Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...