Homeಕರ್ನಾಟಕಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ನಿಗೂಢ ಸಾವುಗಳು

- Advertisement -
- Advertisement -

| ಸೋಮಶೇಖರ್ ಚಲ್ಯ |

ಸಕ್ಕರೆ ನಾಡು ಎನ್ನುವ ಹೆಗ್ಗಳಿಕೆ ಇರುವ ಮಂಡ್ಯ ಈಗೀಗ ಗುರುತಿಸಿಕೊಳ್ಳುತ್ತಿರುವುದು ಹಲವು ಕುಖ್ಯಾತ ಕಾರಣಗಳಿಂದ. ರೈತರ ಆತ್ಮಹತ್ಯೆ, ಹೆಣ್ಣು ಭ್ರೂಣ ಹತ್ಯೆ, ಮರ್ಯಾದಾ ಹತ್ಯೆ, ಜಾತಿಯಾಧಾರಿತ ದೌರ್ಜನ್ಯಗಳ ಕುಖ್ಯಾತಿಯ ಪಟ್ಟಿಯಲ್ಲಿ ಮಂಡ್ಯ ಮೊದಲ ಶ್ರೇಣಿಯಲ್ಲಿರುವುದು ಮಂಡ್ಯದ ಘನತೆಯನ್ನು ಕುಂದಿಸುತ್ತಿದೆ.

ಈ ಪಟ್ಟಿಗೆ ಇನ್ನೊಂದು ಸೇರ್ಪಡೆ, ಕಲ್ಲಿನ ಕ್ವಾರೆಗಳಲ್ಲಿ ನಿಗೂಢ ಸಾವುಗಳು. ಕೆಆರ್‍ಎಸ್ ಸುತ್ತಮುತ್ತಲಿನ ಶ್ರೀರಂಗಪಟ್ಟಣ, ಬೇಬಿ ಬೆಟ್ಟ ಮುಂತಾದ ಹಲವಾರು ಪ್ರದೇಶಗಳಲ್ಲಿ ಅಧಿಕೃತವಾಗಿ ಮತ್ತು ಅನಧಿಕೃತವಾಗಿ ರಾಜಕೀಯ ಬಲ ಹಾಗೂ ತೋಳ್ಬಲಗಳಿಂದ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಇದರಿಂದಾಗಿ ಆ ಪ್ರದೇಶಗಳು ಬಳ್ಳಾರಿಯಂತಹ ಮೈನಿಂಗ್ ತಾಣಗಳಂತೆ ಕಾಣುತ್ತಿದ್ದು, ಮಂಡ್ಯದ ಮತ್ತೊಂದು ಮುಖವನ್ನು ತೆರೆದಿಟ್ಟಿದೆ. ಈ ಗಣಿಗಾರಿಕೆಗಳಿಂದಾಗಿ ಕೆಆರ್‍ಎಸ್ ಅಣೆಕಟ್ಟೆಗೂ ಅಪಾಯ ಬಂದಿದೆಯೆಂದು, ಅದರ ಉಳಿವಿಗಾಗಿ ಮೈನಿಂಗ್ ವಿರುದ್ಧ ಹೋರಾಟಗಳು ನಡೆಯುತ್ತಲೇ ಇವೆ.

ಇದೆಲ್ಲದರ ನಡುವೆ ಕ್ವಾರೆಗಳಲ್ಲಿ ಕೂಲಿ ಕೆಲಸ ಮಾಡುವ ಜನರ ಸಾವುಗಳು ಸರಣಿ ರೀತಿಯಲ್ಲಿ ನಡೆಯುತ್ತಲೇ ಇವೆ. ಆದರೆ ಈ ಸಾವುಗಳಿಗೆ ಕಾರಣವನ್ನು ಕಂಡುಕೊಳ್ಳುವಲ್ಲಿ ಜಿಲ್ಲಾಡಳಿತ ಸೋತಿರುವುದು ಸ್ಥಳೀಯ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿತ್ತು. ಇದೀಗ ಜೂನ್ 20ರ ರಾತ್ರಿ ಮತ್ತೊಬ್ಬ ಕೂಲಿ ಕಾರ್ಮಿಕ ತನ್ನ ಪ್ರಾಣವನ್ನು ಕಳೆದುಕೊಂಡಿದ್ದಾನೆ.

ಶ್ರೀರಂಗಪಟ್ಟಣ ತಾಲ್ಲೂಕಿನ ಚೆನ್ನಕೆರೆ ಗ್ರಾಮದ ಕ್ವಾರೆಯಲ್ಲಿ ರಾತ್ರಿ 11 ಗಂಟೆಯ ವೇಳೆಗೆ ಕಂಪ್ರೆಸರ್ ಮೂಲಕ ಕುಳಿ ತೋಡಲು ಹೋಗಿದ್ದ ಕಾರ್ಮಿಕ ರಾಜು ಸಾವನ್ನಪ್ಪಿದ್ದಾನೆ. ಹಿಂದೆ ಒಂದು ಸಾರಿ ಕಲ್ಲನ್ನು ಸಿಡಿಸಲು ತೆಗೆದಿದ್ದ ಹಳೇ ಕುಳಿಯಲ್ಲಿ ಸಿಡಿಮದ್ದು ತುಂಬಿಯೂ ಅದು ಸಿಡಿದಿರಲಿಲ್ಲ. ಈಗ ಅದೇ ಸಿಡಿಮದ್ದು ತುಂಬಿದ್ದ ಕುಳಿಯಲ್ಲಿ ಮತ್ತೆ ಕುಳಿ ತೆಗೆದು ಸಿಡಿಸಲು ಹೋಗಿದ್ದಾರೆ. ಮೊದಲೇ ತುಂಬಿದ್ದ ಸಿಡಿಮದ್ದು ಕುಳಿ ಹಾಕುತ್ತಿದ್ದಂತೆಯೇ ಸಿಡಿದು ಹೋಗಿದೆ. ಇದರಿಂದ ರಾಜು ಸಾವನ್ನಪ್ಪಿದ್ದಾನೆ, ಆತನ ಸಂಬಂಧಿ ಮುನಿಯಪ್ಪನಿಗೆ ಕೈ ಮುರಿದಿದೆ. ಆದರೆ, ಕ್ವಾರೆಯ ಮಾಲೀಕರಾದ ಮೀನಾಕ್ಷಿ, ನಂಜೇಗೌಡ ಮತ್ತು ಸಂತೋಷ್ ಕಂಪ್ರೇಸರ್ ಟ್ರ್ಯಾಕ್ಟರ್ ಮಗುಚಿ ಆತ ಸಾವಿನ್ನಪ್ಪಿದ್ದಾನೆ ಎಂದು ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿದ್ದಾರೆ ಎಂದು ಪ್ರೊ.ಹುಲ್ಕೆರೆ ಮಹದೇವ ಆರೋಪಿಸಿದ್ದಾರೆ.

ಇಂತಹ ಘಟನೆಗಳು ಮಂಡ್ಯ ಜಿಲ್ಲೆಯ ಕ್ವಾರೆಗಳಲ್ಲಿ ಮೊದಲೇನಲ್ಲ. ರಾಜ್ಯದ ಹಲವಾರು ಹಳ್ಳಿಗಳಿಂದ ಬಡಜನರು ತಮ್ಮ ಬದುಕನ್ನು ಕಟ್ಟಿಕೊಳ್ಳುವ ಸಲುವಾಗಿ ಇಂತಹ ಉದ್ಯೋಗಗಳನ್ನು ಅರಸಿ ಬರುತ್ತಾರೆ. ಅಂತಹ ಜನರಿಗೆ ಒಂದಷ್ಟು ಮೊತ್ತದ ದುಡ್ಡು ಕೊಟ್ಟು ಇಂತಿಷ್ಟು ವರ್ಷಗಳಿಗೆ ಎಂದು ಜೀತದ ರೀತಿಯಲ್ಲಿ ದುಡಿಸಿಕೊಳ್ಳುವುದು ಕ್ವಾರೆಗಳಲ್ಲಿ ಇನ್ನು ತಪ್ಪಿಲ್ಲ. ದಾರುಣ ಬಡತನದಲ್ಲಿರುವ ಜನ ಈಗಲೂ ಜೀತದಾಳುಗಳಾಗಿ ಬಂದು ದುಡಿಯುತ್ತಿದ್ದಾರೆ.

ಇದೇ ಶ್ರೀರಂಗಪಟ್ಟಣ ತಾಲ್ಲೂಕಿನ ಹಂಗರಹಳ್ಳಿಯ ಪ್ರಕರಣಗಳು ಎಲ್ಲರಿಗೂ ನೆನಪಿದ್ದೇ ಇರುತ್ತದೆ. 18 ವರ್ಷಗಳ ಹಿಂದೆ, ಹಂಗರಹಳ್ಳಿಯಲ್ಲಿ ಕಾಲಿಗೆ ಕೋಳ ತೊಡಿಸಿ ಕಾರ್ಮಿಕರು ಎಲ್ಲೂ ಹೋಗದಂತೆ ಒಂದೇ ಕಡೆ ಕಟ್ಟಿ ದುಡಿಸಲಾಗುತ್ತಿತ್ತು. ರೈತಸಂಘವು ಅದನ್ನು ಬಯಲಿಗೆ ತಂದನಂತರ ದೇಶಾದ್ಯಂತ ಸುದ್ದಿ ಆಗಿತ್ತು. ನಂತರದಲ್ಲಿ ಆ ಸಂತ್ರಸ್ತರನ್ನೇ ಹೆದರಿಸಿ, ತಮಗೆ ಸಿನೆಮಾ ಶೂಟಿಂಗ್ ಕಾರಣಕ್ಕೆ ಕೋಳ ತೊಡಿಸಲಾಗಿತ್ತೆಂದು ಸಾಕ್ಷಿ ನುಡಿಸಿದ್ದರು. ಅಂತಿಮವಾಗಿ ಕೇಸು ಬಿದ್ದುಹೋಗಿತ್ತು. ಇಷ್ಟಾದ ನಂತರ ಇದೇ ಹಂಗರಹಳ್ಳಿಯಲ್ಲಿ 2018ರ ಅಕ್ಟೋಬರ್‍ನಲ್ಲಿಯೂ ತನ್ನ ದುಡಿಮೆಯ ಲೆಕ್ಕ ಕೇಳಿದ ಕರಿಯಪ್ಪ ಮಾದರ್ ಎಂಬ ಜೀತಗಾರನನ್ನು ಕೊಂದು ನೇಣುಹಾಕಲಾಗಿತ್ತೆಂದು ಹೇಳಲು ಹಲವು ಸಾಂದರ್ಭಿಕ ಸಾಕ್ಷ್ಯಗಳಿದ್ದವು. ಆಗಲೂ ಪ್ರಕರಣ ಮುಚ್ಚಿಹೋಗದಂತೆ ಸ್ಥಳೀಯ ಹೋರಾಟಗಾರರು ಅದನ್ನು ಬೆಳಕಿಗೆ ತಂದಿದ್ದರು. ಅದೇ ಸಮಯದಲ್ಲಿ ಮದ್ದೂರಿನ ಕುದುರುಗುಂಡಿಯಲ್ಲಿ ದಲಿತ ಮಹಿಳೆಯೊಬ್ಬರನ್ನು ಜೀತಕ್ಕಿರಿಸಿಕೊಂಡು ದುಡಿಸಲಾಗುತ್ತಿತ್ತು. ಆಕೆ ಜೀತವನ್ನು ನಿರಾಕರಿಸಿ ಹೊರಹೋಗಿದ್ದರಿಂದ, ಆಕೆಯನ್ನು ಬಲವಂತವಾಗಿ ಎಳೆದೊಯ್ದಿದ್ದ ಪ್ರಕರಣವೂ ಬೆಳಕಿಗೆ ಬಂದಿತ್ತು. ಈ ಅಮಾನವೀಯ ಕೃತ್ಯಗಳ ಬಗ್ಗೆ ಪತ್ರಿಕೆಯಲ್ಲಿ ವರದಿಯನ್ನೂ ಮಾಡಿದ್ದೆವು.

ಈಗ ನಿಗೂಢವಾಗಿ ಸಾವನ್ನಪ್ಪಿರುವ ರಾಜು ಕೂಡ ಕೊಳ್ಳೆಗಾಲ ತಾಲ್ಲೂಕಿನ ವಡ್ಡಲದೊಡ್ಡಿ ಗ್ರಾಮದಿಂದ ತನ್ನ ಸಂಬಂಧಿ ಮುನಿಯಪ್ಪನ ಜೊತೆ ಬಂದು ಚೆನ್ನಕೆರೆ ಕ್ವಾರೆಯಲ್ಲಿ ಜೀತದಾಳುಗಳಾಗಿ ದುಡಿಯುತ್ತಿದ್ದರು. ರಾತ್ರಿಯ ವೇಳೆಯಲ್ಲಿ ಸಿಡಿಮದ್ದುಗಳನ್ನು ಸಿಡಿಸುವುದರಿಂದ ರಾಜು ಮತ್ತು ಮುನಿಯಪ್ಪ ಕ್ವಾರೆಯಲ್ಲಿ ಕುಳಿ ತೆಗೆಯಲು ಬಂದಿದ್ದಾಗ ಈ ಘಟನೆ ನಡೆದಿದೆ. ಆದರೆ ಪ್ರಕರಣವನ್ನು ಮುಚ್ಚಿಹಾಕುವ ಉದ್ದೇಶದಿಂದ ಆತನ ಶವವನ್ನು ಪೊಲೀಸ್ ಮಹಜರ್ ಮಾಡುವುದಕ್ಕೂ ಮೊದಲೇ ಯಾರಿಗೂ ತಿಳಿಯದಂತೆ ಜಲ್ಲಿ ಕ್ರಷರ್‍ನಲ್ಲಿ ಅಡಗಿಸಿಟ್ಟಿದ್ದಾರೆ. ಕ್ರಷರ್ ಬಳಿಗೆ ಯಾರೂ ಬಾರದಂತೆ ರಸ್ತೆಯಲ್ಲಿ ಗುಂಡಿ ತೋಡಿದ್ದಾರೆ. ಬೆಳಗ್ಗೆಯ ವೇಳೆಗೆ ಆತನ ಕುಟುಂಬಕ್ಕೆ 4.5 ಲಕ್ಷದಷ್ಟು ಹಣ ಕೊಟ್ಟು ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿದ್ದಾರೆ. ಆ ಸಮಯಕ್ಕೆ ಘಟನೆಯ ವಿಷಯ ಅಕ್ಕ-ಪಕ್ಕದವರಿಗೆ ಗೊತ್ತಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.
ಜೂನ್ 21ರಂದು ದಸಂಸ ರಾಜ್ಯ ಸಂಚಾಲಕ ಗುರುಪ್ರಸಾದ್ ಕೆರಗೋಡು ಮತ್ತಿತರ ಹಿರಿಯ ಹೋರಾಟಗಾರರಿಗೆ ವಿಷಯ ತಿಳಿದಿದೆ. ಶ್ರೀರಂಗಪಟ್ಟಣ ತಾಲ್ಲೂಕು ಕಛೇರಿಯ ಮುಂದೆ ಪ್ರತಿಭಟನೆ ನಡೆಸಿ, ತಹಶೀಲ್ದಾರರನ್ನು ವಿಚಾರಿಸಿದ್ದಾರೆ. ತಹಶೀಲ್ದಾರ್ ಆ ವಿಷಯ ತಮಗೆ ತಿಳಿದೇ ಇಲ್ಲವೆಂದು ನಾನಾ ಸಬೂಬು ಹೇಳಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದಾರೆ. ಅರಕೆರೆ ಪೊಲೀಸರೂ ತಮಗೂ ವಿಷಯ ತಿಳಿದಿಲ್ಲವೆಂದು ಹೇಳಿದ್ದಾರೆ. ಆದರೆ ಇಂಥದೊಂದು ಘಟನೆ ನಡೆದಿದೆ, ಮಾಲೀಕರಿಗೆ ಶಿಕ್ಷೆಯಾಗಬೇಕು ಎಂದು ಹೋರಾಟಗಾರರು ಹೇಳುವಾಗ, ಆ ಮಾಲೀಕ ದಲಿತ ಜಾತಿಗೆ ಸೇರಿದವರು ಏನ್ ಮಾಡ್ತಿರಾ ಎಂದು ಅರಕೆರೆ ಪೊಲೀಸ್ ಠಾಣೆಯ ಎಸ್‍ಐ ಹೇಳಿದ್ದಾರೆ. ಇದು ಪೊಲೀಸರು ಕ್ವಾರೆಯ ಮಾಲೀಕರೊಂದಿಗೆ ಸೇರಿ ಪ್ರಕರಣವನ್ನು ಮುಚ್ಚಿಹಾಕುವ ಹುನ್ನಾರ ಮಾಡಲಾಗಿದೆ ಎಂಬುದನ್ನು ತೋರಿಸುತ್ತದೆ ಎಂಬುದು ಅವರ ಆರೋಪ. ಮೊದಲೇ ಈ ವಿಚಾರ ಗೊತ್ತಿದ್ದರೂ ಗೊತ್ತಿಲ್ಲವೆಂಬಂತೆ ನಟಿಸಿರುವುದು ಹಸಿಹಸಿಯಾಗಿ ಬಯಲಾದ ನಂತರ ಅವರು ತಬ್ಬಿಬ್ಬಾದರು ಮತ್ತು ಆಗ ಪೊಲೀಸರು ಮತ್ತು ತಹಶೀಲ್ದಾರರನ್ನು ತರಾಟೆಗೆ ತೆಗೆದುಕೊಂಡೆವೆಂದು ಹೇಳಿದ್ದಾರೆ.

ನಂತರ ಸಂಜೆ 4.30ರ ವೇಳೆಗೆ ಮೈಸೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಶವವನ್ನು ತಂದಿದ್ದಾರೆ. ಅಲ್ಲಿಯವರೆಗೂ ಶವ ಎಲ್ಲಿತ್ತು ಎಂಬ ಸುಳಿವೇ ಸಿಕ್ಕಿಲ್ಲ, ಮಹಜರ್ ಸಹಾ ಮಾಡಲಾಗಿಲ್ಲ. ಆಸ್ಪತ್ರೆಯಲ್ಲಿ ಎಫ್‍ಐಆರ್ ಆಗದೆ ಪೋಸ್ಟ್‍ಮಾರ್ಟಂ ಮಾಡುವುದಿಲ್ಲ ಎಂದು ಹೇಳಿದ ಮೇಲೆ ಅಪಘಾತ ಸಾವು ಎಂದು ಎಫ್‍ಐಆರ್ ಹಾಕಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕಂಪ್ರೆಸರ್ ಟ್ರ್ಯಾಕ್ಟರ್ ಮೇಲಿತ್ತು, ನಾವು ಹೋಗುವ ಸಮಯದಲ್ಲಿ ಅದು ಉರುಳಿಬಿತ್ತು ಎಂದು ಮುನಿಯಪ್ಪ ಹೇಳಿಕೆ ನೀಡಿದ್ದಾನೆ. ಆದರೆ ಈ ಹೇಳಿಕೆಯು ಮಾಲೀಕರ ಮೇಲಿನ ಭಯದಿಂದ ಬಂದಿದೆ ಎಂದು ಹೋರಾಟಗಾರರು ಅನುಮಾನ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಮಹಜರು ಮಾಡದೆ ಮತ್ತು ಎಫ್‍ಐಆರ್ ಹಾಕದೆ ಶವವನ್ನು ಮರಣೋತ್ತರ ಪರೀಕ್ಷೆಗೆ ತಂದಿದ್ದು ಹಲವಾರು ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಮಹಜರ್ ಮಾಡದೇ ಶವವನ್ನ ತೆಗೆದಿದ್ದು ಯಾಕೆ? ಯಾರು ಆ ಸ್ಥಳಕ್ಕೆ ಬಾರದಂತೆ ರಸ್ತೆಯಲ್ಲಿ ಗುಂಡಿ ತೆಗೆದಿದ್ದು ಯಾಕೆ? ಎಫ್‍ಐಆರ್ ದಾಖಲಿಸದೇ ಪೋಸ್ಟ್ ಮಾರ್ಟಮ್‍ಗೆ ತೆಗೆದುಕೊಂಡು ಹೋಗಿದ್ದಾರೆ, ಅಲ್ಲಿಯವರೆಗೆ ಶವ ಎಲ್ಲಿತ್ತು? ಶವವನ್ನು ಬಚ್ಚಿಟ್ಟಿದ್ದು ಯಾಕೆ? ಇಷ್ಟೆಲ್ಲಾ ಆದರೂ ಪೊಲೀಸರು ಮಾಲೀಕರ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದು ಯಾಕೆ? ಇವೆಲ್ಲಾ ಪ್ರಶ್ನೆಗಳು ಹುಟ್ಟಿಕೊಂಡಿವೆ. ಇನ್ನೂ ಪೋಸ್ಟ್‍ಮಾರ್ಟಂ ರಿಪೋರ್ಟ್ ಬಹಿರಂಗಗೊಂಡಿಲ್ಲ.

ಈಗಲಾದರೂ ಇದನ್ನೊಂದು ಪ್ರತ್ಯೇಕ ಆಕಸ್ಮಿಕ ಘಟನೆ ಎಂದು ನೋಡದೇ, ಮಂಡ್ಯ ಜಿಲ್ಲೆಯ ಅಕ್ರಮ ಗಣಿಗಾರಿಕೆ, ಅಲ್ಲಿ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ರೀತಿ, ನಿಗೂಢ ಸಾವುಗಳು ಇದರ ಕುರಿತಂತೆ ಸಮಗ್ರ ತನಿಖೆ ಹಾಗೂ ಕ್ರಮಗಳು ಆಗಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...