Homeಮುಖಪುಟಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

ಈಗ ಡೀಸೆಲ್‍ ಕೂಡ ಸೆಂಚುರಿ ಬಾರಿಸಿದೆ! ರಾಜ್ಯದ ಹಲವು ಜಿಲ್ಲೆಗಳಲ್ಲಿ ಶತಕ ದಾಟಿದ ಪೆಟ್ರೋಲ್‍!

- Advertisement -
- Advertisement -

ಮೇ 2ರಂದು ಐದು ರಾಜ್ಯಗಳ ಚುನಾವಣಾ ಫಲಿತಾಂಶ ಬಂದ ನಂತರದಲ್ಲಿ, ಮೇ 4ರಿಂದ ಇಲ್ಲಿವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದ್ದು, ಭಾರತದ ಇತಿಹಾಸದಲ್ಲಿ ಮೊದಲ ಬಾರಿಗೆ ಡೀಸೆಲ್‍ 100 ರೂ ದಾಟುವ ಮೂಲಕ ಇಂಧನ ದರಗಳು ಹೊಸ ಐತಿಹಾಸಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ.

ಇಂಧನ ದರದಲ್ಲಿ ಮತ್ತೊಂದು ಏರಿಕೆಯ ನಂತರ ಡೀಸೆಲ್ ಬೆಲೆ ಇಂದು ರಾಜಸ್ಥಾನದಲ್ಲಿ ಲೀಟರ್‌ಗೆ 100 ರೂ. ದಾಟಿ ‘ದಾಖಲೆ’ ಬರೆದಿದೆ.

ಈ ಏರಿಕೆ ಕಾರಣಕ್ಕೆ ಪೆತ್ರೋಲ್‍ ದರ 100 ರೂ. ದಾಟಿದ 7 ರಾಜ್ಯಗಳ ಪಟ್ಟಿಗೆ ಕರ್ನಾಟಕವೂ ಸೇರಿಕೊಂಡಿದೆ. ಹಾಗೆ ನೋಡಿದರೆ, ಕಳೆದ ಸಲದ ಏರಿಕೆಯಲ್ಲೇ ಬಳ್ಳಾರಿ ಮತ್ತು ಶಿರಸಿಯಲ್ಲಿ ಪೆಟ್ರೋಲ್‍ 100ರ ಗಡಿ ದಾಟಿತ್ತು.

ಸರ್ಕಾರಿ ಸ್ವಾಮ್ಯದ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ ಇಂದು ಪೆಟ್ರೋಲ್ ಬೆಲೆಯನ್ನು ಲೀಟರ್‌ಗೆ 27 ಪೈಸೆ ಮತ್ತು ಡೀಸೆಲ್ ದರವನ್ನು 23 ಪೈಸೆ ಹೆಚ್ಚಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ದರ ಸಾರ್ವಕಾಲಿಕ ಗರಿಷ್ಠ ಮಟ್ಟ ತಲುಪಿದ್ದು, ಲೀಟರ್‌ಗೆ  96.12 ರೂ ಇದ್ದರೆ, ಡೀಸೆಲ್ ದರ 86.98 ರೂ ಇದೆ.

ಸ್ಥಳೀಯ ತೆರಿಗೆಗಳಾದ ವ್ಯಾಟ್ ಮತ್ತು ಸರಕು ಶುಲ್ಕದ ಆಧಾರದ ಮೇಲೆ ಇಂಧನ ಬೆಲೆಗಳು ರಾಜ್ಯದಿಂದ ರಾಜ್ಯಕ್ಕೆ ಭಿನ್ನವಾಗಿರುತ್ತವೆ.

ರಾಜಸ್ಥಾನ, ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಮತ್ತು ಲಡಾಖ್ – ಈ ಆರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪೆಟ್ರೋಲ್ ಪ್ರತಿ ಲೀಟರ್‌ಗೆ  100 ರೂ.ಗಿಂತ ಹೆಚ್ಚಿನ ದರಕ್ಕೆ ಮಾರಾಟವಾಗುತ್ತಿದೆ.

ಈಗ ಕರ್ನಾಟಕವೂ ಈ ಲಿಸ್ಟಿಗೆ ಸೇರ್ಪಡೆಯಾಗಿದ್ದು, ಬೀದರ್, ಬಳ್ಳಾರಿ, ಕೊಪ್ಪಳ, ದಾವಣಗೆರೆ, ಶಿರಸಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಅನೇಕ ನಗರಗಳಲ್ಲಿ ಪೆಟ್ರೋಲ್‍ ದರ 100 ರೂ. ದಾಟಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 99.39  ಮತ್ತು ಡೀಸೆಲ್ 92.27 ರೂಗಳಿಗೆ ತಲುಪಿವೆ.

ಭಾರತ-ಪಾಕಿಸ್ತಾನ ಗಡಿಯ ಸಮೀಪವಿರುವ ರಾಜಸ್ಥಾನದ ಶ್ರೀಗಂಗನಗರ ಜಿಲ್ಲೆಯು ಫೆಬ್ರವರಿ ಮಧ್ಯದಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದ ಮೊದಲ ಪ್ರದೇಶವಾಗಿದೆ. ಇವತ್ತು ಶನಿವಾರ ಡೀಸೆಲ್ ಕೂಡ ಇಲ್ಲಿ ಸೆಂಚುರಿ ಬಾರಿಸಿ ಸಾರ್ವಕಾಲಿಕ ದಾಖಲೆ ಬರೆದಿದೆ.

ರಾಜಸ್ತಾನದ ನಗರಗಳಲ್ಲಿ ಪೆಟ್ರೋಲ್  107.22 ರೂ.ಗೆ ಮಾರಾಟವಾಗುತ್ತಿದೆ. ಇದು ದೇಶದಲ್ಲೇ ಗರಿಷ್ಠ ದರವಾಗಿದೆ. ಇವತ್ತಿನಿಂದ ನಗರಗಳಲ್ಲಿ ಡೀಸೆಲ್ 100.05 ರೂ.ಗೆ ಮಾರಾಟವಾಗುತ್ತಿದೆ. ಪಟ್ಟಣಗಳಲ್ಲಿ ಪ್ರೀಮಿಯಂ ಅಥವಾ ಸಂಯೋಜಕ ಪೆಟ್ರೋಲ್ ಲೀಟರ್‌ಗೆ. 110.50 ರೂ, ಮತ್ತು ಡೀಸೆಲ್ 103.72 ರೂ.ಗೆ  ಮಾರಾಟವಾಗುತ್ತಿವೆ.

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ರಾಜಸ್ಥಾನ  ಸರ್ಕಾರವು ಅತಿ ಹೆಚ್ಚು ವ್ಯಾಟ್ ವಿಧಿಸುತ್ತಿದ್ದು, ನಂತರದ ಸ್ಥಾನದಲ್ಲಿ ಮಧ್ಯಪ್ರದೇಶ, ಮಹಾರಾಷ್ಟ್ರ, ಆಂಧ್ರಪ್ರದೇಶ ಮತ್ತು ತೆಲಂಗಾಣಗಳಿವೆ.

ಮೇ 29ರಂದು ಮುಂಬೈ ಪೆಟ್ರೋಲ್‍ ದರ 100 ರೂ. ದಾಟಿದ ಮೊದಲ ಮೆಟ್ರೋ ನಗರವಾಯಿತು. ಪೆಟ್ರೋಲ್ ಈಗ ಮುಂಬೈನಲ್ಲಿ 102.02 ರೂ.ಗೆ ಮತ್ತು ಡೀಸೆಲ್ 94.39 ರೂ.ಗೆ  ಮಾರಾಟವಾಗುತ್ತಿವೆ.

ಲೇಹ್ ನಂತರ, ಶ್ರೀನಗರ ಕೂಡ ಪೆಟ್ರೋಲ್‌ ದರದಲ್ಲಿ  100 ರೂ. (ರೂ. 99.27 ರೂ) ಹತ್ತಿರ ಬಂದಿದೆ. ಹೈದರಾಬಾದ್‍ನಲ್ಲಿ ಕೂಡ ಪೆಟ್ರೋಲ್ ದರ 99.96 ರೂ,ಗೆ ತಲುಪಿದೆ.

ಪೆಟ್ರೋಲ್ ಲೇಹ್‌ನಲ್ಲಿ 101.73 ರೂ.ಗೆ ಮತ್ತು ಡೀಸೆಲ್ 93.66 ರೂ.ಗೆ ಮಾರಾಟವಾಗುತ್ತಿವೆ.

ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಕೊನೆಯ ಸುತ್ತಿನ ಮತದಾನಕ್ಕೂ ಮೊದಲು ಸರ್ಕಾರಿ  ಸ್ವಾಮ್ಯದ ತೈಲ ಸಂಸ್ಥೆಗಳು ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ಕಾಯ್ದುಕೊಂಡಿದ್ದವು. ಮೇ 2ರಂದು ಫಲಿತಾಂಶ  ಘೋಷಣೆಯಾಗಿತು. ಮೇ 4ರಿಂದ  ಇವತ್ತಿನವರೆಗೆ 23 ಸಲ ಇಂಧನ ದರ ಏರಿಕೆ ಮಾಡಲಾಗಿದೆ.

ಈ 23 ಹೆಚ್ಚಳಗಳಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 5.72 ರೂ. ಮತ್ತು ಡೀಸೆಲ್  6.25 ರೂಗಳಷ್ಟು ಏರಿಕೆಯಾಗಿದೆ.

ಹಿಂದಿನ 15 ದಿನಗಳಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಂಧನದ ಸರಾಸರಿ ಬೆಲೆ ಮತ್ತು ವಿದೇಶಿ ವಿನಿಮಯ ದರಗಳ ಆಧಾರದ ಮೇಲೆ ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಪರಿಷ್ಕರಿಸುತ್ತವೆ.

ಸದ್ಯ ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ದರ ಸ್ಥಿರವಾಗಿ ಕಂಡುಬಂದರೂ, ದೇಶದಲ್ಲಿ ಇಂಧನ ದರ ಏರಿಕೆಯಾಗುತ್ತಿದೆ.

ದೆಹಲಿಯಲ್ಲಿ, ಜೂನ್ 1 ರ ಅಧಿಕೃತ ಮಾಹಿತಿಯ ಪ್ರಕಾರ, ಪೆಟ್ರೋಲ್‍ ದರದಲ್ಲಿ ಕೇಂದ್ರ ಮತ್ತು ರಾಜ್ಯ ತೆರಿಗೆಗಳ ಪಾಲು ಶೇ. 34.8 ಮತ್ತು ಶೇ. 23.08 ರಷ್ಟಿದೆ. ಡೀಸೆಲ್‍ನಲ್ಲಿ ಕೇಂದ್ರ ತೆರಿಗೆಗಳು ಶೇ. 37.24ಕ್ಕಿಂತ ಹೆಚ್ಚಿದ್ದರೆ, ರಾಜ್ಯ ತೆರಿಗೆಗಳು ಶೇ. 14.64 ರಷ್ಟಿದೆ.  ಇದು ವಿವಿಧ ರಾಜ್ಯಗಳಲ್ಲಿ ವಿಭಿನ್ನವಾಗಿದೆ.


ಇದನ್ನೂ ಓದಿ: ಅತಿ ಶ್ರೀಮಂತರ ಮೇಲೆ ’ಕೋವಿಡ್ ತೆರಿಗೆ’ ವಿಧಿಸಲೇಬೇಕಿದೆ: ವಿಕಾಸ್ ಮೌರ್‍ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...