Homeಕರ್ನಾಟಕಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

- Advertisement -
- Advertisement -

| ಸೋಮಶೇಖರ್ ಚಲ್ಯ |

ಸಕ್ಕರೆ ನಾಡು ಎನ್ನುವ ಹೆಗ್ಗಳಿಕೆ ಇರುವ ಮಂಡ್ಯ ಈಗೀಗ ಗುರುತಿಸಿಕೊಳ್ಳುತ್ತಿರುವುದು ಹಲವು ಕುಖ್ಯಾತ ಕಾರಣಗಳಿಂದ. ರೈತರ ಆತ್ಮಹತ್ಯೆ, ಹೆಣ್ಣು ಭ್ರೂಣ ಹತ್ಯೆ, ಮರ್ಯಾದಾ ಹತ್ಯೆ, ಜಾತಿಯಾಧಾರಿತ ದೌರ್ಜನ್ಯಗಳ ಕುಖ್ಯಾತಿಯ ಪಟ್ಟಿಯಲ್ಲಿ ಮಂಡ್ಯ ಮೊದಲ ಶ್ರೇಣಿಯಲ್ಲಿರುವುದು ಮಂಡ್ಯದ ಘನತೆಯನ್ನು ಕುಂದಿಸುತ್ತಿದೆ.

ಈ ಪಟ್ಟಿಗೆ ಇನ್ನೊಂದು ಸೇರ್ಪಡೆ, ಕಲ್ಲಿನ ಕ್ವಾರೆಗಳಲ್ಲಿ ನಿಗೂಢ ಸಾವುಗಳು. ಕೆಆರ್‍ಎಸ್ ಸುತ್ತಮುತ್ತಲಿನ ಶ್ರೀರಂಗಪಟ್ಟಣ, ಬೇಬಿ ಬೆಟ್ಟ ಮುಂತಾದ ಹಲವಾರು ಪ್ರದೇಶಗಳಲ್ಲಿ ಅಧಿಕೃತವಾಗಿ ಮತ್ತು ಅನಧಿಕೃತವಾಗಿ ರಾಜಕೀಯ ಬಲ ಹಾಗೂ ತೋಳ್ಬಲಗಳಿಂದ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಇದರಿಂದಾಗಿ ಆ ಪ್ರದೇಶಗಳು ಬಳ್ಳಾರಿಯಂತಹ ಮೈನಿಂಗ್ ತಾಣಗಳಂತೆ ಕಾಣುತ್ತಿದ್ದು, ಮಂಡ್ಯದ ಮತ್ತೊಂದು ಮುಖವನ್ನು ತೆರೆದಿಟ್ಟಿದೆ. ಈ ಗಣಿಗಾರಿಕೆಗಳಿಂದಾಗಿ ಕೆಆರ್‍ಎಸ್ ಅಣೆಕಟ್ಟೆಗೂ ಅಪಾಯ ಬಂದಿದೆಯೆಂದು, ಅದರ ಉಳಿವಿಗಾಗಿ ಮೈನಿಂಗ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ.

ಇದೆಲ್ಲದರ ನಡುವೆ ಕ್ವಾರೆಗಳಲ್ಲಿ ಕೂಲಿ ಕೆಲಸ ಮಾಡುವ ಜನರ ಸಾವುಗಳು ಸರಣಿ ರೀತಿಯಲ್ಲಿ ನಡೆಯುತ್ತಲೇ ಇವೆ. ಆದರೆ ಈ ಸಾವುಗಳಿಗೆ ಕಾರಣವನ್ನು ಕಂಡುಕೊಳ್ಳುವಲ್ಲಿ ಜಿಲ್ಲಾಡಳಿತ ಸೋತಿರುವುದು ಸ್ಥಳೀಯ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಜೂನ್ 20ರ ರಾತ್ರಿ ಮತ್ತೊಬ್ಬ ಕೂಲಿ ಕಾರ್ಮಿಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನಕೆರೆ ಗ್ರಾಮದ ಕ್ವಾರೆಯಲ್ಲಿ ರಾತ್ರಿ 11 ಗಂಟೆಯ ವೇಳೆಗೆ ಕಂಪ್ರೆಸರ್ ಮೂಲಕ ಕುಳಿ ತೋಡಲು ಹೋಗಿದ್ದ ಕಾರ್ಮಿಕ ರಾಜು ಸಾವನ್ನಪ್ಪಿದ್ದಾನೆ. ಹಿಂದೆ ಒಂದು ಸಾರಿ ಕಲ್ಲನ್ನು ಸಿಡಿಸಲು ತೆಗೆದಿದ್ದ ಹಳೇ ಕುಳಿಯಲ್ಲಿ ಸಿಡಿಮದ್ದು ತುಂಬಿಯೂ ಅದು ಸಿಡಿದಿರಲಿಲ್ಲ. ಈಗ ಅದೇ ಸಿಡಿಮದ್ದು ತುಂಬಿದ್ದ ಕುಳಿಯಲ್ಲಿ ಮತ್ತೆ ಕುಳಿ ತೆಗೆದು ಸಿಡಿಸಲು ಹೋಗಿದ್ದಾರೆ. ಮೊದಲೇ ತುಂಬಿದ್ದ ಸಿಡಿಮದ್ದು ಕುಳಿ ಹಾಕುತ್ತಿದ್ದಂತೆಯೇ ಸಿಡಿದು ಹೋಗಿದೆ. ಇದರಿಂದ ರಾಜು ಸಾವನ್ನಪ್ಪಿದ್ದಾನೆ, ಆತನ ಸಂಬಂಧಿ ಮುನಿಯಪ್ಪನಿಗೆ ಕೈ ಮುರಿದಿದೆ. ಆದರೆ, ಕ್ವಾರೆಯ ಮಾಲೀಕರಾದ ಮೀನಾಕ್ಷಿ, ನಂಜೇಗೌಡ ಮತ್ತು ಸಂತೋಷ್ ಕಂಪ್ರೇಸರ್ ಟ್ರ್ಯಾಕ್ಟರ್ ಮಗುಚಿ ಆತ ಸಾವಿನ್ನಪ್ಪಿದ್ದಾನೆ ಎಂದು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಪ್ರೊ.ಹುಲ್ಕೆರೆ ಮಹದೇವ ಆರೋಪಿಸಿದ್ದಾರೆ.

ಇಂತಹ ಘಟನೆಗಳು ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ಮೊದಲೇನಲ್ಲ. ರಾಜ್ಯದ ಹಲವಾರು ಹಳ್ಳಿಗಳಿಂದ ಬಡಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸಲುವಾಗಿ ಇಂತಹ ಉದ್ಯೋಗಗಳನ್ನು ಅರಸಿ ಬರುತ್ತಾರೆ. ಅಂತಹ ಜನರಿಗೆ ಒಂದಷ್ಟು ಮೊತ್ತದ ದುಡ್ಡು ಕೊಟ್ಟು ಇಂತಿಷ್ಟು ವರ್ಷಗಳಿಗೆ ಎಂದು ಜೀತದ ರೀತಿಯಲ್ಲಿ ದುಡಿಸಿಕೊಳ್ಳುವುದು ಕ್ವಾರೆಗಳಲ್ಲಿ ಇನ್ನು ತಪ್ಪಿಲ್ಲ. ದಾರುಣ ಬಡತನದಲ್ಲಿರುವ ಜನ ಈಗಲೂ ಜೀತದಾಳುಗಳಾಗಿ ಬಂದು ದುಡಿಯುತ್ತಿದ್ದಾರೆ.

ಇದೇ ಶ್ರೀರಂಗಪಟ್ಟಣ ತಾಲ್ಲೂಕಿನ ಹಂಗರಹಳ್ಳಿಯ ಪ್ರಕರಣಗಳು ಎಲ್ಲರಿಗೂ ನೆನಪಿದ್ದೇ ಇರುತ್ತದೆ. 18 ವರ್ಷಗಳ ಹಿಂದೆ, ಹಂಗರಹಳ್ಳಿಯಲ್ಲಿ ಕಾಲಿಗೆ ಕೋಳ ತೊಡಿಸಿ ಕಾರ್ಮಿಕರು ಎಲ್ಲೂ ಹೋಗದಂತೆ ಒಂದೇ ಕಡೆ ಕಟ್ಟಿ ದುಡಿಸಲಾಗುತ್ತಿತ್ತು. ರೈತಸಂಘವು ಅದನ್ನು ಬಯಲಿಗೆ ತಂದನಂತರ ದೇಶಾದ್ಯಂತ ಸುದ್ದಿ ಆಗಿತ್ತು. ನಂತರದಲ್ಲಿ ಆ ಸಂತ್ರಸ್ತರನ್ನೇ ಹೆದರಿಸಿ, ತಮಗೆ ಸಿನೆಮಾ ಶೂಟಿಂಗ್ ಕಾರಣಕ್ಕೆ ಕೋಳ ತೊಡಿಸಲಾಗಿತ್ತೆಂದು ಸಾಕ್ಷಿ ನುಡಿಸಿದ್ದರು. ಅಂತಿಮವಾಗಿ ಕೇಸು ಬಿದ್ದುಹೋಗಿತ್ತು. ಇಷ್ಟಾದ ನಂತರ ಇದೇ ಹಂಗರಹಳ್ಳಿಯಲ್ಲಿ 2018ರ ಅಕ್ಟೋಬರ್‍ನಲ್ಲಿಯೂ ತನ್ನ ದುಡಿಮೆಯ ಲೆಕ್ಕ ಕೇಳಿದ ಕರಿಯಪ್ಪ ಮಾದರ್ ಎಂಬ ಜೀತಗಾರನನ್ನು ಕೊಂದು ನೇಣುಹಾಕಲಾಗಿತ್ತೆಂದು ಹೇಳಲು ಹಲವು ಸಾಂದರ್ಭಿಕ ಸಾಕ್ಷ್ಯಗಳಿದ್ದವು. ಆಗಲೂ ಪ್ರಕರಣ ಮುಚ್ಚಿಹೋಗದಂತೆ ಸ್ಥಳೀಯ ಹೋರಾಟಗಾರರು ಅದನ್ನು ಬೆಳಕಿಗೆ ತಂದಿದ್ದರು. ಅದೇ ಸಮಯದಲ್ಲಿ ಮದ್ದೂರಿನ ಕುದುರುಗುಂಡಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಜೀತಕ್ಕಿರಿಸಿಕೊಂಡು ದುಡಿಸಲಾಗುತ್ತಿತ್ತು. ಆಕೆ ಜೀತವನ್ನು ನಿರಾಕರಿಸಿ ಹೊರಹೋಗಿದ್ದರಿಂದ, ಆಕೆಯನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವೂ ಬೆಳಕಿಗೆ ಬಂದಿತ್ತು. ಈ ಅಮಾನವೀಯ ಕೃತ್ಯಗಳ ಬಗ್ಗೆ ಪತ್ರಿಕೆಯಲ್ಲಿ ವರದಿಯನ್ನೂ ಮಾಡಿದ್ದೆವು.

ಈಗ ನಿಗೂಢವಾಗಿ ಸಾವನ್ನಪ್ಪಿರುವ ರಾಜು ಕೂಡ ಕೊಳ್ಳೆಗಾಲ ತಾಲ್ಲೂಕಿನ ವಡ್ಡಲದೊಡ್ಡಿ ಗ್ರಾಮದಿಂದ ತನ್ನ ಸಂಬಂಧಿ ಮುನಿಯಪ್ಪನ ಜೊತೆ ಬಂದು ಚೆನ್ನಕೆರೆ ಕ್ವಾರೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದರು. ರಾತ್ರಿಯ ವೇಳೆಯಲ್ಲಿ ಸಿಡಿಮದ್ದುಗಳನ್ನು ಸಿಡಿಸುವುದರಿಂದ ರಾಜು ಮತ್ತು ಮುನಿಯಪ್ಪ ಕ್ವಾರೆಯಲ್ಲಿ ಕುಳಿ ತೆಗೆಯಲು ಬಂದಿದ್ದಾಗ ಈ ಘಟನೆ ನಡೆದಿದೆ. ಆದರೆ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಆತನ ಶವವನ್ನು ಪೊಲೀಸ್ ಮಹಜರ್ ಮಾಡುವುದಕ್ಕೂ ಮೊದಲೇ ಯಾರಿಗೂ ತಿಳಿಯದಂತೆ ಜಲ್ಲಿ ಕ್ರಷರ್‍ನಲ್ಲಿ ಅಡಗಿಸಿಟ್ಟಿದ್ದಾರೆ. ಕ್ರಷರ್ ಬಳಿಗೆ ಯಾರೂ ಬಾರದಂತೆ ರಸ್ತೆಯಲ್ಲಿ ಗುಂಡಿ ತೋಡಿದ್ದಾರೆ. ಬೆಳಗ್ಗೆಯ ವೇಳೆಗೆ ಆತನ ಕುಟುಂಬಕ್ಕೆ 4.5 ಲಕ್ಷದಷ್ಟು ಹಣ ಕೊಟ್ಟು ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ. ಆ ಸಮಯಕ್ಕೆ ಘಟನೆಯ ವಿಷಯ ಅಕ್ಕ-ಪಕ್ಕದವರಿಗೆ ಗೊತ್ತಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.
ಜೂನ್ 21ರಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತಿತರ ಹಿರಿಯ ಹೋರಾಟಗಾರರಿಗೆ ವಿಷಯ ತಿಳಿದಿದೆ. ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರರನ್ನು ವಿಚಾರಿಸಿದ್ದಾರೆ. ತಹಶೀಲ್ದಾರ್ ಆ ವಿಷಯ ತಮಗೆ ತಿಳಿದೇ ಇಲ್ಲವೆಂದು ನಾನಾ ಸಬೂಬು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅರಕೆರೆ ಪೊಲೀಸರೂ ತಮಗೂ ವಿಷಯ ತಿಳಿದಿಲ್ಲವೆಂದು ಹೇಳಿದ್ದಾರೆ. ಆದರೆ ಇಂಥದೊಂದು ಘಟನೆ ನಡೆದಿದೆ, ಮಾಲೀಕರಿಗೆ ಶಿಕ್ಷೆಯಾಗಬೇಕು ಎಂದು ಹೋರಾಟಗಾರರು ಹೇಳುವಾಗ, ಆ ಮಾಲೀಕ ದಲಿತ ಜಾತಿಗೆ ಸೇರಿದವರು ಏನ್ ಮಾಡ್ತಿರಾ ಎಂದು ಅರಕೆರೆ ಪೊಲೀಸ್ ಠಾಣೆಯ ಎಸ್‍ಐ ಹೇಳಿದ್ದಾರೆ. ಇದು ಪೊಲೀಸರು ಕ್ವಾರೆಯ ಮಾಲೀಕರೊಂದಿಗೆ ಸೇರಿ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ಮಾಡಲಾಗಿದೆ ಎಂಬುದನ್ನು ತೋರಿಸುತ್ತದೆ ಎಂಬುದು ಅವರ ಆರೋಪ. ಮೊದಲೇ ಈ ವಿಚಾರ ಗೊತ್ತಿದ್ದರೂ ಗೊತ್ತಿಲ್ಲವೆಂಬಂತೆ ನಟಿಸಿರುವುದು ಹಸಿಹಸಿಯಾಗಿ ಬಯಲಾದ ನಂತರ ಅವರು ತಬ್ಬಿಬ್ಬಾದರು ಮತ್ತು ಆಗ ಪೊಲೀಸರು ಮತ್ತು ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡೆವೆಂದು ಹೇಳಿದ್ದಾರೆ.

ನಂತರ ಸಂಜೆ 4.30ರ ವೇಳೆಗೆ ಮೈಸೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶವವನ್ನು ತಂದಿದ್ದಾರೆ. ಅಲ್ಲಿಯವರೆಗೂ ಶವ ಎಲ್ಲಿತ್ತು ಎಂಬ ಸುಳಿವೇ ಸಿಕ್ಕಿಲ್ಲ, ಮಹಜರ್ ಸಹಾ ಮಾಡಲಾಗಿಲ್ಲ. ಆಸ್ಪತ್ರೆಯಲ್ಲಿ ಎಫ್‍ಐಆರ್ ಆಗದೆ ಪೋಸ್ಟ್‍ಮಾರ್ಟಂ ಮಾಡುವುದಿಲ್ಲ ಎಂದು ಹೇಳಿದ ಮೇಲೆ ಅಪಘಾತ ಸಾವು ಎಂದು ಎಫ್‍ಐಆರ್ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂಪ್ರೆಸರ್ ಟ್ರ್ಯಾಕ್ಟರ್ ಮೇಲಿತ್ತು, ನಾವು ಹೋಗುವ ಸಮಯದಲ್ಲಿ ಅದು ಉರುಳಿಬಿತ್ತು ಎಂದು ಮುನಿಯಪ್ಪ ಹೇಳಿಕೆ ನೀಡಿದ್ದಾನೆ. ಆದರೆ ಈ ಹೇಳಿಕೆಯು ಮಾಲೀಕರ ಮೇಲಿನ ಭಯದಿಂದ ಬಂದಿದೆ ಎಂದು ಹೋರಾಟಗಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಹಜರು ಮಾಡದೆ ಮತ್ತು ಎಫ್‍ಐಆರ್ ಹಾಕದೆ ಶವವನ್ನು ಮರಣೋತ್ತರ ಪರೀಕ್ಷೆಗೆ ತಂದಿದ್ದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಹಜರ್ ಮಾಡದೇ ಶವವನ್ನ ತೆಗೆದಿದ್ದು ಯಾಕೆ? ಯಾರು ಆ ಸ್ಥಳಕ್ಕೆ ಬಾರದಂತೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು ಯಾಕೆ? ಎಫ್‍ಐಆರ್ ದಾಖಲಿಸದೇ ಪೋಸ್ಟ್ ಮಾರ್ಟಮ್‍ಗೆ ತೆಗೆದುಕೊಂಡು ಹೋಗಿದ್ದಾರೆ, ಅಲ್ಲಿಯವರೆಗೆ ಶವ ಎಲ್ಲಿತ್ತು? ಶವವನ್ನು ಬಚ್ಚಿಟ್ಟಿದ್ದು ಯಾಕೆ? ಇಷ್ಟೆಲ್ಲಾ ಆದರೂ ಪೊಲೀಸರು ಮಾಲೀಕರ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದು ಯಾಕೆ? ಇವೆಲ್ಲಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇನ್ನೂ ಪೋಸ್ಟ್‍ಮಾರ್ಟಂ ರಿಪೋರ್ಟ್ ಬಹಿರಂಗಗೊಂಡಿಲ್ಲ.

ಈಗಲಾದರೂ ಇದನ್ನೊಂದು ಪ್ರತ್ಯೇಕ ಆಕಸ್ಮಿಕ ಘಟನೆ ಎಂದು ನೋಡದೇ, ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ, ಅಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ರೀತಿ, ನಿಗೂಢ ಸಾವುಗಳು ಇದರ ಕುರಿತಂತೆ ಸಮಗ್ರ ತನಿಖೆ ಹಾಗೂ ಕ್ರಮಗಳು ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...