Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...