ಕ್ವಾರೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದರು. ರಾತ್ರಿಯ ವೇಳೆಯಲ್ಲಿ ಸಿಡಿಮದ್ದುಗಳನ್ನು ಸಿಡಿಸುವುದರಿಂದ ರಾಜು ಮತ್ತು ಮುನಿಯಪ್ಪ ಕ್ವಾರೆಯಲ್ಲಿ ಕುಳಿ ತೆಗೆಯಲು ಬಂದಿದ್ದಾಗ ಈ ಘಟನೆ ನಡೆದಿದೆ. ಆದರೆ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಆತನ ಶವವನ್ನು ಪೊಲೀಸ್ ಮಹಜರ್ ಮಾಡುವುದಕ್ಕೂ ಮೊದಲೇ ಯಾರಿಗೂ ತಿಳಿಯದಂತೆ ಜಲ್ಲಿ ಕ್ರಷರ್‍ನಲ್ಲಿ ಅಡಗಿಸಿಟ್ಟಿದ್ದಾರೆ. ಕ್ರಷರ್ ಬಳಿಗೆ ಯಾರೂ ಬಾರದಂತೆ ರಸ್ತೆಯಲ್ಲಿ ಗುಂಡಿ ತೋಡಿದ್ದಾರೆ. ಬೆಳಗ್ಗೆಯ ವೇಳೆಗೆ ಆತನ ಕುಟುಂಬಕ್ಕೆ 4.5 ಲಕ್ಷದಷ್ಟು ಹಣ ಕೊಟ್ಟು ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ. ಆ ಸಮಯಕ್ಕೆ ಘಟನೆಯ ವಿಷಯ ಅಕ್ಕ-ಪಕ್ಕದವರಿಗೆ ಗೊತ್ತಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.
ಜೂನ್ 21ರಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತಿತರ ಹಿರಿಯ ಹೋರಾಟಗಾರರಿಗೆ ವಿಷಯ ತಿಳಿದಿದೆ. ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರರನ್ನು ವಿಚಾರಿಸಿದ್ದಾರೆ. ತಹಶೀಲ್ದಾರ್ ಆ ವಿಷಯ ತಮಗೆ ತಿಳಿದೇ ಇಲ್ಲವೆಂದು ನಾನಾ ಸಬೂಬು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅರಕೆರೆ ಪೊಲೀಸರೂ ತಮಗೂ ವಿಷಯ ತಿಳಿದಿಲ್ಲವೆಂದು ಹೇಳಿದ್ದಾರೆ. ಆದರೆ ಇಂಥದೊಂದು ಘಟನೆ ನಡೆದಿದೆ, ಮಾಲೀಕರಿಗೆ ಶಿಕ್ಷೆಯಾಗಬೇಕು ಎಂದು ಹೋರಾಟಗಾರರು ಹೇಳುವಾಗ, ಆ ಮಾಲೀಕ ದಲಿತ ಜಾತಿಗೆ ಸೇರಿದವರು ಏನ್ ಮಾಡ್ತಿರಾ ಎಂದು ಅರಕೆರೆ ಪೊಲೀಸ್ ಠಾಣೆಯ ಎಸ್‍ಐ ಹೇಳಿದ್ದಾರೆ. ಇದು ಪೊಲೀಸರು ಕ್ವಾರೆಯ ಮಾಲೀಕರೊಂದಿಗೆ ಸೇರಿ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ಮಾಡಲಾಗಿದೆ ಎಂಬುದನ್ನು ತೋರಿಸುತ್ತದೆ ಎಂಬುದು ಅವರ ಆರೋಪ. ಮೊದಲೇ ಈ ವಿಚಾರ ಗೊತ್ತಿದ್ದರೂ ಗೊತ್ತಿಲ್ಲವೆಂಬಂತೆ ನಟಿಸಿರುವುದು ಹಸಿಹಸಿಯಾಗಿ ಬಯಲಾದ ನಂತರ ಅವರು ತಬ್ಬಿಬ್ಬಾದರು ಮತ್ತು ಆಗ ಪೊಲೀಸರು ಮತ್ತು ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡೆವೆಂದು ಹೇಳಿದ್ದಾರೆ.

ನಂತರ ಸಂಜೆ 4.30ರ ವೇಳೆಗೆ ಮೈಸೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶವವನ್ನು ತಂದಿದ್ದಾರೆ. ಅಲ್ಲಿಯವರೆಗೂ ಶವ ಎಲ್ಲಿತ್ತು ಎಂಬ ಸುಳಿವೇ ಸಿಕ್ಕಿಲ್ಲ, ಮಹಜರ್ ಸಹಾ ಮಾಡಲಾಗಿಲ್ಲ. ಆಸ್ಪತ್ರೆಯಲ್ಲಿ ಎಫ್‍ಐಆರ್ ಆಗದೆ ಪೋಸ್ಟ್‍ಮಾರ್ಟಂ ಮಾಡುವುದಿಲ್ಲ ಎಂದು ಹೇಳಿದ ಮೇಲೆ ಅಪಘಾತ ಸಾವು ಎಂದು ಎಫ್‍ಐಆರ್ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂಪ್ರೆಸರ್ ಟ್ರ್ಯಾಕ್ಟರ್ ಮೇಲಿತ್ತು, ನಾವು ಹೋಗುವ ಸಮಯದಲ್ಲಿ ಅದು ಉರುಳಿಬಿತ್ತು ಎಂದು ಮುನಿಯಪ್ಪ ಹೇಳಿಕೆ ನೀಡಿದ್ದಾನೆ. ಆದರೆ ಈ ಹೇಳಿಕೆಯು ಮಾಲೀಕರ ಮೇಲಿನ ಭಯದಿಂದ ಬಂದಿದೆ ಎಂದು ಹೋರಾಟಗಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಹಜರು ಮಾಡದೆ ಮತ್ತು ಎಫ್‍ಐಆರ್ ಹಾಕದೆ ಶವವನ್ನು ಮರಣೋತ್ತರ ಪರೀಕ್ಷೆಗೆ ತಂದಿದ್ದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಹಜರ್ ಮಾಡದೇ ಶವವನ್ನ ತೆಗೆದಿದ್ದು ಯಾಕೆ? ಯಾರು ಆ ಸ್ಥಳಕ್ಕೆ ಬಾರದಂತೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು ಯಾಕೆ? ಎಫ್‍ಐಆರ್ ದಾಖಲಿಸದೇ ಪೋಸ್ಟ್ ಮಾರ್ಟಮ್‍ಗೆ ತೆಗೆದುಕೊಂಡು ಹೋಗಿದ್ದಾರೆ, ಅಲ್ಲಿಯವರೆಗೆ ಶವ ಎಲ್ಲಿತ್ತು? ಶವವನ್ನು ಬಚ್ಚಿಟ್ಟಿದ್ದು ಯಾಕೆ? ಇಷ್ಟೆಲ್ಲಾ ಆದರೂ ಪೊಲೀಸರು ಮಾಲೀಕರ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದು ಯಾಕೆ? ಇವೆಲ್ಲಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇನ್ನೂ ಪೋಸ್ಟ್‍ಮಾರ್ಟಂ ರಿಪೋರ್ಟ್ ಬಹಿರಂಗಗೊಂಡಿಲ್ಲ.

ಈಗಲಾದರೂ ಇದನ್ನೊಂದು ಪ್ರತ್ಯೇಕ ಆಕಸ್ಮಿಕ ಘಟನೆ ಎಂದು ನೋಡದೇ, ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ, ಅಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ರೀತಿ, ನಿಗೂಢ ಸಾವುಗಳು ಇದರ ಕುರಿತಂತೆ ಸಮಗ್ರ ತನಿಖೆ ಹಾಗೂ ಕ್ರಮಗಳು ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...